ಪೂನಂ ಪಾಂಡೆ ಸಾವಿನ ಕುರಿತು ಅನುಮಾನ: ಸಾವಿಗೆ ಮಾದಕ ವಸ್ತು ಕಾರಣ?

Poonam Pandey: ನಟಿ ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ ಎಂದು ಅವರ ತಂಡ ಹೇಳಿಕೆ ನೀಡಿತ್ತು. ಆದರೆ ಪೂನಂ ಮಾದಕ ವಸ್ತುವಿನ ಅತಿಯಾದ ಸೇವನೆಯಿಂದ ನಿಧನ ಹೊಂದಿದ್ದಾರೆ ಎನ್ನಲಾಗುತ್ತಿದೆ.

ಪೂನಂ ಪಾಂಡೆ ಸಾವಿನ ಕುರಿತು ಅನುಮಾನ: ಸಾವಿಗೆ ಮಾದಕ ವಸ್ತು ಕಾರಣ?
Follow us
|

Updated on: Feb 02, 2024 | 9:18 PM

ನಟಿ ಪೂನಂ ಪಾಂಡೆ (Poonam Pandey) ನಿನ್ನೆ ತಡರಾತ್ರಿ (ಫೆಬ್ರವರಿ 1) ನಿಧನ ಹೊಂದಿದ್ದಾರೆ. 32 ವರ್ಷದ ನಟಿ ಹಠಾತ್ತನೆ ನಿಧನ ಹೊಂದಿದ್ದು ಅವರ ಆಪ್ತರಿಗೆ ಅಭಿಮಾನಿಗಳಿಗೆ ಆಘಾತ ತಂದಿದೆ. ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ ಎಂದು ಅವರ ಮ್ಯಾನೇಜರ್ ಹೇಳಿರುವುದಾಗಿ ವರದಿ ಆಗಿದೆ. ಆದರೆ ಮೂರು ದಿನಗಳ ಹಿಂದಷ್ಟೆ ಪೂನಂ ಪಾಂಡೆ ಪಾರ್ಟಿ ಮಾಡುತ್ತಿರುವ ಚಿತ್ರ ಹಂಚಿಕೊಂಡಿದ್ದರು. ಪೂನಂ ಪಾಂಡೆ ಈ ಹಿಂದೆ ಎಂದೂ ಸಹ ತಮಗೆ ಕ್ಯಾನ್ಸರ್ ಇರುವುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಇದೀಗ ಒಮ್ಮೆಲೆ ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆಂಬುದು ಹಲವರಿಗೆ ನಂಬಲು ಸಾಧ್ಯವಾಗಿರಲಿಲ್ಲ. ಪೂನಂ ಪಾಂಡೆ ನಿಧನಕ್ಕೆ ಮಾದಕ ವಸ್ತು ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪೂನಂ ಪಾಂಡೆಯ ನಿಧನ ಮಾದಕ ವಸ್ತುವಿನ ಅತಿಯಾದ ಸೇವನೆಯಿಂದ ಆಗಿದೆ ಎಂದು ಮೂಲವೊಂದು ತಿಳಿಸಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ. ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ ಎಂದು ಅವರ ತಂಡದವರು ಈ ಮೊದಲು ತಿಳಿಸಿದ್ದರು. ಆದರೆ ಅದು ಸುಳ್ಳೆಂದು ಹೇಳಲಾಗುತ್ತಿದೆ. ಪೂನಂ ಪಾಂಡೆ ನಿಧನದ ಕುರಿತು ತನಿಖೆ ಜಾರಿಯಲ್ಲಿದ್ದು ಅನುಮಾನಗಳಿಗೆ ಶೀಘ್ರವೇ ಉತ್ತರ ಸಿಗಲಿದೆ.

ಇದನ್ನೂ ಓದಿ:Cervical Cancer: ಪೂನಂ ಪಾಂಡೆ ಸಾವಿಗೆ ಕಾರಣವಾದ ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳೇನು?

ಪೂನಂ ಪಾಂಡೆ ನಿಧನದ ಸುದ್ದಿ ಹೊರಬೀಳುತ್ತಿದ್ದಂತೆ ಮೊದಲಿಗೆ ಇದನ್ನು ಫೇಕ್ ಎನ್ನಲಾಯ್ತು. ಬಳಿಕ ಪೂನಂ ಪಾಂಡೆ ಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಅಥವಾ ಯಾವುದೋ ಸಿನಿಮಾ ಅಥವಾ ವೆಬ್ ಸರಣಿಯ ಪ್ರಚಾರಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದರು. ಆದರೆ ಪೂನಂ ನಿಜಕ್ಕೂ ನಿಧನ ಹೊಂದಿರುವ ಸುದ್ದಿ ಹೊರಬಿದ್ದ ಬಳಿಕ, ನಿಧನದ ಬಗ್ಗೆ ಅನುಮಾನ ವ್ಯಕ್ತವಾಯ್ತು.

ಮೂರು ದಿನದ ಹಿಂದಷ್ಟೆ ವಿಡಿಯೋ ಒಂದನ್ನು ಪೂನಂ ಪಾಂಡೆ ಹಂಚಿಕೊಂಡಿದ್ದರು. ವಿಡಿಯೋನಲ್ಲಿ ಖುಷಿಯಾಗಿ ಪೂನಂ ಪಾಂಡೆ ಓಡಾಡಿಕೊಂಡಿದ್ದರು. ಅನಾರೋಗ್ಯ ಇದ್ದ ವ್ಯಕ್ತಿ ಹೀಗೆ ಇರಲು ಸಾಧ್ಯವೇ ಇಲ್ಲ. ಅದರಲ್ಲಿಯೂ ಕ್ಯಾನ್ಸರ್ ರೀತಿಯ ಮಾರಕ ಕಾಯಿಲೆ ಇರುವವರು ಹೀಗೆ ಆರೋಗ್ಯವಾಗಿ ಓಡಾಡಲು ಹೇಗೆ ಸಾಧ್ಯ, ಪೂನಂರ ಮ್ಯಾನೇಜರ್ ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ಕೆಲ ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ