AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..

ಪೂನಂ ಪಾಂಡೆ ಅವರು ಫೆಬ್ರವರಿ 1ರ ತಡರಾತ್ರಿ ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ನಂತರ ಮೃತಪಟ್ಟರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..
ಪೂನಂ
ರಾಜೇಶ್ ದುಗ್ಗುಮನೆ
|

Updated on:Feb 03, 2024 | 12:02 PM

Share

ಪೂನಂ ಪಾಂಡೆ (Poonam Pandey) ಸಾವಿನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕೆಲವರು ಅವರ ಸಾವು ಸುಳ್ಳು ಎಂದು ಹೇಳಿದರೆ ಇನ್ನೂ ಕೆಲವರು ಅವರು ಸತ್ತಿದ್ದು ನಿಜ ಎನ್ನುತ್ತಿದ್ದಾರೆ. ಮ್ಯಾನೇಜರ್ ಪಾರುಲ್ ಚಾವ್ಲಾ ಅವರು ಪೂನಂ ಮೃತಪಟ್ಟಿದ್ದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಂದು ಹೇಳಿದ್ದರು. ಆದರೆ, ಈಗ ಬೇರೆಯದೇ ಸುದ್ದಿ ಕೇಳಿ ಬರುತ್ತಿದೆ. ಪೂನಂ ಸತ್ತಿದ್ದು ಉತ್ತರ ಪ್ರದೇಶದಲ್ಲಿ ಅಲ್ಲವೇ ಅಲ್ಲವಂತೆ. ಅವರು ಮೃತಪಟ್ಟಿದ್ದು ಪುಣೆಯಲ್ಲಿ ಎಂದು ಹೇಳಲಾಗುತ್ತಿದೆ.

ಫೆಬ್ರವರಿ 1ರ ತಡರಾತ್ರಿ ಪೂನಂ ಅವರು ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ. ‘ಲಾಕಪ್’ ಶೋನಲ್ಲಿ ಪೂನಂ ಜೊತೆ ಸ್ಪರ್ಧಿಸಿದ್ದ ಶಿವಂ ಶರ್ಮಾ ಅವರು ಬೇರೆಯದೇ ಹೇಳಿಕೆ ನೀಡಿದ್ದಾರೆ. ಪೂನಂ ಶವ ಪುಣೆಯಲ್ಲಿದೆ ಎಂದು ಹೇಳಿದ್ದಾರೆ.

ಶಿವಂ ಶರ್ಮಾ ಅವರು ಪೂನಂ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ‘ನಾವು ಸಾಕಷ್ಟು ಸಮಯ ಒಟ್ಟಿಗೆ ಕಳೆದಿದ್ದೆವೆ. ನನ್ನ ಕಣ್ಮುಂದೆ ಆ ನೆನಪುಗಳು ಹಾದು ಹೋದವು. ಅವರ ಸಾವಿಗೆ ಕ್ಯಾನ್ಸರ್ ಕಾರಣ ಎಂಬುದನ್ನು ನಂಬೋಕೆ ಆಗುತ್ತಿಲ್ಲ. ಕ್ಯಾನ್ಸರ್​ನಿಂದ ಏಕಾಏಕಿ ಸತ್ತವರ ಬಗ್ಗೆ ನಾನು ಕೇಳಿಲ್ಲ. ಅವರಿಗೆ ಕ್ಯಾನ್ಸರ್​ನ ಯಾವುದೇ ಲಕ್ಷಣ ಇರಲಿಲ್ಲ. ಇದರ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ’ ಎಂದಿದ್ದಾರೆ ಶಿವಂ.

‘ಪೂನಂ ಶವ ಪುಣೆಯಲ್ಲೇ ಇದೆ ಎಂದು ನನ್ನ ಗೆಳೆಯನೋರ್ವ ಹೇಳಿದ್ದಾನೆ. ಅವರ ಕುಟುಂಬ ಕಾನ್ಪುರದಲ್ಲಿದೆ. ಅವರ ಕುಟುಂಬದವರು ಅಂತ್ಯ ಸಂಸ್ಕಾರಕ್ಕೆ ಯಾವ ರೀತಿಯಲ್ಲಿ ಪ್ಲ್ಯಾನ್ ಮಾಡಿಕೊಂಡಿವೆ ಅನ್ನೋದು ಗೊತ್ತಿಲ್ಲ. ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದು ನಾನು ಕೋರಿಕೊಳ್ಳುತ್ತೇನೆ’ ಎಂದು ಶಿವಂ ಹೇಳಿದ್ದಾರೆ.

ಇದನ್ನೂ ಓದಿ: ‘ಎಲ್ಲರಿಗೂ ಶಾಕಿಂಗ್ ನ್ಯೂಸ್ ಕೊಡ್ತಿನೀ’ ಎಂದಿದ್ದ ನಟಿ ಪೂನಂ ಪಾಂಡೆ

ಶಿವಂ ಅವರ ಹೇಳಿಕೆಯಿಂದ ಸಾಕಷ್ಟು ಗೊಂದಲ ಮೂಡಿದೆ. ಪೂನಂ ಮ್ಯಾನೇಜರ್ ಹೇಳಿದ್ದು ನಿಜವೋ ಅಥವಾ ಶಿವಂ ಹೇಳುತ್ತಿರುವುದು ನಿಜವೋ ಎನ್ನುವ ಪ್ರಶ್ನೆ ಮೂಡಿದೆ. ಪೂನಂ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿ ಸುಳ್ಳಾಗಲಿ ಎಂದು ಕೆಲವರು ಪ್ರಾರ್ಥಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Sat, 3 February 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ