Poonam Pandey: ಪೂನಂ ಪಾಂಡೆ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕೆ ಕೇಸ್​ ದಾಖಲು

‘ಪೂನಂ ಪಾಂಡೆ ಅವರ ನಿಧನ ಬಗ್ಗೆ ಫೇಕ್​ ನ್ಯೂಸ್​ ಹಬ್ಬಲು ಕಾರಣವಾದ ಎಲ್ಲರ ವಿರುದ್ಧ ತನಿಖೆ ನಡೆಸಿ, ಎಫ್​ಐಆರ್​ ದಾಖಲಿಸಿ. ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಪೂನಂ ಪಾಂಡೆ ಅವರ ಕೃತ್ಯವನ್ನು ಖಂಡಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಪ್ರಕರಣದ ಬಗ್ಗೆ ಚರ್ಚೆ ಹೆಚ್ಚಾಗಿದೆ.

Poonam Pandey: ಪೂನಂ ಪಾಂಡೆ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕೆ ಕೇಸ್​ ದಾಖಲು
ಪೂನಂ ಪಾಂಡೆ
Follow us
|

Updated on:Feb 04, 2024 | 8:31 AM

ಕಾಂಟ್ರವರ್ಸಿ ಮೂಲಕವೇ ಹೆಸರು ಮಾಡಿರುವ ಪೂನಂ ಪಾಂಡೆ (Poonam Pandey) ಈಗ ಬಹುತೇಕರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ತಮ್ಮ ಬಗ್ಗೆಯೇ ಸುಳ್ಳು ಸುದ್ದಿ ಹಬ್ಬಿಸಿಕೊಂಡ ಅವರನ್ನು ಕಂಡರೆ ಈಗ ಅನೇಕರು ಕಿಡಿಕಾರುತ್ತಿದ್ದಾರೆ. ಫೆಬ್ರವರಿ 2ರಂದು ಪೂನಂ ಪಾಂಡೆ ಕ್ಯಾನ್ಸರ್​ನಿಂದ ಮೃತರಾದರು (Poonam Pandey Death) ಎಂದು ಸುಳ್ಳು ಸುದ್ದಿ ಹರಡಿಸಲಾಗಿತ್ತು. ಸ್ವತಃ ಪೂನಂ ಪಾಂಡೆ ಅವರ ಸೋಶಿಯಲ್​ ಮೀಡಿಯಾ ಖಾತೆಯಿಂದಲೇ ಈ ಬ್ರೇಕಿಂಗ್​ ನ್ಯೂಸ್​ ನೀಡಲಾಗಿತ್ತು. ಆದರೆ ಮರುದಿನ ಅದು ಫೇಕ್​ ನ್ಯೂಸ್​ (Fake News) ಎಂಬುದು ಸ್ಪಷ್ಟವಾಯ್ತು. ಇದಕ್ಕೆ ಸಂಬಂಧಪಟ್ಟಂತೆ ಪೊಲೀಸರಿಗೆ ದೂರು ನೀಡಲಾಗಿದೆ.

ಮುಂಬೈನಲ್ಲಿ ಪತ್ರಕರ್ತರೊಬ್ಬರು ಪೂನಂ ಪಾಂಡೆ ವಿರುದ್ಧ ದೂರು ದಾಖಲಿಸಿದ್ದಾರೆ. ‘ಪೂನಂ ಪಾಂಡೆ ಅವರ ಸಾವಿನ ಕುರಿತು ಸುಳ್ಳು ಸುದ್ದಿ ಹರಡಲು ಕಾರಣರಾದ ಎಲ್ಲರ ವಿರುದ್ಧವೂ ಎಫ್​ಐಆರ್​ ದಾಖಲಿಸಿ. ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಪೂನಂ ಪಾಂಡೆ ಅವರ ಕೃತ್ಯವನ್ನು ಖಂಡಿಸುತ್ತಿದ್ದಾರೆ.

ಗರ್ಭಕಂಠದ ಕ್ಯಾನ್ಸರ್​ನಿಂದ ಪೂನಂ ಪಾಂಡೆ ನಿಧನರಾದರು ಎಂಬ ಸುಳ್ಳು ಸುದ್ದಿ ಮಿಂಚಿನ ವೇಗದಲ್ಲಿ ಹರಡಿತು. ಅವರ ಅಭಿಮಾನಿಗಳಿಗೆ ಇದು ಆತಂಕ ಮೂಡಿಸಿತು. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ತನಕ ಅನೇಕರು ಶ್ರದ್ಧಾಂಜಲಿ ಅರ್ಪಿಸಿದರು. ಆದರೆ ಇದೆಲ್ಲವೂ ಪ್ರಚಾರಕ್ಕಾಗಿ ಮಾಡಿದ್ದು ಎಂಬುದು ಗೊತ್ತಾದಾಗ ಎಲ್ಲರೂ ಹಿಡಿಶಾಪ ಹಾಕಿದರು.

ಇದನ್ನೂ ಓದಿ: ‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

ಪೂನಂ ಪಾಂಡೆ ಅವರು ಗರ್ಭಕಂಠದ ಕ್ಯಾನ್ಸರ್​ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ತಮ್ಮದೇ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರು. ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಕೂಡ ಮಾರ್ಗ ಸರಿಯಾಗಿಲ್ಲ ಎಂದು ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಇನ್​ಸ್ಟಾಗ್ರಾಮ್​ನಲ್ಲಿ ಪೂನಂ ಪಾಂಡೆ ಅವರನ್ನು 13 ಲಕ್ಷ ಜನರು ಫಾಲೋ ಮಾಡುತ್ತಿದ್ದಾರೆ. ಈ ಮೊದಲು ಕೂಡ ಅವರು ಹಲವಾರು ವಿವಾದಗಳನ್ನು ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:23 am, Sun, 4 February 24

ತಾಜಾ ಸುದ್ದಿ
ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ
ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ
ಅಂಕೋಲಾ: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಲಾರಿಯಲ್ಲಿ ಬಂದ ಡಿಸಿ, ಎಸಿ, SP
ಅಂಕೋಲಾ: ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಲಾರಿಯಲ್ಲಿ ಬಂದ ಡಿಸಿ, ಎಸಿ, SP
ಬಸನಗೌಡ ಯತ್ನಾಳ್ ಮುಖ್ಯಮಂತ್ರಿಯ ಗುಣಗಅನ ಮಾಡಿದ್ದೋ ಅಥವಾ ಕಾಲೆಳೆದಿದ್ದೋ?
ಬಸನಗೌಡ ಯತ್ನಾಳ್ ಮುಖ್ಯಮಂತ್ರಿಯ ಗುಣಗಅನ ಮಾಡಿದ್ದೋ ಅಥವಾ ಕಾಲೆಳೆದಿದ್ದೋ?
Budget 2024 ಹಲ್ವಾ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ
Budget 2024 ಹಲ್ವಾ ಸಮಾರಂಭದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ
ಸದನದಲ್ಲಿ ನಡೆಯುತ್ತಿರುವ ಚರ್ಚೆಗಳು ಕಳವಳಕಾರಿ ಮತ್ತು ವ್ಯರ್ಥ ಅನಿಸುತ್ತಿವೆ
ಸದನದಲ್ಲಿ ನಡೆಯುತ್ತಿರುವ ಚರ್ಚೆಗಳು ಕಳವಳಕಾರಿ ಮತ್ತು ವ್ಯರ್ಥ ಅನಿಸುತ್ತಿವೆ
ಗಾಯಾಳು ನೆರವಿಗೆ ಧಾವಿಸದ ಪೊಲೀಸ್ರು, ಮಾನವೀಯತೆ ಮರೆತರಾ?
ಗಾಯಾಳು ನೆರವಿಗೆ ಧಾವಿಸದ ಪೊಲೀಸ್ರು, ಮಾನವೀಯತೆ ಮರೆತರಾ?
ಚುನಾವಣಾ ಸೋಲುಗಳಿಗೆ ಕುಮಾರಸ್ವಾಮಿ ಕುಟುಂಬ ಬೇರೆಯವರನ್ನು ದೂಷಿಸುತ್ತದೆ!
ಚುನಾವಣಾ ಸೋಲುಗಳಿಗೆ ಕುಮಾರಸ್ವಾಮಿ ಕುಟುಂಬ ಬೇರೆಯವರನ್ನು ದೂಷಿಸುತ್ತದೆ!
ಬೆಂಗಳೂರಲ್ಲಿ ಹೆಚ್ಚಿದ ಪುಂಡರ ಹುಚ್ಚಾಟ; ಕಾರಿನ ಹಿಂಭಾಗ ನೇತಾಡಿ ಪ್ರಯಾಣ
ಬೆಂಗಳೂರಲ್ಲಿ ಹೆಚ್ಚಿದ ಪುಂಡರ ಹುಚ್ಚಾಟ; ಕಾರಿನ ಹಿಂಭಾಗ ನೇತಾಡಿ ಪ್ರಯಾಣ
ಸದನದಲ್ಲಿ ‘ವಾಲ್ಮೀಕಿ' ಹಗರಣ ಗುದ್ದಾಟ: ಸಿದ್ದರಾಮಯ್ಯ ನೆಮ್ಮದಿಗೆ ಭಂಗವಿಲ್ಲ
ಸದನದಲ್ಲಿ ‘ವಾಲ್ಮೀಕಿ' ಹಗರಣ ಗುದ್ದಾಟ: ಸಿದ್ದರಾಮಯ್ಯ ನೆಮ್ಮದಿಗೆ ಭಂಗವಿಲ್ಲ
ಶೇಕಡ 58ರಷ್ಟು ಹೆಚ್ಚಲಿದೆ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ!
ಶೇಕಡ 58ರಷ್ಟು ಹೆಚ್ಚಲಿದೆ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ!