AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​ 12 ಕೋಟಿ ಸಂಭಾವನೆ ಕೇಳಿದ ವಿಚಾರ; ಬೆಬೊ ಬೆಂಬಲಕ್ಕೆ ನಿಂತ ಕರಾವಳಿ ನಟಿ

ಈ ವಿಚಾರಕ್ಕೆ ತಕ್ಕಂತೆ ಕರೀನಾ ಅವರನ್ನು ಅನೇಕರು ಬೆಂಬಲಿಸಿದ್ದರು. ನಟಿ ಪ್ರಿಯಾಮಣಿ, ತಾಪ್ಸೀ ಪನ್ನು ಸೇರಿ ಸಾಕಷ್ಟು ಹಿರೋಯಿನ್​ಗಳು ಕರೀನಾ ಅವರನ್ನು ಬೆಂಬಲಿಸಿದ್ದರು. ಈಗ ಪೂಜಾ ಹೆಗ್ಡೆ ಕೂಡ ಕರೀನಾ ಬೆಂಬಲಕ್ಕೆ ನಿಂತಂತಾಗಿದೆ.

ಕರೀನಾ ಕಪೂರ್​ 12 ಕೋಟಿ ಸಂಭಾವನೆ ಕೇಳಿದ ವಿಚಾರ; ಬೆಬೊ ಬೆಂಬಲಕ್ಕೆ ನಿಂತ ಕರಾವಳಿ ನಟಿ
ಕರೀನಾ ಕಪೂರ್​ ಖಾನ್​
TV9 Web
| Edited By: |

Updated on: Jul 30, 2021 | 8:27 PM

Share

ರಾಮಾಯಣದ ಕಥೆ ಆಧರಿಸಿ ಬಾಲಿವುಡ್​ನಲ್ಲಿ ಸಿದ್ಧ ಆಗಬೇಕಿರುವ ಬಿಗ್​ ಬಜೆಟ್​ ಸಿನಿಮಾದಲ್ಲಿ ಸೀತೆ ಪಾತ್ರ ಮಾಡೋಕೆ ಕರೀನಾ ಕಪೂರ್​ ಬರೋಬ್ಬರಿ 12 ಕೋಟಿ ರೂ. ಸಂಭಾವನೆ ಕೇಳಿದ್ದಾರೆ ಎಂಬ ಗುಸುಗುಸು ಇತ್ತೀಚೆಗೆ ಹರಿದಾಡಿತ್ತು. ಈ ವಿಚಾರದಲ್ಲಿ ಅವರು ಸಾಕಷ್ಟು ಟ್ರೋಲ್​ಗಳು ಕೂಡ ಹರಿದಾಡಿದ್ದವು. ಈಗ ಕರೀನಾ ಬೆಂಬಲಕ್ಕೆ ಕರಾವಳಿ ಬೆಡಗಿ ಪೂಜಾ ಹೆಗ್ಡೆ ನಿಂತಿದ್ದಾರೆ.  

ಈ ಬಗ್ಗೆ ಪೂಜಾ ಹೆಗ್ಡೆ ಆಂಗ್ಲ ಪತ್ರಿಕೆಯೊಂದಕ್ಕೆ ಮಾಹಿತಿ ನೀಡಿದ್ದಾರೆ. ‘ಕೆಲವಷ್ಟು ಜನರು ಹೇಳುತ್ತಾರೆ, ಏಕೆಂದರೆ ಹೇಳೋದೆ ಅವರ ಕೆಲಸ. ಕರೀನಾ ತಮ್ಮ ಮೌಲ್ಯಕ್ಕೆ ತಕ್ಕಂತೆ ಸಂಭಾವನೆ ಕೇಳಿದ್ದಾರೆ. ಯಾವ ಮಹಿಳೆಯರು ತಮ್ಮ ಮೌಲ್ಯವನ್ನು ಕಂಡುಕೊಳ್ಳುತ್ತಾರೋ ಅವರಿಗೆ ತಕ್ಕನಾದ ಗೌರವ ಸಿಕ್ಕೇ ಸಿಗುತ್ತದೆ’ ಎಂದು ಪೂಜಾ ಅವರು ಕರೀನಾರನ್ನು ಬೆಂಬಲಿಸಿದ್ದಾರೆ.

ಈ ವಿಚಾರಕ್ಕೆ ತಕ್ಕಂತೆ ಕರೀನಾ ಅವರನ್ನು ಅನೇಕರು ಬೆಂಬಲಿಸಿದ್ದರು. ನಟಿ ಪ್ರಿಯಾಮಣಿ, ತಾಪ್ಸೀ ಪನ್ನು ಸೇರಿ ಸಾಕಷ್ಟು ಹಿರೋಯಿನ್​ಗಳು ಕರೀನಾ ಅವರನ್ನು ಬೆಂಬಲಿಸಿದ್ದರು. ಈಗ ಪೂಜಾ ಹೆಗ್ಡೆ ಕೂಡ ಕರೀನಾ ಬೆಂಬಲಕ್ಕೆ ನಿಂತಂತಾಗಿದೆ.

ರಾಮಾಯಣದ ಕಥೆಯನ್ನು ಈಗಾಗಲೇ ಜನರು ಹಲವು ರೂಪಗಳಲ್ಲಿ ತಿಳಿದುಕೊಂಡಿದ್ದಾರೆ. ಸೀರಿಯಲ್​, ಸಿನಿಮಾ, ವೆಬ್​ ಸಿರೀಸ್​ನಲ್ಲೂ ರಾಮಾಯಣ ಮೂಡಿಬಂದಿದೆ. ಹಾಗಿದ್ದರೂ ಮತ್ತೊಮ್ಮೆ ಮೆಗಾ ಬಜೆಟ್​ನಲ್ಲಿ ರಾಮಾಯಣ ಕಥೆಯನ್ನು ತೆರೆ ಮೇಲೆ ತರಲು ಬಾಲಿವುಡ್​ನಲ್ಲಿ ಮಾತುಕತೆ ನಡೆಯುತ್ತಿದೆ. ಆ ಚಿತ್ರದ ಸೀತೆ ಪಾತ್ರಕ್ಕೆ ಕರೀನಾಗೆ ಆಫರ್​ ನೀಡಲಾಗಿತ್ತು. ಆದರೆ ಅವರು 12 ಕೋಟಿ ರೂ. ಸಂಭಾವನೆ ಕೇಳಿದ್ದರಿಂದ, ಅಷ್ಟು ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಅವರನ್ನು ತಂಡದಿಂದ ಕೈ ಬಿಡಲಾಯಿತು ಎಂಬ ಗಾಸಿಪ್​ ಹರಿದಾಡಿತ್ತು.

ಕರೀನಾ ಎರಡನೇ ಮಗುವಿನ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವರ್ಷ ಫೆಬ್ರವರಿಯಲ್ಲಿ ಮಗುವಿಗೆ ಜನ್ಮ ನೀಡುವುದಕ್ಕೂ ಮುನ್ನ ಅವರು ಆಮೀರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇದೆ. ಲಾಕ್​ಡೌನ್​ ಕಾರಣಕ್ಕಾಗಿ ಚಿತ್ರದ ಕೆಲಸಗಳು ತಡವಾಗಿವೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಮೂಡಿಬರುತ್ತಿದೆ. ಕಭಿ ಈದ್​ ಕಭಿ ದಿವಾಳಿ ಸಿನಿಮಾದಲ್ಲಿ ಪೂಜಾ ನಟಿಸುತ್ತಿದ್ದಾರೆ.  ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾಗೂ ಪೂಜಾ ನಾಯಕಿ.

ಇದನ್ನೂ ಓದಿ: ‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?