AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoj Muntashir: ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದ ಲೇಖಕನಿಗೆ ಕೊಲೆ ಬೆದರಿಕೆ; ಭದ್ರತೆ ನೀಡಿದ ಮುಂಬೈ ಪೊಲೀಸರು

Adipurush Movie Controversy: ಮನೋಜ್​ ಮುಂತಶೀರ್​ ಅವರನ್ನು ಕೊಲೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಭದ್ರತೆಗಾಗಿ ಪೊಲೀಸರ ಬಳಿ ಮನವಿ ಮಾಡಿಕೊಂಡರು.

Manoj Muntashir: ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದ ಲೇಖಕನಿಗೆ ಕೊಲೆ ಬೆದರಿಕೆ; ಭದ್ರತೆ ನೀಡಿದ ಮುಂಬೈ ಪೊಲೀಸರು
ಮನೋಜ್​ ಮುಂತಶೀರ್​, ಪ್ರಭಾಸ್
ಮದನ್​ ಕುಮಾರ್​
|

Updated on: Jun 20, 2023 | 7:10 PM

Share

ರಾಮಾಯಣದ ಕಥೆ ಆಧರಿಸಿದ ‘ಆದಿಪುರುಷ್​’ (Adipurush) ಸಿನಿಮಾದಿಂದ ಆಗುತ್ತಿರುವ ವಿವಾದಗಳು ಒಂದೆರಡಲ್ಲ. ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದಾರೆ. ಸೈಫ್​ ಅಲಿ ಖಾನ್​ ಅವರಿಗೆ ರಾವಣನ ಪಾತ್ರವಿದೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇಡೀ ಸಿನಿಮಾದಲ್ಲಿ ಬಳಕೆ ಆಗಿರುವ ಭಾಷೆಯ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ. ಅಲ್ಲದೇ ಒಟ್ಟಾರೆಯಾಗಿ ಈ ಚಿತ್ರದಲ್ಲಿ ರಾಮಾಯಣದ (Ramayana) ಕಥೆಯನ್ನು ಹಾಗೂ ಅದರ ಪಾತ್ರಗಳನ್ನು ಅಸಂಬದ್ಧವಾಗಿ ತೋರಿಸಲಾಗಿದೆ ಎಂಬ ಕಾರಣಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್ (Manoj Muntashir)​ ಅವರಿಗೆ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರಿಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ. ‘ಆದಿಪುರುಷ್​’ ಸಿನಿಮಾಗೆ ಸಂಬಂಧಿಸಿದಂತೆ ಇಂಥ ಅನೇಕ ಘಟನೆಗಳು ನಡೆಯುತ್ತಿವೆ.

ಪೌರಾಣಿಕ ಕಥೆಗಳಲ್ಲಿ ಸಂಭಾಷಣೆಯ ಸ್ವರೂಪ ತುಂಬ ಭಿನ್ನವಾಗಿರುತ್ತದೆ. ಹಾದಿಬೀದಿಯಲ್ಲಿ ಜನರು ಮಾತನಾಡುವ ರೀತಿಯಲ್ಲಿ ರಾಮಾಯಣದ ಪಾತ್ರಗಳು ಮಾತನಾಡುವುದಿಲ್ಲ. ಆದರೆ ‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರಕ್ಕೆ ಮನೋಜ್​ ಮುಂತಶೀರ್​ ಬರೆದ ಸಂಭಾಷಣೆಗಳು ತೀರಾ ಕಳಪೆ ಆಗಿವೆ ಎಂದು ಅನೇಕರು ದೂರಿದ್ದಾರೆ. ಅಲ್ಲದೇ ‘ನಾವು ರಾಮಾಯಣ ಆಧರಿಸಿ ಈ ಸಿನಿಮಾ ಮಾಡಿಲ್ಲ’ ಎಂದು ಮನೋಜ್ ಅವರು ಮಾತು ಬದಲಿಸಿದ್ದು ಕೂಡ ಜನರ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: Adipurush Collection: ಸೋಮವಾರ ಮುಗ್ಗರಿಸಿತು ‘ಆದಿಪುರುಷ್​’ ಕಲೆಕ್ಷನ್​; ನೆಗೆಟಿವ್​ ವಿಮರ್ಶೆಗೆ ಪ್ರಭಾಸ್​ ಸಿನಿಮಾ ತತ್ತರ

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಕ್ಷತ್ರಿಯಾ ಕರ್ಣಿ ಸೇನಾದವರು ಸುದ್ದಿಗೋಷ್ಠಿ ನಡೆಸಿದ್ದರು. ‘ಆದಿಪುರುಷ್​’ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್​ ಹಾಗೂ ನಿರ್ದೇಶಕ ಓಂ ರಾವತ್​ ಅವರನ್ನು ಕೊಲೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೋಜ್​ ಮುಂತಶೀರ್​ ಅವರು ಭದ್ರತೆಗಾಗಿ ಪೊಲೀಸರ ಬಳಿ ಮನವಿ ಮಾಡಿಕೊಂಡರು. ಹಾಗಾಗಿ ಅವರಿಗೆ ಮುಂಬೈ ಪೊಲೀಸರು ಭದ್ರತೆ ನೀಡಿದ್ದಾರೆ. ಆಕ್ಷೇಪಾರ್ಹ ಎನಿಸಿದ ಡೈಲಾಗ್​ಗಳನ್ನು ಬದಲಿಸಲು ಚಿತ್ರತಂಡ ಒಪ್ಪಿಕೊಂಡಿದೆ.

ಇದನ್ನೂ ಓದಿ: Adipurush: ‘ಬ್ರಾಹ್ಮಣನಾದ ರಾವಣ ಈ ಚಿತ್ರದಲ್ಲಿ ಮಾಂಸ ಮುಟ್ಟಿದ್ದು ತಪ್ಪು’: ‘ಆದಿಪುರುಷ್​’ ಬ್ಯಾನ್​ಗೆ ನೆಟ್ಟಿಗರ ಒತ್ತಾಯ

ದೇಶಾದ್ಯಂತ ‘ಆದಿಪುರುಷ್​’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಕೂಡ ಕೆಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ನೇಪಾಳದಲ್ಲಿ ಈ ಸಿನಿಮಾದ ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ. ರಾಮಾಯಣವನ್ನು ಮನಬಂದಂತೆ ತೋರಿಸಿದ್ದು ಸರಿಯಲ್ಲ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದ ದೃಶ್ಯಗಳು, ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಇದನ್ನು ನೋಡಿ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್