AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘4 ವರ್ಷಗಳ ಹಿಂದೆ ಹೇಳಿದ್ದರೆ ಬದಲಾವಣೆ ಆಗುತ್ತಿತ್ತು’; ಪಿಎಂ ಮೋದಿ ಸೂಚನೆಗೆ ಅನುರಾಗ್ ಕಶ್ಯಪ್ ಪ್ರತಿಕ್ರಿಯೆ

ಪಿಎಂ ಮೋದಿ ಹೇಳಿಕೆಗೆ ಸಂಬಂಧಿಸಿ ಅನುರಾಗ್ ಕಶ್ಯಪ್ ಅವರು ಮಾತನಾಡಿದ್ದಾರೆ. ಈ ಸೂಚನೆಯನ್ನು ನರೇಂದ್ರ ಮೋದಿ ಅವರು ನಾಲ್ಕು ವರ್ಷಗಳ ಹಿಂದೆ ನೀಡಬೇಕಿತ್ತು ಎಂದು ಹೇಳಿದ್ದಾರೆ.  

‘4 ವರ್ಷಗಳ ಹಿಂದೆ ಹೇಳಿದ್ದರೆ ಬದಲಾವಣೆ ಆಗುತ್ತಿತ್ತು’; ಪಿಎಂ ಮೋದಿ ಸೂಚನೆಗೆ ಅನುರಾಗ್ ಕಶ್ಯಪ್ ಪ್ರತಿಕ್ರಿಯೆ
ಅನುರಾಗ್ ಕಶ್ಯಪ್​-ಪಿಎಂ ಮೋದಿ
TV9 Web
| Edited By: |

Updated on: Jan 20, 2023 | 1:04 PM

Share

ನಿರ್ದೇಶಕ, ನಿರ್ಮಾಪಕ ಅನುರಾಗ್ ಕಶ್ಯಪ್ (Anurag Kashyap) ಅವರು ಸಿನಿಮಾ ಜತೆಗೆ ಸಮಾಜದ ಆಗುಹೋಗುಗಳ ಬಗ್ಗೆ ಮಾತನಾಡುತ್ತಿರುತ್ತಾರೆ. ಅನೇಕ ಬಾರಿ ಅವರು ಸರ್ಕಾರವನ್ನು ಟೀಕಿಸಿ ಸುದ್ದಿ ಆಗಿದ್ದಿದೆ. ಈಗ ಅವರು ಮತ್ತೆ ಚರ್ಚೆ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ ಸೂಚನೆ ವಿಚಾರವನ್ನು ಅನುರಾಗ್ ಕಶ್ಯಪ್ ಟೀಕಿಸಿದ್ದಾರೆ. ಅನುರಾಗ್ ಕಶ್ಯಪ್ ನೀಡಿದ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ್ದ ಮೋದಿ ಅವರು ಕಾರ್ಯಕರ್ತರಿಗೆ ಸೂಚನೆ ಒಂದನ್ನು ನೀಡಿದ್ದರು ಎಂದು ವರದಿ ಆಗಿತ್ತು. ‘ಸಂಬಂಧ ಇಲ್ಲದ ಅದರಲ್ಲೂ ಮುಖ್ಯವಾಗಿ ಸಿನಿಮಾಗೆ ಸಂಬಂಧಿಸಿ ಹೇಳಿಕೆ ನೀಡಬೇಡಿ. ಇದರಿಂದ ಅಭಿವೃದ್ಧಿ ಅಜೆಂಡಾ ಹಿಂದೆ ಸರಿಯುತ್ತದೆ’ ಎಂದು ಕಾರ್ಯಕರ್ತರಿಗೆ ಹೇಳಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಅನುರಾಗ್ ಕಶ್ಯಪ್ ಅವರು ಮಾತನಾಡಿದ್ದಾರೆ. ಈ ಸೂಚನೆಯನ್ನು ನರೇಂದ್ರ ಮೋದಿ ಅವರು ನಾಲ್ಕು ವರ್ಷಗಳ ಹಿಂದೆ ನೀಡಬೇಕಿತ್ತು ಎಂದು ಹೇಳಿದ್ದಾರೆ.

‘ನಾಲ್ಕು ವರ್ಷಗಳ ಹಿಂದೆ ಅವರು ಇದನ್ನು ಹೇಳಿದ್ದರೆ, ಅದರಿಂದ ವ್ಯತ್ಯಾಸ ಉಂಟಾಗುತ್ತಿತ್ತು. ಈಗ, ಅವರ ಹೇಳಿಕೆಯಿಂದ ಬದಲಾವಣೆ ಆಗುತ್ತದೆ ಎಂದು ನನಗೆ ಅನ್ನಿಸುವುದಿಲ್ಲ.  ಈಗ ಎಲ್ಲವೂ ಕೈ ಮೀರಿ ಹೋಗಿವೆ. ಯಾರೂ ಯಾರ ಮಾತನ್ನೂ ಕೇಳುವುದಿಲ್ಲ’ ಎಂದು ಅನುರಾಗ್​ ಕಶ್ಯಪ್​ ಅವರು ಹೇಳಿದ್ದಾರೆ. ‘ಆಲ್ಮೋಸ್ಟ್ ಪ್ಯಾರ್ ವಿತ್ ಡಿಜೆ ಮೊಹಾಬತ್’ ಚಿತ್ರದ ಟ್ರೇಲರ್ ಲಾಂಚ್ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ.  ಈ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ. ಇನ್ನೂ ಕೆಲವರು ಇದನ್ನು ಒಪ್ಪಿಲ್ಲ.

ಇದನ್ನೂ ಓದಿ: ಕಾಂತಾರ& ಚಿತ್ರದ ಯಶಸ್ಸಿನ ಬಳಿಕ ಆ ಒಂದು ತಪ್ಪು ಮಾಡಬೇಡಿ; ರಿಷಬ್​ ಶೆಟ್ಟಿಗೆ ಸಲಹೆ ನೀಡಿದ ಅನುರಾಗ್ ಕಶ್ಯಪ್

ಬಿಜೆಪಿಯ ಅನೇಕ ನಾಯಕರು ‘ಪಠಾಣ್​’ ಸಿನಿಮಾ ಬಗ್ಗೆ ಹೇಳಿಕೆ ನೀಡುತ್ತಲೇ ಇದ್ದಾರೆ. ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟ ಬಗ್ಗೆ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಈ ವಿಚಾರದಲ್ಲಿ ಅನೇಕ ಬಿಜೆಪಿ ನಾಯಕರು ನೀಡಿದ ಹೇಳಿಕೆ ವಿವಾದ ಸೃಷ್ಟಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ