ಗೃಹ ಇಲಾಖೆ ಆದೇಶದಿಂದ ಪ್ರಣೀತ್ ಮೊರೆಗೆ ಹೆಚ್ಚಿತು ಸಂಕಷ್ಟ

ಖ್ಯಾತ ಸ್ಟ್ಯಾಂಡ್‌ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಅಶ್ಲೀಲ ಹಾಗೂ ವಿಕೃತ ವಿಷಯಗಳ ಕಾರಣಕ್ಕೆ ವಿವಾದಕ್ಕೀಡಾಗಿವೆ. ಮೃತದೇಹದ ಖಾಸಗಿ ಭಾಗಗಳ ಬಗ್ಗೆ ವೈದ್ಯರ ಹೇಳಿಕೆ ಮತ್ತು ಬಿರಿಯಾನಿ ಕಥೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿವೆ. ಗೃಹ ಇಲಾಖೆ ತನಿಖೆಗೆ ಆದೇಶಿಸಿದ್ದು, ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಪ್ರಣೀತ್ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗೃಹ ಇಲಾಖೆ ಆದೇಶದಿಂದ ಪ್ರಣೀತ್ ಮೊರೆಗೆ ಹೆಚ್ಚಿತು ಸಂಕಷ್ಟ
ಪ್ರಣೀತ್
Edited By:

Updated on: Jun 13, 2026 | 11:00 AM

ಖ್ಯಾತ ಸ್ಟ್ಯಾಂಡ್‌ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಈಗ ಭಾರಿ ವಿವಾದಕ್ಕೆ ಸಿಲುಕಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಣೀತ್ ಅವರ ಹಾಸ್ಯ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಗೂ ವಿಕೃತ ವಿಷಯಗಳು ತುಂಬಿರುತ್ತವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಇಎಂ (KEM) ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಮೃತದೇಹದ ಖಾಸಗಿ ಭಾಗಗಳ ಬಗ್ಗೆ ನೇರವಾಗಿ ನೀಡಿರುವ ಆಘಾತಕಾರಿ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರೊಂದಿಗೆ ಬಿರಿಯಾನಿಯ ಕಥೆಯೂ ಅಷ್ಟೇ ಆಘಾತಕಾರಿಯಾಗಿದ್ದು, ಇವೆಲ್ಲವೂ ಹಾಸ್ಯದ ಹೆಸರಿನಲ್ಲಿ ನಡೆದಿರುವ ವಿಕೃತಿ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ವಿವಾದಾತ್ಮಕ ಹೇಳಿಕೆ ನೀಡಿದ ಮಹಿಳಾ ವೈದ್ಯರ ವಿರುದ್ಧವೂ ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಈ ಇಡೀ ಬೆಳವಣಿಗೆಯನ್ನು ಮಹಾರಾಷ್ಟ್ರ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪ್ರಣೀತ್ ಮೋರೆ ಅವರು ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಇತ್ತೀಚಿನ ಎರಡು ವಿಡಿಯೋಗಳು ಮಾತ್ರವಲ್ಲದೆ, ಅವರ ಹಿಂದಿನ ಎಲ್ಲಾ ಹಳೆಯ ವಿಡಿಯೋಗಳ ವಿಷಯವನ್ನು ಸೈಬರ್ ಪೊಲೀಸರು ಸಂಪೂರ್ಣವಾಗಿ ತನಿಖೆ ನಡೆಸಲಿದ್ದಾರೆ ಎಂದು ಗೃಹ ಇಲಾಖೆಯ ರಾಜ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇದು ಪ್ರಣೀತ್ ಮೋರೆ ಅವರಿಗೆ ದೊಡ್ಡ ಹೊಡೆತ ನೀಡಿದಂತಾಗಿದೆ.

ಮಹಿಳಾ ಆಯೋಗದಿಂದ ನೋಟಿಸ್; ನಿಷೇಧಕ್ಕೆ ಆಗ್ರಹ:

ಈ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಿಳಾ ಆಯೋಗವು ಪ್ರಣೀತ್ ಮೋರೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ಸೈಬರ್ ಸೆಲ್ ಕೂಡ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಇಂತಹ ವಿಕೃತ ಮತ್ತು ಅಶ್ಲೀಲ ಕಾರ್ಯಕ್ರಮಗಳನ್ನು ಸಮಾಜದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಬೇಡಿಕೆಯೂ ಸಾರ್ವಜನಿಕ ವಲಯದಿಂದ ಬಲವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: ಪ್ರಣೀತ್ ಮೋರೆ ಶೋನಲ್ಲಿ ಮತ್ತೊಂದು ಕರ್ಮಕಾಂಡ; ಮೃತದೇಹದ ಖಾಸಗಿ ಅಂಗಗಳ ಬಗ್ಗೆ ಲೇವಡಿ

ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಈ ಹಿಂದೆಯೂ ಹಲವು ಬಾರಿ ಅಶ್ಲೀಲ ವಿಷಯಗಳ ಕಾರಣಕ್ಕೆ ವಿವಾದಕ್ಕೀಡಾಗಿದ್ದವು. ಆದರೆ ಈ ಬಾರಿ ಗೃಹ ಇಲಾಖೆಯೇ ನೇರ ತನಿಖೆಗೆ ಆದೇಶಿಸಿರುವುದರಿಂದ ಅವರು ಕಾನೂನು ಕತ್ತರಿ ಸಿಲುಕುವುದು ಬಹುತೇಕ ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us