AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?

Adipurush Second Trailer: ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ.

Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?
ಪ್ರಭಾಸ್​
ಮದನ್​ ಕುಮಾರ್​
|

Updated on: Jun 04, 2023 | 10:10 AM

Share

ಹಲವು ಕಾರಣಗಳಿಂದಾಗಿ ‘ಆದಿಪುರುಷ್​’ ಸಿನಿಮಾ (Adipurush Movie) ಹೈಪ್​ ಸೃಷ್ಟಿ ಮಾಡಿದೆ. ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿರುವ ಈ ಸಿನಿಮಾದಲ್ಲಿ ಪ್ರಭಾಸ್​ (Prabhas) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಾಮಾಯಣದ ಕತೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಈಗಾಗಲೇ ಅಭಿಮಾನಿಗಳು ಒಂದು ಟ್ರೇಲರ್​ ನೋಡಿ ಖುಷಿಪಟ್ಟಿದ್ದಾರೆ. ಈಗ ಹೊಸದೊಂದು ಸುದ್ದಿ ಕೇಳಿಬರುತ್ತಿದೆ. ಈ ಸಿನಿಮಾದ ಮತ್ತೊಂದು ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಜೂನ್​ 6ರಂದು ತಿರುಪತಿಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಲಿದೆ. ಅಂದು ‘ಆದಿಪುರುಷ್​’ ಚಿತ್ರದ 2ನೇ ಟ್ರೇಲರ್​ ಬಿಡುಗಡೆ (Adipurush Second Trailer) ಆಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ನಟ ಪ್ರಭಾಸ್​ ಮತ್ತು ನಟಿ ಕೃತಿ ಸನೋನ್ ಅವರು ಹೊಸ ಟ್ರೇಲರ್​ ಲಾಂಚ್​ ಮಾಡುವ ಸಾಧ್ಯತೆ ಇದೆ.

ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ. ರಾಮ-ರಾವಣರ ನಡುವಿನ ಕಾಳಗ ಹೇಗಿರಲಿದೆ ಎಂಬುದನ್ನು ತಿಳಿಸಲು 2ನೇ ಟ್ರೇಲರ್​ ಬಿಡುಗಡೆ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ.

ಪ್ರಭಾಸ್​ ಅಭಿಮಾನಿಗಳು ‘ಆದಿಪುರುಷ್​’ ಚಿತ್ರಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಪ್ರಭಾಸ್​ ಪಾಲಿಗೆ ಈ ಚಿತ್ರ ಬಹಳ ಮಹತ್ವದ ಪ್ರಾಜೆಕ್ಟ್​ ಆಗಿದೆ. ‘ಆದಿಪುರುಷ್​’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ಅವರಿಗೆ ಇದೆ. ಹಾಗಾದರೆ ‘ಆದಿಪುರುಷ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಬಾಕ್ಸ್​ ಆಫೀಸ್​ ತಜ್ಞರ ಪ್ರಕಾರ ಈ ಸಿನಿಮಾ ಮೊದಲ ದಿನ ವಿಶ್ವಾದ್ಯಂತ 100 ಕೋಟಿ ರೂಪಾಯಿ ಬಾಚಿಕೊಳ್ಳುವ ಸಾಧ್ಯತೆ ಇದೆ. ಈ ಊಹೆ ನಿಜವಾಗುತ್ತಾ ಎಂಬುದನ್ನು ತಿಳಿಯಲು ಇನ್ನು ಕೆಲವೇ ದಿನಗಳು ಬಾಕಿ. ಓಂ ರಾವತ್​ ನಿರ್ದೇಶನದಲ್ಲಿ ‘ಆದಿಪುರುಷ್​’ ಚಿತ್ರ ಮೂಡಿಬಂದಿದೆ. ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ.

ಇದನ್ನೂ ಓದಿ: ಆದಿಪುರುಷ್ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆಗೆ ಮುನ್ನ ಸಿನಿಮಾ ಗಳಿಸಿರುವುದೆಷ್ಟು?

‘ಆದಿಪುರುಷ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಎಲ್ಲ ರಾಜ್ಯಗಳಲ್ಲೂ ಉತ್ತಮ ಓಪನಿಂಗ್​ ಪಡೆದುಕೊಳ್ಳುವ ನಿರೀಕ್ಷೆ ಇದೆ. ಹಿಂದಿ ಪ್ರೇಕ್ಷಕರಲ್ಲೂ ಈ ಸಿನಿಮಾ ಬಗ್ಗೆ ಹೈಪ್​ ಕ್ರಿಯೇಟ್​ ಆಗಿದೆ. ಬಾಲಿವುಡ್​ ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದೇ ಅದಕ್ಕೆ ಕಾರಣ. ಅಲ್ಲದೇ ಪ್ರಭಾಸ್​ ಅವರಿಗೆ ಉತ್ತರ ಭಾರತದಲ್ಲಿ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಎಲ್ಲ ಕಾರಣದಿಂದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೊದಲ ದಿನ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Prabhas: ‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಅಭಿಮಾನಿಗಳಿಗೆ ಡಬಲ್ ಧಮಾಕ; ಹೊರಬಿತ್ತು ಹೊಸ ಸುದ್ದಿ

ಈ ಸಿನಿಮಾದಲ್ಲಿ ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಮೊದಲ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ