AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯರ ಜತೆ ಐಷಾರಾಮಿ ಹೋಟೆಲ್​ಗಳಲ್ಲಿ ನಡೆಯುತ್ತಿತ್ತು ಅಶ್ಲೀಲ ಚಿತ್ರದ ಶೂಟಿಂಗ್; ಎಲ್ಲಾ ಒಟಿಟಿಗಾಗಿ

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾಗೆ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವರ್ಷ ಮುಂಬೈ ಕ್ರೈಮ್ ಬ್ರ್ಯಾಂಚ್ ಪ್ರತ್ಯೇಕ ಚಾರ್ಜ್​ಶೀಟ್ ದಾಖಲು ಮಾಡಿದೆ.

ನಟಿಯರ ಜತೆ ಐಷಾರಾಮಿ ಹೋಟೆಲ್​ಗಳಲ್ಲಿ ನಡೆಯುತ್ತಿತ್ತು ಅಶ್ಲೀಲ ಚಿತ್ರದ ಶೂಟಿಂಗ್; ಎಲ್ಲಾ ಒಟಿಟಿಗಾಗಿ
TV9 Web
| Edited By: |

Updated on: Nov 21, 2022 | 5:56 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರು ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಪ್ರಕರಣದ ತನಿಖೆ ಸದ್ಯ ಪ್ರಗತಿಯಲ್ಲಿದೆ. ಪೊಲೀಸರು ತನಿಖೆ ನಡೆಸಿ ಸಾಕ್ಷ್ಯಗಳನ್ನು ಹುಡುಕುತ್ತಿದ್ದಾರೆ. ಈಗ ಪ್ರಕರಣದಲ್ಲಿ ಮಹಾರಾಷ್ಟ್ರ ಸೈಬರ್ ಪೊಲೀಸರು ಕೆಲ ಗಂಭೀರ ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾ ಅವರ ಅಸಲಿ ಮುಖ ಏನು ಎಂಬುದನ್ನು ಪೊಲೀಸರು ತೆರೆದಿಟ್ಟಿದ್ದಾರೆ.

ರಾಜ್​ ಕುಂದ್ರಾ ಅವರು ಅಶ್ಲೀಲ ಚಿತ್ರಗಳನ್ನು ಒಟಿಟಿಗಾಗಿ ಸಿದ್ಧಪಡಿಸುತ್ತಿದ್ದರು. ಐಷಾರಾಮಿ ಹೋಟೆಲ್​ನಲ್ಲಿ ನೀಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ರಾಜ್ ಕುಂದ್ರಾ ಸಿನಿಮಾ ನಿರ್ಮಾಣ ಮಾಡಿದರೆ, ನಟಿ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಮೊದಲಾದವರು ಇದರಲ್ಲಿ ನಟಿಸಿದ್ದರು. ರಾಜು ದುಬೆ ಅವರು ಈ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ಇವರ ವಿರುದ್ಧ ಸದ್ಯ ಕೇಸ್ ದಾಖಲಾಗಿದೆ. ಕಳೆದ ವಾರ ಮಹಾರಾಷ್ಟ್ರದ ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾಗೆ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವರ್ಷ ಮುಂಬೈ ಕ್ರೈಮ್ ಬ್ರ್ಯಾಂಚ್ ಪ್ರತ್ಯೇಕ ಚಾರ್ಜ್​ಶೀಟ್ ದಾಖಲು ಮಾಡಿದೆ.  2019ರಲ್ಲೇ ರಾಜ್ ಕುಂದ್ರಾ ಬಗ್ಗೆ ಈ ರೀತಿಯ ಆರೋಪ ಕೇಳಿ ಬಂದಿತ್ತು. ಸೂಕ್ತ ಸಾಕ್ಷ್ಯ ಕಲೆಹಾಕಿ ಅವರ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

ಮಹಾರಾಷ್ಟ್ರ ಸೈಬರ್ ಪೊಲೀಸರು ದಾಖಲು ಮಾಡಿರುವ ಚಾರ್ಜ್​ಶೀಟ್​ 450 ಪುಟಗಳನ್ನು ಹೊಂದಿದೆ. ಬನಾನ ಪ್ರೈಮ್ ಒಟಿಟಿ ಮೊದಲಾದವರ ಮೇಲೆ ಕೇಸ್ ದಾಖಲಾಗಿದೆ. ಅಶ್ಲೀಲ ಸಿನಿಮಾಗಳನ್ನು ಇವರು ಒಟಿಟಿಯಲ್ಲಿ ಅಪ್​ಲೋಡ್ ಮಾಡುತ್ತಿದ್ದರು. ಹಲವು ಮಾಡೆಲ್​ಗಳನ್ನು ಇವರು ಬಳಕೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಕ್ಯಾಮೆರಾ ಕಣ್ತಪ್ಪಿಸಲು ಮುಖ ಮುಚ್ಚಿಕೊಂಡು ಬಂದ ರಾಜ್ ಕುಂದ್ರಾ!

ರಾಜ್ ಕುಂದ್ರಾ ಅವರನ್ನು ಬಂಧಿಸಿದ ನಂತರದಲ್ಲಿ ಅವರು ಸಾರ್ವಜನಿಕವಾಗಿ ಮುಖ ತೋರಿಸಿಕೊಂಡು ಓಡಾಡಿಲ್ಲ. ವಿಮಾನ ನಿಲ್ದಾಣಗಳಲ್ಲಿ ಅವರು ಮುಖ ಪೂರ್ತಿ ಮುಚ್ಚುವಂತಹ ಮಾಸ್ಕ್ ಧರಿಸಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಅನೇಕರಿಂದ ಅವರು ಟೀಕೆಗೆ ಒಳಗಾಗಿದ್ದರು. ರಾಜ್ ಕುಂದ್ರಾ ಮಾಡಿದ ಅವಾಂತರದಿಂದ ಅವರ ಪತ್ನಿ ಶಿಲ್ಪಾ ಶೆಟ್ಟಿ ಸಾಕಷ್ಟು ಮುಜುಗರ ಅನುಭವಿಸಿದ್ದರು.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ