ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..

ಪೂನಂ ಪಾಂಡೆ ಅವರು ಫೆಬ್ರವರಿ 1ರ ತಡರಾತ್ರಿ ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ನಂತರ ಮೃತಪಟ್ಟರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..
ಪೂನಂ
Follow us
|

Updated on:Feb 03, 2024 | 12:02 PM

ಪೂನಂ ಪಾಂಡೆ (Poonam Pandey) ಸಾವಿನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕೆಲವರು ಅವರ ಸಾವು ಸುಳ್ಳು ಎಂದು ಹೇಳಿದರೆ ಇನ್ನೂ ಕೆಲವರು ಅವರು ಸತ್ತಿದ್ದು ನಿಜ ಎನ್ನುತ್ತಿದ್ದಾರೆ. ಮ್ಯಾನೇಜರ್ ಪಾರುಲ್ ಚಾವ್ಲಾ ಅವರು ಪೂನಂ ಮೃತಪಟ್ಟಿದ್ದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಂದು ಹೇಳಿದ್ದರು. ಆದರೆ, ಈಗ ಬೇರೆಯದೇ ಸುದ್ದಿ ಕೇಳಿ ಬರುತ್ತಿದೆ. ಪೂನಂ ಸತ್ತಿದ್ದು ಉತ್ತರ ಪ್ರದೇಶದಲ್ಲಿ ಅಲ್ಲವೇ ಅಲ್ಲವಂತೆ. ಅವರು ಮೃತಪಟ್ಟಿದ್ದು ಪುಣೆಯಲ್ಲಿ ಎಂದು ಹೇಳಲಾಗುತ್ತಿದೆ.

ಫೆಬ್ರವರಿ 1ರ ತಡರಾತ್ರಿ ಪೂನಂ ಅವರು ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ. ‘ಲಾಕಪ್’ ಶೋನಲ್ಲಿ ಪೂನಂ ಜೊತೆ ಸ್ಪರ್ಧಿಸಿದ್ದ ಶಿವಂ ಶರ್ಮಾ ಅವರು ಬೇರೆಯದೇ ಹೇಳಿಕೆ ನೀಡಿದ್ದಾರೆ. ಪೂನಂ ಶವ ಪುಣೆಯಲ್ಲಿದೆ ಎಂದು ಹೇಳಿದ್ದಾರೆ.

ಶಿವಂ ಶರ್ಮಾ ಅವರು ಪೂನಂ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ‘ನಾವು ಸಾಕಷ್ಟು ಸಮಯ ಒಟ್ಟಿಗೆ ಕಳೆದಿದ್ದೆವೆ. ನನ್ನ ಕಣ್ಮುಂದೆ ಆ ನೆನಪುಗಳು ಹಾದು ಹೋದವು. ಅವರ ಸಾವಿಗೆ ಕ್ಯಾನ್ಸರ್ ಕಾರಣ ಎಂಬುದನ್ನು ನಂಬೋಕೆ ಆಗುತ್ತಿಲ್ಲ. ಕ್ಯಾನ್ಸರ್​ನಿಂದ ಏಕಾಏಕಿ ಸತ್ತವರ ಬಗ್ಗೆ ನಾನು ಕೇಳಿಲ್ಲ. ಅವರಿಗೆ ಕ್ಯಾನ್ಸರ್​ನ ಯಾವುದೇ ಲಕ್ಷಣ ಇರಲಿಲ್ಲ. ಇದರ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ’ ಎಂದಿದ್ದಾರೆ ಶಿವಂ.

‘ಪೂನಂ ಶವ ಪುಣೆಯಲ್ಲೇ ಇದೆ ಎಂದು ನನ್ನ ಗೆಳೆಯನೋರ್ವ ಹೇಳಿದ್ದಾನೆ. ಅವರ ಕುಟುಂಬ ಕಾನ್ಪುರದಲ್ಲಿದೆ. ಅವರ ಕುಟುಂಬದವರು ಅಂತ್ಯ ಸಂಸ್ಕಾರಕ್ಕೆ ಯಾವ ರೀತಿಯಲ್ಲಿ ಪ್ಲ್ಯಾನ್ ಮಾಡಿಕೊಂಡಿವೆ ಅನ್ನೋದು ಗೊತ್ತಿಲ್ಲ. ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದು ನಾನು ಕೋರಿಕೊಳ್ಳುತ್ತೇನೆ’ ಎಂದು ಶಿವಂ ಹೇಳಿದ್ದಾರೆ.

ಇದನ್ನೂ ಓದಿ: ‘ಎಲ್ಲರಿಗೂ ಶಾಕಿಂಗ್ ನ್ಯೂಸ್ ಕೊಡ್ತಿನೀ’ ಎಂದಿದ್ದ ನಟಿ ಪೂನಂ ಪಾಂಡೆ

ಶಿವಂ ಅವರ ಹೇಳಿಕೆಯಿಂದ ಸಾಕಷ್ಟು ಗೊಂದಲ ಮೂಡಿದೆ. ಪೂನಂ ಮ್ಯಾನೇಜರ್ ಹೇಳಿದ್ದು ನಿಜವೋ ಅಥವಾ ಶಿವಂ ಹೇಳುತ್ತಿರುವುದು ನಿಜವೋ ಎನ್ನುವ ಪ್ರಶ್ನೆ ಮೂಡಿದೆ. ಪೂನಂ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿ ಸುಳ್ಳಾಗಲಿ ಎಂದು ಕೆಲವರು ಪ್ರಾರ್ಥಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Sat, 3 February 24

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ