AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ

Pathaan Movie | Bajrang Dal: ಭಜರಂಗ ದಳದ ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ಇತ್ತೀಚೆಗೆ ನಡೆದಿದೆ. ಆ ಕುರಿತ ಸುದ್ದಿಗೆ ನಟಿ ಪೂಜಾ ಭಟ್​ ಪ್ರತಿಕ್ರಿಯೆ ನೀಡಿದ್ದಾರೆ.

Pooja Bhatt: ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸವಿದೆ’: ‘ಪಠಾಣ್​’ ವಿರುದ್ಧ ಭಜರಂಗ ದಳದ ವರ್ತನೆಗೆ ಪೂಜಾ ಭಟ್​ ಖಂಡನೆ
ಪೂಜಾ ಭಟ್ - ಭಜರಂಗ ದಳದ ಕಾರ್ಯಕರ್ತರ ದಾಂಧಲೆ
TV9 Web
| Updated By: ಮದನ್​ ಕುಮಾರ್​|

Updated on:Jan 06, 2023 | 5:37 PM

Share

ನಟ ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ (Pathaan Movie) ಚಿತ್ರಕ್ಕೆ ಹಿಂದೂ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಗುಜರಾತ್​ನಲ್ಲಿ ಭಜರಂಗ ದಳದ (Bajrang Dal) ಕಾರ್ಯಕರ್ತರು ಈ ಸಿನಿಮಾದ ಪೋಸ್ಟರ್​ಗಳನ್ನು ಕಿತ್ತು ಹಾಕಿದ ಘಟನೆ ನಡೆದಿದೆ. ಅದರ ವಿಡಿಯೋ ವೈರಲ್​ ಆಗಿದ್ದು, ಆ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಾಲಿವುಡ್​ ನಟಿ ಪೂಜಾ ಭಟ್​ ಅವರು ಈ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಪಠಾಣ್​’ ಸಿನಿಮಾ ವಿರುದ್ಧ ಭಜರಂಗ ದಳದವರು ಪ್ರತಿಭಟನೆ ಮಾಡಿದ್ದಾರೆ ಎಂದು ಎಎನ್​ಐ ನ್ಯೂಸ್​ ಏಜೆನ್ಸಿ ವರದಿ ಮಾಡಿದ್ದಕ್ಕೆ ಪೂಜಾ ಭಟ್​ (Pooja Bhatt) ಪ್ರತಿಕ್ರಿಯೆ ನೀಡಿದ್ದು, ‘ಪ್ರತಿಭಟನೆಗೂ ಗಲಭೆಗೂ ವ್ಯತ್ಯಾಸ ಇದೆ’ ಎಂದು ಅವರು ಹೇಳಿದ್ದಾರೆ. ಅವರ ಟ್ವೀಟ್​ ವೈರಲ್​ ಆಗಿದೆ. ಜನರು ಕಮೆಂಟ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

‘ಪಠಾಣ್​’ ಚಿತ್ರಕ್ಕೆ ಭಜರಂಗ ದಳ ವಿರೋಧ:

ಭಜರಂಗ ದಳ ಕಾರ್ಯಕರ್ತರು ‘ಪಠಾಣ್​’ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಗುಜರಾತ್​ನಲ್ಲಿ ಇತ್ತೀಚೆಗೆ ನಡೆದಿದೆ. ಚಿತ್ರಮಂದಿರವೊಂದರಲ್ಲಿ ‘ಪಠಾಣ್​’ ಚಿತ್ರದ ಪೋಸ್ಟರ್​ ಮತ್ತು ಸ್ಟ್ಯಾಂಡಿಗಳನ್ನು ಹಾಕಲಾಗಿತ್ತು. ಅದನ್ನು ಕಿತ್ತು ಹಾಕುವ ಮೂಲಕ ಭಜರಂಗ ದಳದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ‘ಜೈ ಶ್ರೀರಾಮ್​’ ಎಂದು ಘೋಷಣೆ ಕೂಗುತ್ತ ಗಲಾಟೆ ಮಾಡಲಾಗಿದೆ. ದಾಂಧಲೆ ತಡೆಯಲು ಮಲ್ಟಿಪ್ಲೆಕ್ಸ್​ ಸಿಬ್ಬಂದಿ ಪ್ರಯತ್ನ ನಡೆಸಿದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಇದನ್ನು ಕೇವಲ ಪ್ರತಿಭಟನೆ ಎಂದು ಸುದ್ದಿ ಮಾಡಿರುವುದನ್ನು ಪೂಜಾ ಭಟ್​ ಖಂಡಿಸಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ನಟಿ ಪೂಜಾ ಭಟ್​ ಟ್ವೀಟ್​ನಲ್ಲಿ ಏನಿದೆ?

‘ಭಜರಂಗ ದಳದ ಪ್ರತಿಭಟನೆ’ ಎಂದು ನ್ಯೂಸ್​ ಏಜೆನ್ಸಿ ಮಾಡಿದ ಟ್ವೀಟ್​ಗೆ ಪೂಜಾ ಭಟ್​ ಪ್ರತಿಕ್ರಿಯಿಸಿದ್ದಾರೆ. ‘ಪ್ರತಿಭಟನೆ ಎಂದರೆ ಸಂಘಟಿತ ರೀತಿಯಲ್ಲಿ ಸಾರ್ವಜನಿಕವಾಗಿ ಪ್ರತಿರೋಧ ವ್ಯಕ್ತಪಡಿಸುವುದು. ಗಲಭೆ ಎಂದರೆ ಜನರ ಗುಂಪೊಂದು ಹಿಂಸಾತ್ಮಕ ಮಾರ್ಗದಿಂದ ಶಾಂತಿ ಕದಡಿ ಭಯಗೊಳಿಸುವುದು’ ಎಂದು ಪೂಜಾ ಭಟ್​ ಟ್ವೀಟ್​ ಮಾಡಿದ್ದಾರೆ. ಈ ಬಗ್ಗೆ ನೆಟ್ಟಿಗರು ಪರ-ವಿರೋಧದ ಚರ್ಚೆ ಮಾಡುತ್ತಿದ್ದಾರೆ.

ಭಜರಂಗ ದಳದ ಬೆದರಿಕೆ:

ಮಾಲ್​ನಲ್ಲಿ ಪೋಸ್ಟರ್​ ಕಿತ್ತುಹಾಕಿ ಗಲಭೆ ನಡೆಸಿದ ಬಳಿಕ ಭಜರಂಗ ದಳ ಕಾರ್ಯಕರ್ತರು ಟ್ವಿಟರ್​ ಮೂಲಕ ಬೆದರಿಕೆ ಹಾಕಿದ್ದಾರೆ. ‘ಸನಾತನ ಧರ್ಮ ವಿರೋಧಿ ಶಾರುಖ್​ ಖಾನ್ ಹಾಗೂ ಟುಕ್ಡೆ ಟುಕ್ಡೆ ಗ್ಯಾಂಗ್​ನ ದೀಪಿಕಾ ಪಡುಕೋಣೆ ನಟಿಸಿದ ಸಿನಿಮಾವನ್ನು ಪ್ರದರ್ಶನ ಮಾಡಲು ಬಿಡುವುದಿಲ್ಲ. ಮಲ್ಟಿಪ್ಲೆಕ್ಸ್​ನವರಿಗೆ ವಾರ್ನಿಂಗ್​ ನೀಡಿದ್ದೇವೆ. ಒಂದು ವೇಳೆ ಸಿನಿಮಾ ರಿಲೀಸ್​ ಮಾಡಿದರೆ ಭಜರಂಗ ದಳವು ತನ್ನ ವರಸೆ ತೋರಿಸಬೇಕಾಗುತ್ತದೆ’ ಎಂದು ಟ್ವೀಟ್​​ ಮಾಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:36 pm, Fri, 6 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!