AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?

ಪಂಕಜ್​ ಹಾಗೂ ಪ್ರತೀಕ್​ ಅವರು 12.5 ಲಕ್ಷ ರೂಪಾಯಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದರು. ಇದಾದ ನಂತರ 25 ಲಕ್ಷ ರೂಪಾಯಿಯ ಪ್ರಶ್ನೆಯನ್ನು ಅವರ ಮುಂದೆ ಇಡಲಾಯಿತು.

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?
ಪಂಕಜ್​ ತ್ರಿಪಾಟಿ-ಅಮಿತಾಭ್​-ಪ್ರತೀಕ್​ ಗಾಂಧಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 02, 2021 | 1:52 PM

ಕೌನ್​ ಬನೇಗಾ ಕರೋಡ್​​ಪತಿ ಸೀಸನ್​ 13ಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಮಿತಾಭ್​ ಬಚ್ಚನ್​ ನಡೆಸಿಕೊಡುತ್ತಿರುವ ಈ ಶೋಗೆ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಬರುತ್ತಿದ್ದಾರೆ. ಶಾಂದಾರ್​ ಶುಕ್ರವಾರ್​ ಎಪಿಸೋಡ್​ಗೆ ಈ ಬಾರಿ ‘ಸ್ಕ್ಯಾಮ್​ 1992’ ಖ್ಯಾತಿಯ ಪ್ರತೀಕ್​ ಗಾಂಧಿ ಹಾಗೂ ‘ಮಿರ್ಜಾಪುರ್​’ ಖ್ಯಾತಿಯ ಪಂಕಜ್​ ತ್ರಿಪಾಟಿ ಆಗಮಿಸಿದ್ದರು. ಇವರಿಗೆ ಪ್ರಶ್ನೆ ಒಂದನ್ನು ಕೇಳಲಾಯಿತು. ಆದರೆ, ಈ ಪ್ರಶ್ನೆಗೆ ಉತ್ತರ ಹೇಳೋಕೆ ಇವರಿಂದ ಸಾಧ್ಯವಾಗಿಲ್ಲ.

ಪಂಕಜ್​ ಹಾಗೂ ಪ್ರತೀಕ್​ ಅವರು 12.5 ಲಕ್ಷ ರೂಪಾಯಿ ಪ್ರಶ್ನೆಗೆ ಸರಿಯಾದ ಉತ್ತರ ನೀಡಿದರು. ಇದಾದ ನಂತರ 25 ಲಕ್ಷ ರೂಪಾಯಿಯ ಪ್ರಶ್ನೆಯನ್ನು ಅವರ ಮುಂದೆ ಇಡಲಾಯಿತು. ಆದರೆ, ಈ ಪ್ರಶ್ನೆಗೆ ಅವರ ಕಡೆಯಿಂದ ಉತ್ತರ ಹೇಳೋಕೆ ಸಾಧ್ಯವಾಗುವುದಿಲ್ಲ ಎನ್ನುವುದು ಗೊತ್ತಾಯಿತು. ಹೀಗಾಗಿ, ಆಟದಿಂದ ಹಿಂದೆ ಸರಿಯುವುದಾಗಿ ಅವರು ಹೇಳಿದರು. ಹೀಗಾಗಿ, ಇವರಿಗೆ 12.5 ಲಕ್ಷ ರೂಪಾಯಿ ಸಿಕ್ಕಿದೆ. ಹಾಗಾದರೆ ಅವರಿಗೆ ಎದುರಾದ ಪ್ರಶ್ನೆ ಯಾವುದು? ಇಲ್ಲಿದೆ ಆ ಪ್ರಶ್ನೆ.

‘ಭಾರತ ಸರ್ಕಾರವು ದೇಶದ ಯಾವ ಐತಿಹಾಸಿಕ ಸ್ಥಳಗಳಲ್ಲಿ ರಾಷ್ಟ್ರೀಯ ಕಡಲ ಹೆರಿಟೇಜ್​ ಸಂಕೀರ್ಣವನ್ನು ನಿರ್ಮಿಸಲು ಯೋಜಿಸುತ್ತಿದೆ?’ ಈ ಪ್ರಶ್ನೆಗೆ,  ಹಂಪಿ, ಕೋನಾರ್ಕ್​, ಲೋಥಾಲ್​ ಮತ್ತು ಮಹಾಬಲಿಪುರಮ್​ ಆಯ್ಕೆ ನೀಡಲಾಗಿತ್ತು.  ಪ್ರತೀಕ್​ ಹಾಗೂ ಪಂಕಜ್​ಗೆ ಆಟ ತೊರೆದ ಹೊರತಾಗಿಯೂ ಯಾವುದಾದರೂ ಒಂದು ಆಯ್ಕೆಯನ್ನು ಸೆಲೆಕ್ಟ್​ ಮಾಡುವಂತೆ ಅಮಿತಾಭ್​ ಸೂಚಿಸಿದರು. ಮಹಾಬಲಿಪುರಮ್​ ಎನ್ನುವ ಉತ್ತರ ಇಬ್ಬರ ಕಡೆಯಿಂದ ಬಂತು. ಆದರೆ, ಲೋಥಾಲ್​ ಸರಿಯಾದ ಉತ್ತರ ಆಗಿತ್ತು.

ಪ್ರತೀಕ್​ ಮತ್ತು ಪಂಕಜ್​ ಅವರು ಅಮಿತಾಭ್​ ಜತೆ ಸಾಕಷ್ಟು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಪಂಕಜ್​ ಊರಿನಲ್ಲಿ ಮ್ಯಾಚ್​ಬಾಕ್ಸ್​ ಇರಲಿಲ್ಲ. ಹೀಗಾಗಿ, ಅಕ್ಕ-ಪಕ್ಕದ ಮನೆಯಿಂದ ಬೆಂಕಿ ತರಬೇಕಾಗುತ್ತಿತ್ತು. ಇಂಥ ಹಲವು ಘಟನೆಗಳನ್ನು ಅವರು ಹಂಚಿಕೊಂಡಿದ್ದಾರೆ. ಪಂಕಜ್​ ಹಾಗೂ ಪ್ರತೀಕ್​ ಇಬ್ಬರೂ ಕಷ್ಟದಿಂದ ಚಿತ್ರರಂಗಕ್ಕೆ ಬಂದು ನೆಲೆ ಕಂಡುಕೊಂಡವರು. ಅವರು ಗೆದ್ದ ಹಣವನ್ನು ಚಾರಿಟಿ ಕೆಲಸಕ್ಕೆ ನೀಡುತ್ತಿದ್ದಾರೆ.

ಇದನ್ನೂ ಓದಿ: ತೆರೆಯ ಮೇಲೆ ಬರಲಿದೆ ಅಬ್ದುಲ್ ಕರೀಂ ತೆಲಗಿ ಹಗರಣ; ಸ್ಕ್ಯಾಮ್ 1992 ನಿರ್ದೇಶಕರಿಂದಲೇ ಸ್ಕ್ಯಾಮ್ 2003

ಕೆಬಿಸಿಯಲ್ಲಿ 1 ಕೋಟಿ ಮೊತ್ತದ ಈ ಪ್ರಶ್ನೆಗೆ ಉತ್ತರ ತಿಳಿಯದೇ ಕ್ವಿಟ್ ಮಾಡಿದ ಸ್ಪರ್ಧಿ; ನೀವು ಉತ್ತರಿಸಬಲ್ಲಿರಾ?

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ