AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?

Adipurush Second Trailer: ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ.

Prabhas: ‘ಆದಿಪುರುಷ್​’ ಚಿತ್ರತಂಡ ರಿಲೀಸ್​ ಮಾಡಲಿದೆ ಇನ್ನೊಂದು ಟ್ರೇಲರ್​; ಏನಿದು ಸ್ಪೆಷಲ್​ ನ್ಯೂಸ್​?
ಪ್ರಭಾಸ್​
ಮದನ್​ ಕುಮಾರ್​
|

Updated on: Jun 04, 2023 | 10:10 AM

Share

ಹಲವು ಕಾರಣಗಳಿಂದಾಗಿ ‘ಆದಿಪುರುಷ್​’ ಸಿನಿಮಾ (Adipurush Movie) ಹೈಪ್​ ಸೃಷ್ಟಿ ಮಾಡಿದೆ. ಜೂನ್​ 16ರಂದು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿರುವ ಈ ಸಿನಿಮಾದಲ್ಲಿ ಪ್ರಭಾಸ್​ (Prabhas) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಾಮಾಯಣದ ಕತೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಈಗಾಗಲೇ ಅಭಿಮಾನಿಗಳು ಒಂದು ಟ್ರೇಲರ್​ ನೋಡಿ ಖುಷಿಪಟ್ಟಿದ್ದಾರೆ. ಈಗ ಹೊಸದೊಂದು ಸುದ್ದಿ ಕೇಳಿಬರುತ್ತಿದೆ. ಈ ಸಿನಿಮಾದ ಮತ್ತೊಂದು ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಜೂನ್​ 6ರಂದು ತಿರುಪತಿಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ನಡೆಯಲಿದೆ. ಅಂದು ‘ಆದಿಪುರುಷ್​’ ಚಿತ್ರದ 2ನೇ ಟ್ರೇಲರ್​ ಬಿಡುಗಡೆ (Adipurush Second Trailer) ಆಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ನಟ ಪ್ರಭಾಸ್​ ಮತ್ತು ನಟಿ ಕೃತಿ ಸನೋನ್ ಅವರು ಹೊಸ ಟ್ರೇಲರ್​ ಲಾಂಚ್​ ಮಾಡುವ ಸಾಧ್ಯತೆ ಇದೆ.

ಪ್ರಭಾಸ್​ ನಟನೆಯ ಸಿನಿಮಾ ಎಂದರೆ ಅಭಿಮಾನಿಗಳು ಆ್ಯಕ್ಷನ್​ ಬಯಸುತ್ತಾರೆ. ‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ರಾಮನಾಗಿ ನಟಿಸಿದ್ದರೆ, ರಾವಣನಾಗಿ ಸೈಫ್​ ಅಲಿ ಖಾನ್​ ಅಭಿನಯಿಸಿದ್ದಾರೆ. ರಾಮ-ರಾವಣರ ನಡುವಿನ ಕಾಳಗ ಹೇಗಿರಲಿದೆ ಎಂಬುದನ್ನು ತಿಳಿಸಲು 2ನೇ ಟ್ರೇಲರ್​ ಬಿಡುಗಡೆ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಆಗಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ.

ಪ್ರಭಾಸ್​ ಅಭಿಮಾನಿಗಳು ‘ಆದಿಪುರುಷ್​’ ಚಿತ್ರಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾದಿದ್ದಾರೆ. ಪ್ರಭಾಸ್​ ಪಾಲಿಗೆ ಈ ಚಿತ್ರ ಬಹಳ ಮಹತ್ವದ ಪ್ರಾಜೆಕ್ಟ್​ ಆಗಿದೆ. ‘ಆದಿಪುರುಷ್​’ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ಅವರಿಗೆ ಇದೆ. ಹಾಗಾದರೆ ‘ಆದಿಪುರುಷ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರಲ್ಲೂ ಇದೆ. ಬಾಕ್ಸ್​ ಆಫೀಸ್​ ತಜ್ಞರ ಪ್ರಕಾರ ಈ ಸಿನಿಮಾ ಮೊದಲ ದಿನ ವಿಶ್ವಾದ್ಯಂತ 100 ಕೋಟಿ ರೂಪಾಯಿ ಬಾಚಿಕೊಳ್ಳುವ ಸಾಧ್ಯತೆ ಇದೆ. ಈ ಊಹೆ ನಿಜವಾಗುತ್ತಾ ಎಂಬುದನ್ನು ತಿಳಿಯಲು ಇನ್ನು ಕೆಲವೇ ದಿನಗಳು ಬಾಕಿ. ಓಂ ರಾವತ್​ ನಿರ್ದೇಶನದಲ್ಲಿ ‘ಆದಿಪುರುಷ್​’ ಚಿತ್ರ ಮೂಡಿಬಂದಿದೆ. ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ.

ಇದನ್ನೂ ಓದಿ: ಆದಿಪುರುಷ್ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆಗೆ ಮುನ್ನ ಸಿನಿಮಾ ಗಳಿಸಿರುವುದೆಷ್ಟು?

‘ಆದಿಪುರುಷ್​’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿದೆ. ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಎಲ್ಲ ರಾಜ್ಯಗಳಲ್ಲೂ ಉತ್ತಮ ಓಪನಿಂಗ್​ ಪಡೆದುಕೊಳ್ಳುವ ನಿರೀಕ್ಷೆ ಇದೆ. ಹಿಂದಿ ಪ್ರೇಕ್ಷಕರಲ್ಲೂ ಈ ಸಿನಿಮಾ ಬಗ್ಗೆ ಹೈಪ್​ ಕ್ರಿಯೇಟ್​ ಆಗಿದೆ. ಬಾಲಿವುಡ್​ ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದೇ ಅದಕ್ಕೆ ಕಾರಣ. ಅಲ್ಲದೇ ಪ್ರಭಾಸ್​ ಅವರಿಗೆ ಉತ್ತರ ಭಾರತದಲ್ಲಿ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಈ ಎಲ್ಲ ಕಾರಣದಿಂದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮೊದಲ ದಿನ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Prabhas: ‘ಆದಿಪುರುಷ್’ ರಿಲೀಸ್ ದಿನ ಪ್ರಭಾಸ್ ಅಭಿಮಾನಿಗಳಿಗೆ ಡಬಲ್ ಧಮಾಕ; ಹೊರಬಿತ್ತು ಹೊಸ ಸುದ್ದಿ

ಈ ಸಿನಿಮಾದಲ್ಲಿ ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಮೊದಲ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ