AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?

ಪಂಕಜ್​ ಹಾಗೂ ಪ್ರತೀಕ್​ ಅವರು 12.5 ಲಕ್ಷ ರೂಪಾಯಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದರು. ಇದಾದ ನಂತರ 25 ಲಕ್ಷ ರೂಪಾಯಿಯ ಪ್ರಶ್ನೆಯನ್ನು ಅವರ ಮುಂದೆ ಇಡಲಾಯಿತು.

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?
ಪಂಕಜ್​ ತ್ರಿಪಾಟಿ-ಅಮಿತಾಭ್​-ಪ್ರತೀಕ್​ ಗಾಂಧಿ
TV9 Web
| Edited By: |

Updated on: Oct 02, 2021 | 1:52 PM

Share

ಕೌನ್​ ಬನೇಗಾ ಕರೋಡ್​​ಪತಿ ಸೀಸನ್​ 13ಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಮಿತಾಭ್​ ಬಚ್ಚನ್​ ನಡೆಸಿಕೊಡುತ್ತಿರುವ ಈ ಶೋಗೆ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಬರುತ್ತಿದ್ದಾರೆ. ಶಾಂದಾರ್​ ಶುಕ್ರವಾರ್​ ಎಪಿಸೋಡ್​ಗೆ ಈ ಬಾರಿ ‘ಸ್ಕ್ಯಾಮ್​ 1992’ ಖ್ಯಾತಿಯ ಪ್ರತೀಕ್​ ಗಾಂಧಿ ಹಾಗೂ ‘ಮಿರ್ಜಾಪುರ್​’ ಖ್ಯಾತಿಯ ಪಂಕಜ್​ ತ್ರಿಪಾಟಿ ಆಗಮಿಸಿದ್ದರು. ಇವರಿಗೆ ಪ್ರಶ್ನೆ ಒಂದನ್ನು ಕೇಳಲಾಯಿತು. ಆದರೆ, ಈ ಪ್ರಶ್ನೆಗೆ ಉತ್ತರ ಹೇಳೋಕೆ ಇವರಿಂದ ಸಾಧ್ಯವಾಗಿಲ್ಲ.

ಪಂಕಜ್​ ಹಾಗೂ ಪ್ರತೀಕ್​ ಅವರು 12.5 ಲಕ್ಷ ರೂಪಾಯಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದರು. ಇದಾದ ನಂತರ 25 ಲಕ್ಷ ರೂಪಾಯಿಯ ಪ್ರಶ್ನೆಯನ್ನು ಅವರ ಮುಂದೆ ಇಡಲಾಯಿತು. ಆದರೆ, ಈ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಹೇಳೋಕೆ ಸಾಧ್ಯವಾಗುವುದಿಲ್ಲ ಎನ್ನುವುದು ಗೊತ್ತಾಯಿತು. ಹೀಗಾಗಿ, ಆಟದಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದರು. ಹೀಗಾಗಿ, ಇವರಿಗೆ 12.5 ಲಕ್ಷ ರೂಪಾಯಿ ಸಿಕ್ಕಿದೆ. ಹಾಗಾದರೆ ಅವರಿಗೆ ಎದುರಾದ ಪ್ರಶ್ನೆ ಯಾವುದು? ಇಲ್ಲಿದೆ ಆ ಪ್ರಶ್ನೆ.

‘ಭಾರತ ಸರ್ಕಾರವು ದೇಶದ ಯಾವ ಐತಿಹಾಸಿಕ ಸ್ಥಳಗಳಲ್ಲಿ ರಾಷ್ಟ್ರೀಯ ಕಡಲ ಹೆರಿಟೇಜ್​ ಸಂಕೀರ್ಣವನ್ನು ನಿರ್ಮಿಸಲು ಯೋಜಿಸುತ್ತಿದೆ?’ ಈ ಪ್ರಶ್ನೆಗೆ,  ಹಂಪಿ, ಕೋನಾರ್ಕ್​, ಲೋಥಾಲ್​ ಮತ್ತು ಮಹಾಬಲಿಪುರಮ್​ ಆಯ್ಕೆ ನೀಡಲಾಗಿತ್ತು.  ಪ್ರತೀಕ್​ ಹಾಗೂ ಪಂಕಜ್​ಗೆ ಆಟ ತೊರೆದ ಹೊರತಾಗಿಯೂ ಯಾವುದಾದರೂ ಒಂದು ಆಯ್ಕೆಯನ್ನು ಸೆಲೆಕ್ಟ್​ ಮಾಡುವಂತೆ ಅಮಿತಾಭ್​ ಸೂಚಿಸಿದರು. ಮಹಾಬಲಿಪುರಮ್​ ಎನ್ನುವ ಉತ್ತರ ಇಬ್ಬರ ಕಡೆಯಿಂದ ಬಂತು. ಆದರೆ, ಲೋಥಾಲ್​ ಸರಿಯಾದ ಉತ್ತರ ಆಗಿತ್ತು.

ಪ್ರತೀಕ್​ ಮತ್ತು ಪಂಕಜ್​ ಅವರು ಅಮಿತಾಭ್​ ಜತೆ ಸಾಕಷ್ಟು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಪಂಕಜ್​ ಊರಿನಲ್ಲಿ ಮ್ಯಾಚ್​ಬಾಕ್ಸ್​ ಇರಲಿಲ್ಲ. ಹೀಗಾಗಿ, ಅಕ್ಕ-ಪಕ್ಕದ ಮನೆಯಿಂದ ಬೆಂಕಿ ತರಬೇಕಾಗುತ್ತಿತ್ತು. ಇಂಥ ಹಲವು ಘಟನೆಗಳನ್ನು ಅವರು ಹಂಚಿಕೊಂಡಿದ್ದಾರೆ. ಪಂಕಜ್​ ಹಾಗೂ ಪ್ರತೀಕ್​ ಇಬ್ಬರೂ ಕಷ್ಟದಿಂದ ಚಿತ್ರರಂಗಕ್ಕೆ ಬಂದು ನೆಲೆ ಕಂಡುಕೊಂಡವರು. ಅವರು ಗೆದ್ದ ಹಣವನ್ನು ಚಾರಿಟಿ ಕೆಲಸಕ್ಕೆ ನೀಡುತ್ತಿದ್ದಾರೆ.

ಇದನ್ನೂ ಓದಿ: ತೆರೆಯ ಮೇಲೆ ಬರಲಿದೆ ಅಬ್ದುಲ್ ಕರೀಂ ತೆಲಗಿ ಹಗರಣ; ಸ್ಕ್ಯಾಮ್ 1992 ನಿರ್ದೇಶಕರಿಂದಲೇ ಸ್ಕ್ಯಾಮ್ 2003

ಕೆಬಿಸಿಯಲ್ಲಿ 1 ಕೋಟಿ ಮೊತ್ತದ ಈ ಪ್ರಶ್ನೆಗೆ ಉತ್ತರ ತಿಳಿಯದೇ ಕ್ವಿಟ್ ಮಾಡಿದ ಸ್ಪರ್ಧಿ; ನೀವು ಉತ್ತರಿಸಬಲ್ಲಿರಾ?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ