AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯರ ಜತೆ ಐಷಾರಾಮಿ ಹೋಟೆಲ್​ಗಳಲ್ಲಿ ನಡೆಯುತ್ತಿತ್ತು ಅಶ್ಲೀಲ ಚಿತ್ರದ ಶೂಟಿಂಗ್; ಎಲ್ಲಾ ಒಟಿಟಿಗಾಗಿ

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾಗೆ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವರ್ಷ ಮುಂಬೈ ಕ್ರೈಮ್ ಬ್ರ್ಯಾಂಚ್ ಪ್ರತ್ಯೇಕ ಚಾರ್ಜ್​ಶೀಟ್ ದಾಖಲು ಮಾಡಿದೆ.

ನಟಿಯರ ಜತೆ ಐಷಾರಾಮಿ ಹೋಟೆಲ್​ಗಳಲ್ಲಿ ನಡೆಯುತ್ತಿತ್ತು ಅಶ್ಲೀಲ ಚಿತ್ರದ ಶೂಟಿಂಗ್; ಎಲ್ಲಾ ಒಟಿಟಿಗಾಗಿ
TV9 Web
| Edited By: |

Updated on: Nov 21, 2022 | 5:56 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರು ನೀಲಿ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ನಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಪ್ರಕರಣದ ತನಿಖೆ ಸದ್ಯ ಪ್ರಗತಿಯಲ್ಲಿದೆ. ಪೊಲೀಸರು ತನಿಖೆ ನಡೆಸಿ ಸಾಕ್ಷ್ಯಗಳನ್ನು ಹುಡುಕುತ್ತಿದ್ದಾರೆ. ಈಗ ಪ್ರಕರಣದಲ್ಲಿ ಮಹಾರಾಷ್ಟ್ರ ಸೈಬರ್ ಪೊಲೀಸರು ಕೆಲ ಗಂಭೀರ ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾ ಅವರ ಅಸಲಿ ಮುಖ ಏನು ಎಂಬುದನ್ನು ಪೊಲೀಸರು ತೆರೆದಿಟ್ಟಿದ್ದಾರೆ.

ರಾಜ್​ ಕುಂದ್ರಾ ಅವರು ಅಶ್ಲೀಲ ಚಿತ್ರಗಳನ್ನು ಒಟಿಟಿಗಾಗಿ ಸಿದ್ಧಪಡಿಸುತ್ತಿದ್ದರು. ಐಷಾರಾಮಿ ಹೋಟೆಲ್​ನಲ್ಲಿ ನೀಲಿ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ರಾಜ್ ಕುಂದ್ರಾ ಸಿನಿಮಾ ನಿರ್ಮಾಣ ಮಾಡಿದರೆ, ನಟಿ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಮೊದಲಾದವರು ಇದರಲ್ಲಿ ನಟಿಸಿದ್ದರು. ರಾಜು ದುಬೆ ಅವರು ಈ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ಇವರ ವಿರುದ್ಧ ಸದ್ಯ ಕೇಸ್ ದಾಖಲಾಗಿದೆ. ಕಳೆದ ವಾರ ಮಹಾರಾಷ್ಟ್ರದ ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾಗೆ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವರ್ಷ ಮುಂಬೈ ಕ್ರೈಮ್ ಬ್ರ್ಯಾಂಚ್ ಪ್ರತ್ಯೇಕ ಚಾರ್ಜ್​ಶೀಟ್ ದಾಖಲು ಮಾಡಿದೆ.  2019ರಲ್ಲೇ ರಾಜ್ ಕುಂದ್ರಾ ಬಗ್ಗೆ ಈ ರೀತಿಯ ಆರೋಪ ಕೇಳಿ ಬಂದಿತ್ತು. ಸೂಕ್ತ ಸಾಕ್ಷ್ಯ ಕಲೆಹಾಕಿ ಅವರ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

ಮಹಾರಾಷ್ಟ್ರ ಸೈಬರ್ ಪೊಲೀಸರು ದಾಖಲು ಮಾಡಿರುವ ಚಾರ್ಜ್​ಶೀಟ್​ 450 ಪುಟಗಳನ್ನು ಹೊಂದಿದೆ. ಬನಾನ ಪ್ರೈಮ್ ಒಟಿಟಿ ಮೊದಲಾದವರ ಮೇಲೆ ಕೇಸ್ ದಾಖಲಾಗಿದೆ. ಅಶ್ಲೀಲ ಸಿನಿಮಾಗಳನ್ನು ಇವರು ಒಟಿಟಿಯಲ್ಲಿ ಅಪ್​ಲೋಡ್ ಮಾಡುತ್ತಿದ್ದರು. ಹಲವು ಮಾಡೆಲ್​ಗಳನ್ನು ಇವರು ಬಳಕೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಕ್ಯಾಮೆರಾ ಕಣ್ತಪ್ಪಿಸಲು ಮುಖ ಮುಚ್ಚಿಕೊಂಡು ಬಂದ ರಾಜ್ ಕುಂದ್ರಾ!

ರಾಜ್ ಕುಂದ್ರಾ ಅವರನ್ನು ಬಂಧಿಸಿದ ನಂತರದಲ್ಲಿ ಅವರು ಸಾರ್ವಜನಿಕವಾಗಿ ಮುಖ ತೋರಿಸಿಕೊಂಡು ಓಡಾಡಿಲ್ಲ. ವಿಮಾನ ನಿಲ್ದಾಣಗಳಲ್ಲಿ ಅವರು ಮುಖ ಪೂರ್ತಿ ಮುಚ್ಚುವಂತಹ ಮಾಸ್ಕ್ ಧರಿಸಿ ಕಾಣಿಸಿಕೊಂಡಿದ್ದರು. ಈ ಬಗ್ಗೆ ಅನೇಕರಿಂದ ಅವರು ಟೀಕೆಗೆ ಒಳಗಾಗಿದ್ದರು. ರಾಜ್ ಕುಂದ್ರಾ ಮಾಡಿದ ಅವಾಂತರದಿಂದ ಅವರ ಪತ್ನಿ ಶಿಲ್ಪಾ ಶೆಟ್ಟಿ ಸಾಕಷ್ಟು ಮುಜುಗರ ಅನುಭವಿಸಿದ್ದರು.

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ