AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿಗೆ ವರ್ಷಕ್ಕೆ ಸಿಗುತ್ತಿದೆ ಕೋಟ್ಯಂತರ ರೂಪಾಯಿ ಸಂಭಾವನೆ

ಶಾರುಖ್ ಖಾನ್ ಮ್ಯಾನೇಜರ್ ಆಗಿರುವ ಪೂಜಾ ಕೇವಲ ಮ್ಯಾನೇಜರ್ ಕೆಲಸ ಮಾಡುತ್ತಿಲ್ಲ. ಅವರು ಶಾರುಖ್ ಕುಟುಂಬದಲ್ಲಿ ಒಬ್ಬರಾಗಿದ್ದಾರೆ. ಅವರು ಯಾವಾಗಲೂ ಶಾರುಖ್ ಜೊತೆ ಇರುತ್ತಾರೆ. ಶಾರುಖ್ ಖಾನ್ ಮ್ಯಾನೇಜ್ ಮಾಡಬೇಕಾದ ವಿಷಯಗಳನ್ನು ಪೂಜಾ ನೋಡಿಕೊಳ್ಳುತ್ತಾರೆ.

ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿಗೆ ವರ್ಷಕ್ಕೆ ಸಿಗುತ್ತಿದೆ ಕೋಟ್ಯಂತರ ರೂಪಾಯಿ ಸಂಭಾವನೆ
ಪೂಜಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 08, 2024 | 1:05 PM

Share

ನಟ ಶಾರುಖ್ ಖಾನ್ (Shah Rukh Khan) ಅವರು ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಒಡೆತನ ಹೊಂದಿದ್ದಾರೆ. ಮ್ಯಾಚ್ ವೀಕ್ಷಿಸಲು ಅವರು ಸ್ಟೇಡಿಯಂಗೆ ಆಗಮಿಸುತ್ತಾರೆ. ಇತ್ತೀಚೆಗೆ ಅವರು ಪಂದ್ಯ ವೀಕ್ಷಿಸಲು ಬಂದಾಗ ಅವರ ಜೊತೆ ಮಹಿಳೆಯೊಬ್ಬರು ಇದ್ದರು. ಇದು ಯಾರು ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿತ್ತು. ಇವರು ಪೂಜಾ ದದ್ಲಾನಿ. ಶಾರುಖ್ ಅವರ ಮ್ಯಾನೇಜರ್. ಶಾರುಖ್ ಖಾನ್ ಅವರ ಎಲ್ಲ ವಿಚಾರವನ್ನು ಇವರೇ ನೋಡಿಕೊಳ್ಳುತ್ತಾರೆ. ಅವರ ಸಂಭಾವನೆ ವಿಚಾರ ಕೂಡ ಭರ್ಜರಿ ಚರ್ಚೆ ಆಗುತ್ತಿದೆ.

ಶಾರುಖ್ ಖಾನ್ ಅವರು ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ ಅವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತಿದೆ. ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಗೆಲುವು ಕಂಡಿವೆ. ಅವರ ಮಗ ಆರ್ಯನ್ ಖಾನ್ ಆರಂಭಿಸಿದ ಬಟ್ಟೆ ಬಿಸ್ನೆಸ್ ಒಳ್ಳೆಯ ರೀತಿಯಲ್ಲಿ ಸಾಗುತ್ತಿದೆ. ಸುಹಾನಾ ಖಾನ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಇದಕ್ಕೆ ಇವರ ಮ್ಯಾನೇಜರ್ ಪೂಜಾ ಕೊಡುಗೆಯೂ ಇದೆ. ಶಾರುಖ್ ಖಾನ್ ಅವರು ಸಾವಿರಾರು ಕೋಟಿಯ ಆಸ್ತಿ ಹೊಂದಿದ್ದಾರೆ. ಶಾರುಖ್ ಖಾನ್ ಅವರು ತಮ್ಮ ಮ್ಯಾನೇಜರ್ ಪೂಜಾ ದದ್ಲಾನಿಯನ್ನು ಸಾಕಷ್ಟು ನಂಬುತ್ತಾರೆ.

ಶಾರುಖ್ ಖಾನ್ ಮ್ಯಾನೇಜರ್ ಆಗಿರುವ ಪೂಜಾ ಕೇವಲ ಮ್ಯಾನೇಜರ್ ಕೆಲಸ ಮಾಡುತ್ತಿಲ್ಲ. ಅವರು ಶಾರುಖ್ ಕುಟುಂಬದಲ್ಲಿ ಒಬ್ಬರಾಗಿದ್ದಾರೆ. ಅವರು ಯಾವಾಗಲೂ ಶಾರುಖ್ ಜೊತೆ ಇರುತ್ತಾರೆ. ಶಾರುಖ್ ಖಾನ್ ಮ್ಯಾನೇಜ್ ಮಾಡಬೇಕಾದ ವಿಷಯಗಳನ್ನು ಪೂಜಾ ನೋಡಿಕೊಳ್ಳುತ್ತಾರೆ. ಶಾರುಖ್ ಅವರು ಪೂಜಾ ಮೇಲೆ ಅಷ್ಟು ವಿಶ್ವಾಸ ಇಟ್ಟುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರಿಗೆ ವರ್ಷಕ್ಕೆ ದೊಡ್ಡ ಸಂಭಾವನೆ ಸಿಗುತ್ತಿದೆ. ಪ್ರತಿ ವರ್ಷ ಪೂಜಾ ಸಂಭಾವನೆ ಆಗಿ 7-9 ಕೋಟಿ ರೂಪಾಯಿ ಪಡೆಯುತ್ತಾರೆ. ಅವರ ಒಟ್ಟೂ ಆಸ್ತಿ 45 ಕೋಟಿ ರೂಪಾಯಿಗೂ ಅಧಿಕವಾಗಿದೆ.

2021ರಲ್ಲಿ ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಇದರಿಂದ ಶಾರುಖ್ ಸಾಕಷ್ಟು ನೊಂದರು. ಆರ್ಯನ್ ಖಾನ್​ಗೆ ಜಾಮೀನು ಕೊಡಿಸಬೇಕು ಎಂದು ಪೂಜಾ ಸಾಕಷ್ಟು ಪ್ರಯತ್ನಪಟ್ಟಿದ್ದರು. ಎಲ್ಲಾ ಸಂದರ್ಭದಲ್ಲೂ ಶಾರುಖ್ ಖಾನ್​ಗೆ ಕೋರ್ಟ್ ಹಾಗೂ ಪೊಲೀಸ್ ಠಾಣೆಗೆ ಹೋಗೋಕೆ ಸಾಧ್ಯವಾಗುತ್ತಿರಲಿಲ್ಲ. ಆಗ ಶಾರುಖ್ ಬದಲು ಪೂಜಾ ದದ್ಲಾನಿ ಕೋರ್ಟು-ಕಚೇರಿ ಓಡಾಡಿದ್ದರು.

ಶಾರುಖ್ ಖಾನ್ ಅವರು ಹಲವು ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಈ ಕಂಪನಿಗಳ ಜೊತೆ ಪೂಜಾ ಸಂಪರ್ಕ ಇಟ್ಟುಕೊಂಡಿದ್ದಾರೆ. ಜಾಹೀರಾತು ಶೂಟಿಂಗ್ ಮತ್ತಿತ್ಯಾದಿ ವಿಚಾರಗಳ ಬಗ್ಗೆ ಪೂಜಾ ಅವರೇ ಡೇಟ್ಸ್ ಹೊಂದಿಸುತ್ತಾರೆ. ಶಾರುಖ್ ಖಾನ್ ಆಯೋಜಿಸುವ ಎಲ್ಲಾ ಪಾರ್ಟಿಗಳಿಗೆ ಪೂಜಾ ಹಾಜರಿ ಹಾಕುತ್ತಾರೆ.

ಇದನ್ನೂ ಓದಿ: ಈ ಹಾಟ್ ಚೆಲುವೆಯೇ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ರ ಗರ್ಲ್​ಫ್ರೆಂಡ್

ಇತ್ತೀಚೆಗೆ ಪೂಜಾ ಬಾಂದ್ರಾದಲ್ಲಿ ಮನೆ ಖರೀದಿಸಿದ್ದಾರೆ. ಈ ಮನೆಯ ಇಂಟೀರಿಯರ್​​ನ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರೇ ಡಿಸೈನ್ ಮಾಡಿದ್ದರು. ಪೂಜಾ ಬಳಿ ಐಷಾರಾಮಿ ಕಾರು ಕೂಡ ಇದೆ. ಪೂಜಾ ಅವರು 2008ರಲ್ಲಿ ಹಿತೇಶ್ ಅವರನ್ನು ಮದುವೆ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ