AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸಲು ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ್ದಾರೆ. ಮೋಹನ್​ಲಾಲ್, ಆರ್. ಮಾಧವನ್, ಶ್ರೇಯಾ ಘೋಷಾಲ್ ಮುಂತಾದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು, ಕ್ರೀಡಾಪಟುಗಳು ಈ ಅಭಿಯಾನಕ್ಕೆ ಬೆಂಬಲ ನೀಡುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ
ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಕೈ ಜೋಡಿಸಿದ ಚಿತ್ರರಂಗ
ರಾಜೇಶ್ ದುಗ್ಗುಮನೆ
|

Updated on: Feb 25, 2025 | 11:01 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೊಜ್ಜಿನ ವಿರುದ್ಧ ಸಮರ ಸಾರಿದ್ದಾರೆ. ದೇಶದಲ್ಲಿ ಏರುತ್ತಿರುವ ಸ್ಥೂಲಕಾಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕುತ್ತಿದ್ದಾರೆ. ಈ ಆಂದೋಲನಕ್ಕೆ ಸಿನಿಮಾ ರಂಗದವರನ್ನು ರಾಯಭಾರಿ ಆಗಿಆಯ್ಕೆ ಮಾಡಿದ್ದಾರೆ. ಮಲಯಾಳಂ ನಟ ಮೋಹನ್​ಲಾಲ್, ಆರ್​ ಮಾಧವನ್ ಹಾಗೂ ಗಾಯಕಿ ಶ್ರೇಯಾ ಘೋಷಾಲ್ ಅವರನ್ನು ಈ ಆಂದೋಲನಕ್ಕೆ ಕರೆ ತಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೊಜ್ಜಿನ ಸಮಸ್ಯೆ ವಿರುದ್ಧ ಸಮರ ಸಾರಿದ್ದಾರೆ. ಈ ಕಾರಣಕ್ಕೆ ರಾಜಕಾರಣಿಗಳು, ಕ್ರೀಡಾಪಟುಗಳು, ಉದ್ಯಮಿಗಳನ್ನು ಈ ಕ್ಯಾಂಪೇನ್​​ಗೆ ಆಯ್ಕೆ ಮಾಡಿದ್ದಾರೆ. ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ, ಉದ್ಯಮಿ ಆನಂದ್ ಮಹಿಂದ್ರಾ, ವೇಟ್​ಲಿಫ್ಟರ್ ಮೀರಾಬಾಯ್​ ಚನು, ಇನ್​ಫೋಸಿಸ್ ಸಹ ಸಂಸ್ಥಾಪಕ ನಂದನ್ ನೀಲೆಕಣಿ, ಸುಧಾ ಮೂರ್ತಿ, ಶೂಟರ್ ಮನು ಭಾಕರ್​ ಮೊದಲಾದವರು ಲಿಸ್ಟ್​ನಲ್ಲಿ ಇದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ‘ಮನ್​ಕಿಬಾತ್​ನಲ್ಲಿ ಹೇಳಿದಂತೆ ಬೊಜ್ಜಿನ ವಿರುದ್ಧದ ಹೋರಾಟವನ್ನು ಬಲಪಡಿಸಲು ಮತ್ತು ಆಹಾರದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜಾಗೃತಿ ಮೂಡಿಸಲು ನಾನು ಈ ಕೆಳಗಿನ ಜನರನ್ನು ನಾಮನಿರ್ದೇಶನ ಮಾಡಲು ಬಯಸುತ್ತೇನೆ. ನಮ್ಮ ಚಳುವಳಿ ದೊಡ್ಡದಾಗಲು ತಲಾ 10 ಜನರನ್ನು ಅವರು ನಾಮನಿರ್ದೇಶನ ಮಾಡಬೇಕು ಎಂಬುದು ನನ್ನ ವಿನಂತಿ’ ಎಂದು ಮೋದಿ ಟ್ವೀಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Mann ki Baat: ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದ ಮೋದಿ, ಡಾ. ದೇವಿಶೆಟ್ಟಿ ಕೊಟ್ಟ ಸಲಹೆಗಳೇನು?

ಭಾರತದಲ್ಲಿ ಇತ್ತೀಚೆಗೆ ಸ್ಥೂಲಕಾಯ ಸಮಸ್ಯೆ ಹೆಚ್ಚಿದೆ. ಎಂಟರಲ್ಲಿ ಒಬ್ಬರು ಈ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ವರದಿ ಹೇಳುತ್ತದೆ. ‘ಫಿಟ್ ಮತ್ತು ಆರೋಗ್ಯಕರ ರಾಷ್ಟ್ರವಾಗಲು ನಾವು ಸ್ಥೂಲಕಾಯದ ಸಮಸ್ಯೆಯನ್ನು ನಿಭಾಯಿಸಬೇಕು. ಒಂದು ಅಧ್ಯಯನದ ಪ್ರಕಾರ, ಇಂದು ಪ್ರತಿ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ’ ಎಂದು ಮೋದಿ ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್