AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..

ಪೂನಂ ಪಾಂಡೆ ಅವರು ಫೆಬ್ರವರಿ 1ರ ತಡರಾತ್ರಿ ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ನಂತರ ಮೃತಪಟ್ಟರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..
ಪೂನಂ
ರಾಜೇಶ್ ದುಗ್ಗುಮನೆ
|

Updated on:Feb 03, 2024 | 12:02 PM

Share

ಪೂನಂ ಪಾಂಡೆ (Poonam Pandey) ಸಾವಿನ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕೆಲವರು ಅವರ ಸಾವು ಸುಳ್ಳು ಎಂದು ಹೇಳಿದರೆ ಇನ್ನೂ ಕೆಲವರು ಅವರು ಸತ್ತಿದ್ದು ನಿಜ ಎನ್ನುತ್ತಿದ್ದಾರೆ. ಮ್ಯಾನೇಜರ್ ಪಾರುಲ್ ಚಾವ್ಲಾ ಅವರು ಪೂನಂ ಮೃತಪಟ್ಟಿದ್ದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಂದು ಹೇಳಿದ್ದರು. ಆದರೆ, ಈಗ ಬೇರೆಯದೇ ಸುದ್ದಿ ಕೇಳಿ ಬರುತ್ತಿದೆ. ಪೂನಂ ಸತ್ತಿದ್ದು ಉತ್ತರ ಪ್ರದೇಶದಲ್ಲಿ ಅಲ್ಲವೇ ಅಲ್ಲವಂತೆ. ಅವರು ಮೃತಪಟ್ಟಿದ್ದು ಪುಣೆಯಲ್ಲಿ ಎಂದು ಹೇಳಲಾಗುತ್ತಿದೆ.

ಫೆಬ್ರವರಿ 1ರ ತಡರಾತ್ರಿ ಪೂನಂ ಅವರು ಏಕಾಏಕಿ ಪ್ರಜ್ಞೆತಪ್ಪಿ ಬಿದ್ದರು. ಅವರಿಗೆ ಗರ್ಭಕಂಠ ಕ್ಯಾನ್ಸರ್ ಇತ್ತು ಎಂದು ಪಾರುಲ್ ಚಾವ್ಲಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆದರೆ, ಪೂನಂ ಸಾವಿನ ವಿಚಾರದಲ್ಲಿ ಅವರು ಸುಳ್ಳು ಹೇಳಿರಬಹುದು ಎಂದು ಊಹಿಸಲಾಗುತ್ತಿದೆ. ‘ಲಾಕಪ್’ ಶೋನಲ್ಲಿ ಪೂನಂ ಜೊತೆ ಸ್ಪರ್ಧಿಸಿದ್ದ ಶಿವಂ ಶರ್ಮಾ ಅವರು ಬೇರೆಯದೇ ಹೇಳಿಕೆ ನೀಡಿದ್ದಾರೆ. ಪೂನಂ ಶವ ಪುಣೆಯಲ್ಲಿದೆ ಎಂದು ಹೇಳಿದ್ದಾರೆ.

ಶಿವಂ ಶರ್ಮಾ ಅವರು ಪೂನಂ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ‘ನಾವು ಸಾಕಷ್ಟು ಸಮಯ ಒಟ್ಟಿಗೆ ಕಳೆದಿದ್ದೆವೆ. ನನ್ನ ಕಣ್ಮುಂದೆ ಆ ನೆನಪುಗಳು ಹಾದು ಹೋದವು. ಅವರ ಸಾವಿಗೆ ಕ್ಯಾನ್ಸರ್ ಕಾರಣ ಎಂಬುದನ್ನು ನಂಬೋಕೆ ಆಗುತ್ತಿಲ್ಲ. ಕ್ಯಾನ್ಸರ್​ನಿಂದ ಏಕಾಏಕಿ ಸತ್ತವರ ಬಗ್ಗೆ ನಾನು ಕೇಳಿಲ್ಲ. ಅವರಿಗೆ ಕ್ಯಾನ್ಸರ್​ನ ಯಾವುದೇ ಲಕ್ಷಣ ಇರಲಿಲ್ಲ. ಇದರ ಬಗ್ಗೆ ಅವರು ಹೇಳಿಕೊಂಡಿರಲಿಲ್ಲ’ ಎಂದಿದ್ದಾರೆ ಶಿವಂ.

‘ಪೂನಂ ಶವ ಪುಣೆಯಲ್ಲೇ ಇದೆ ಎಂದು ನನ್ನ ಗೆಳೆಯನೋರ್ವ ಹೇಳಿದ್ದಾನೆ. ಅವರ ಕುಟುಂಬ ಕಾನ್ಪುರದಲ್ಲಿದೆ. ಅವರ ಕುಟುಂಬದವರು ಅಂತ್ಯ ಸಂಸ್ಕಾರಕ್ಕೆ ಯಾವ ರೀತಿಯಲ್ಲಿ ಪ್ಲ್ಯಾನ್ ಮಾಡಿಕೊಂಡಿವೆ ಅನ್ನೋದು ಗೊತ್ತಿಲ್ಲ. ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದು ನಾನು ಕೋರಿಕೊಳ್ಳುತ್ತೇನೆ’ ಎಂದು ಶಿವಂ ಹೇಳಿದ್ದಾರೆ.

ಇದನ್ನೂ ಓದಿ: ‘ಎಲ್ಲರಿಗೂ ಶಾಕಿಂಗ್ ನ್ಯೂಸ್ ಕೊಡ್ತಿನೀ’ ಎಂದಿದ್ದ ನಟಿ ಪೂನಂ ಪಾಂಡೆ

ಶಿವಂ ಅವರ ಹೇಳಿಕೆಯಿಂದ ಸಾಕಷ್ಟು ಗೊಂದಲ ಮೂಡಿದೆ. ಪೂನಂ ಮ್ಯಾನೇಜರ್ ಹೇಳಿದ್ದು ನಿಜವೋ ಅಥವಾ ಶಿವಂ ಹೇಳುತ್ತಿರುವುದು ನಿಜವೋ ಎನ್ನುವ ಪ್ರಶ್ನೆ ಮೂಡಿದೆ. ಪೂನಂ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿ ಸುಳ್ಳಾಗಲಿ ಎಂದು ಕೆಲವರು ಪ್ರಾರ್ಥಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:50 am, Sat, 3 February 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!