AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದಲ್ಲಿ ಹೆಚ್ಚುತ್ತಿರುವ ಸ್ಥೂಲಕಾಯ ಸಮಸ್ಯೆಯನ್ನು ಎದುರಿಸಲು ರಾಷ್ಟ್ರವ್ಯಾಪಿ ಅಭಿಯಾನ ಆರಂಭಿಸಿದ್ದಾರೆ. ಮೋಹನ್​ಲಾಲ್, ಆರ್. ಮಾಧವನ್, ಶ್ರೇಯಾ ಘೋಷಾಲ್ ಮುಂತಾದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು, ಕ್ರೀಡಾಪಟುಗಳು ಈ ಅಭಿಯಾನಕ್ಕೆ ಬೆಂಬಲ ನೀಡುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಪ್ರಧಾನಿ ಮೋದಿ ಜೊತೆ ಕೈ ಜೋಡಿಸಿದ ಚಿತ್ರರಂಗ
ಬೊಜ್ಜಿನ ಸಮಸ್ಯೆ ವಿರುದ್ಧದ ಸಮರಕ್ಕೆ ಕೈ ಜೋಡಿಸಿದ ಚಿತ್ರರಂಗ
ರಾಜೇಶ್ ದುಗ್ಗುಮನೆ
|

Updated on: Feb 25, 2025 | 11:01 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೊಜ್ಜಿನ ವಿರುದ್ಧ ಸಮರ ಸಾರಿದ್ದಾರೆ. ದೇಶದಲ್ಲಿ ಏರುತ್ತಿರುವ ಸ್ಥೂಲಕಾಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮ ಹಾಕುತ್ತಿದ್ದಾರೆ. ಈ ಆಂದೋಲನಕ್ಕೆ ಸಿನಿಮಾ ರಂಗದವರನ್ನು ರಾಯಭಾರಿ ಆಗಿಆಯ್ಕೆ ಮಾಡಿದ್ದಾರೆ. ಮಲಯಾಳಂ ನಟ ಮೋಹನ್​ಲಾಲ್, ಆರ್​ ಮಾಧವನ್ ಹಾಗೂ ಗಾಯಕಿ ಶ್ರೇಯಾ ಘೋಷಾಲ್ ಅವರನ್ನು ಈ ಆಂದೋಲನಕ್ಕೆ ಕರೆ ತಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೊಜ್ಜಿನ ಸಮಸ್ಯೆ ವಿರುದ್ಧ ಸಮರ ಸಾರಿದ್ದಾರೆ. ಈ ಕಾರಣಕ್ಕೆ ರಾಜಕಾರಣಿಗಳು, ಕ್ರೀಡಾಪಟುಗಳು, ಉದ್ಯಮಿಗಳನ್ನು ಈ ಕ್ಯಾಂಪೇನ್​​ಗೆ ಆಯ್ಕೆ ಮಾಡಿದ್ದಾರೆ. ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ, ಉದ್ಯಮಿ ಆನಂದ್ ಮಹಿಂದ್ರಾ, ವೇಟ್​ಲಿಫ್ಟರ್ ಮೀರಾಬಾಯ್​ ಚನು, ಇನ್​ಫೋಸಿಸ್ ಸಹ ಸಂಸ್ಥಾಪಕ ನಂದನ್ ನೀಲೆಕಣಿ, ಸುಧಾ ಮೂರ್ತಿ, ಶೂಟರ್ ಮನು ಭಾಕರ್​ ಮೊದಲಾದವರು ಲಿಸ್ಟ್​ನಲ್ಲಿ ಇದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ‘ಮನ್​ಕಿಬಾತ್​ನಲ್ಲಿ ಹೇಳಿದಂತೆ ಬೊಜ್ಜಿನ ವಿರುದ್ಧದ ಹೋರಾಟವನ್ನು ಬಲಪಡಿಸಲು ಮತ್ತು ಆಹಾರದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವ ಕುರಿತು ಜಾಗೃತಿ ಮೂಡಿಸಲು ನಾನು ಈ ಕೆಳಗಿನ ಜನರನ್ನು ನಾಮನಿರ್ದೇಶನ ಮಾಡಲು ಬಯಸುತ್ತೇನೆ. ನಮ್ಮ ಚಳುವಳಿ ದೊಡ್ಡದಾಗಲು ತಲಾ 10 ಜನರನ್ನು ಅವರು ನಾಮನಿರ್ದೇಶನ ಮಾಡಬೇಕು ಎಂಬುದು ನನ್ನ ವಿನಂತಿ’ ಎಂದು ಮೋದಿ ಟ್ವೀಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Mann ki Baat: ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದ ಮೋದಿ, ಡಾ. ದೇವಿಶೆಟ್ಟಿ ಕೊಟ್ಟ ಸಲಹೆಗಳೇನು?

ಭಾರತದಲ್ಲಿ ಇತ್ತೀಚೆಗೆ ಸ್ಥೂಲಕಾಯ ಸಮಸ್ಯೆ ಹೆಚ್ಚಿದೆ. ಎಂಟರಲ್ಲಿ ಒಬ್ಬರು ಈ ಸಮಸ್ಯೆಗೆ ಒಳಗಾಗಿದ್ದಾರೆ ಎಂದು ವರದಿ ಹೇಳುತ್ತದೆ. ‘ಫಿಟ್ ಮತ್ತು ಆರೋಗ್ಯಕರ ರಾಷ್ಟ್ರವಾಗಲು ನಾವು ಸ್ಥೂಲಕಾಯದ ಸಮಸ್ಯೆಯನ್ನು ನಿಭಾಯಿಸಬೇಕು. ಒಂದು ಅಧ್ಯಯನದ ಪ್ರಕಾರ, ಇಂದು ಪ್ರತಿ ಎಂಟು ಜನರಲ್ಲಿ ಒಬ್ಬರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ’ ಎಂದು ಮೋದಿ ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ