Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonam Pandey: ಸತ್ತು ಬದುಕಿ ಬಂದ ಬೋಲ್ಡ್ ನಟಿ ಪೂನಂ ಪಾಂಡೆಗೆ ಜನ್ಮದಿನ

ಪೂನಂ ಪಾಂಡೆ ಅವರ ಜನ್ಮದಿನದಂದು, ಅವರ ವಿವಾದಾತ್ಮಕ ವೃತ್ತಿ ಮತ್ತು ಕ್ಯಾನ್ಸರ್ ಸುಳ್ಳು ಸುದ್ದಿಯನ್ನು ನೆನಪಿಸಿಕೊಳ್ಳೋಣ. ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಸಾವಿನ ಸುದ್ದಿ ಹರಡಿದ್ದರು. ಈ ಸುದ್ದಿ ದೊಡ್ಡ ವಿವಾದಕ್ಕೆ ಕಾರಣವಾಯಿತು. ಕೆಲವರು ಅವರನ್ನು ಶ್ಲಾಘಿಸಿದರೆ ಇನ್ನು ಕೆಲವರು ಖಂಡಿಸಿದರು.

Poonam Pandey: ಸತ್ತು ಬದುಕಿ ಬಂದ ಬೋಲ್ಡ್ ನಟಿ ಪೂನಂ ಪಾಂಡೆಗೆ ಜನ್ಮದಿನ
ಪೂನಂ ಪಾಂಡೆ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 11, 2025 | 8:02 AM

ಬಾಲಿವುಡ್ ನಟಿ, ವಿವಾದಗಳ ಕೇಂದ್ರ ಬಿಂದು ಪೂನಂ ಪಾಂಡೆ (Poonam Pandey) ಅವರಿಗೆ ಇಂದು (ಮಾರ್ಚ್​ 11) ಜನ್ಮದಿನ. ಅವರಿಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅಲ್ಲದೆ ಕಳೆದ ವರ್ಷದ ಆರಂಭದಲ್ಲಿ ಅವರು ಮಾಡಿಕೊಂಡ ವಿವಾದವನ್ನು ಕೂಡ ಈಗ ನೆನಪಿಸಿಕೊಳ್ಳಲಾಗುತ್ತಿದೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ತಾವು ಸತ್ತೇ ಹೋಗಿದ್ದಾಗಿ ಸುದ್ದಿ ಹರಡಿದ್ದರು. ಅದು ಸುಳ್ಳು ಎಂದು ಗೊತ್ತಾದಾಗ ಎಲ್ಲರೂ ಪೂನಂ ಪಾಂಡೆಗೆ ಬಾಯಿಗೆ ಬಂದಂತೆ ಬೈದಿದ್ದರು. ಕೆಲವರು ಅವರ ದಿಟ್ಟ ನಡೆಯನ್ನು ಶ್ಲಾಘಿಸಿದ್ದರು.

ಪೋಸ್ಟ್

2024ರ ಫೆಬ್ರವರಿ 2ರಂದು ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದರು. ಮುಂಜಾನೆ ಪೂನಂ ಪಾಂಡೆ ನಿಧನ ಹೊಂದಿದ್ದಾರೆ. ಖಾಸಗಿತನಕ್ಕೆ ಗೌರವ ನೀಡಿ ಎಂದು ಪೋಸ್ಟ್ ಮಾಡಲಾಗಿತ್ತು. ಆ ಬಳಿಕ ಈ ಸುದ್ದಿ ಸಾಕಷ್ಟು ಹರಿದಾಡಿತ್ತು. ಇದನ್ನು ಕೆಲವರು ನಂಬಿದರೆ ಇನ್ನೂ ಕೆಲವರು ಸುಳ್ಳು ಎಂದಿದ್ದರು. ಇದು ಪಬ್ಲಿಸಿಟಿ ಸ್ಟಂಟ್ ಎಂದು ಕೂಡ ಹೇಳಲಾಯಿತು.

ಸರ್ವಿಕಲ್ ಕ್ಯಾನ್ಸರ್

ಸರ್ವಿಕಲ್ ಕ್ಯಾನ್ಸರ್ ಅಥವಾ ಗರ್ಭಕಂಠದ ಕ್ಯಾನ್ಸರ್​ನಿಂದ ತಾವು ಮೃತಪಟ್ಟಿದ್ದಾಗಿ ಪೂನಂ ಪಾಂಡೆ ಹೇಳಿದ್ದರು. ನಂತರ ಈ ಸುದ್ದಿ ಸಾಕಷ್ಟು ಚರ್ಚೆ ಆಯಿತು. ಅನೇಕರು ಸರ್ವಿಕಲ್ ಕ್ಯಾನ್ಸರ್ ಎಂದರೆ ಏನು ಎಂಬುದರ ಹುಡುಕಾಟದಲ್ಲಿ ತೊಡಗಿದರು. ಈ ಬಗ್ಗೆ ಸಾಕಷ್ಟು ಚರ್ಚೆ ಆದ ಬಳಿಕವೇ ಅವರು ತಾವು ಬದುಕಿದ್ದ ವಿಚಾರ ರಿವೀಲ್ ಮಾಡಿದ್ದರು.

ಇದನ್ನೂ ಓದಿ
Image
ರಮೇಶ್ ಅರವಿಂದ್ ನೇತೃತ್ವದಲ್ಲಿ ಬರುತ್ತಿದೆ ಹೊಸ ಶೋ; ರಿವೀಲ್ ಆಯ್ತು ಮಾಹಿತಿ
Image
NTR​ ಜೊತೆ ಡ್ಯಾನ್ಸ್ ಮಾಡುವಾಗ ಎಡವಿದ ಹೃತಿಕ್ ರೋಷನ್; ಸಂಭವಿಸಿತು ಅವಘಡ
Image
ಸಹನಟನ ಜೊತೆ ಸಿಕ್ಕಿಬಿದ್ದ ಕಿರುತೆರೆ ನಟಿ; 6 ತಿಂಗಳಿಗೆ ಕೊನೆ ಆಯ್ತು ಸಂಸಾರ
Image
ಚಾಂಪಿಯನ್ಸ್ ಆದ ಖುಷಿಯಲ್ಲಿ ಅನುಷ್ಕಾಗೆ ರೋಹಿತ್ ಶರ್ಮಾ ಪ್ರೀತಿಯ ಅಪ್ಪುಗೆ

ಛೀಮಾರಿ-ಹೊಗಳಿಕೆ

ನಟಿಗೆ ಕೆಲವರು ಛೀಮಾರಿ ಹಾಕಿದರು. ಸಾವಿನ ವಿಚಾರದಲ್ಲಿ ಅವರು ಈ ರೀತಿ ಮಾಡಬಾರದಿತ್ತು ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ನಟಿ ಮಾಡಿದ್ದು ಸರಿ ಇದೆ ಎಂದು ವಾದಿಸಿದ್ದರು. ಇನ್ನೂ ಕೆಲವರು ಅವರ ದಿಟ್ಟ ನಿರ್ಧಾರ ಶ್ಲಾಘಿಸಿದ್ದರು.

ಇದನ್ನೂ ಓದಿ: ಪೂನಂ ಪಾಂಡೆಗೆ ಮಧ್ಯ ರಸ್ತೆಯಲ್ಲಿ ಕಿಸ್ ಮಾಡಲು ಬಂದ ಅಭಿಮಾನಿ; ಇದು ನಾಟಕ ಎಂದ ನೆಟ್ಟಿಗರು

ಸಿನಿಮಾ ರಂಗ

2013ರಲ್ಲಿ ಪೂನಂ ಪಾಂಡೆ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಚಿತ್ರ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್​ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ. ರಿಯಾಲಿಟಿ ಶೋಗಳಲ್ಲಿ ಪೂನಂ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ