AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ

ಪ್ರೀತಿಗೆ ಬೇರೆಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು, ಹೊಸ ಪಾತ್ರಗಳಿಗೆ ತೆರೆದುಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಅಭಿಮಾನಿಗಳು ಇದಕ್ಕೆ ಅವಕಾಶ ನೀಡುತ್ತಿಲ್ಲ.

ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ
ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 22, 2021 | 1:31 PM

Share

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಕೆಲ ಪಾತ್ರಗಳಲ್ಲಿ ಕಾಣಿಸಿಕೊಂಡ ನಂತರ ಅದೇ ರೀತಿಯ ಪಾತ್ರಗಳಲ್ಲಿ ನೋಡೋಕೆ ಅಭಿಮಾನಿಗಳು ಇಷ್ಟಪಡುತ್ತಾರೆ. ಇದಕ್ಕೆ ಪ್ರೀತಿ ಜಾಂಗಿಯಾನಿ ಉತ್ತಮ ಉದಾಹರಣೆ. ಇವರು ಸಿನಿಮಾಗಳಲ್ಲಿ ಸೀರೆಉಟ್ಟು ಲಕ್ಷಣವಾಗಿ ಕಾಣಿಸಿಕೊಳ್ಳುತ್ತಿದ್ದರು. ಅವರನ್ನು ಅದೇ ರೀತಿ ನೋಡಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಇದು ಅವರಿಗೆ ಉಸಿರುಗಟ್ಟಿಸುತ್ತಿದೆ.

ಪ್ರೀತಿಗೆ ಬೇರೆಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು, ಹೊಸ ಪಾತ್ರಗಳಿಗೆ ತೆರೆದುಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಅಭಿಮಾನಿಗಳು ಇದಕ್ಕೆ ಅವಕಾಶ ನೀಡುತ್ತಿಲ್ಲ. ‘ವಿಕ್ಟೋರಿಯಾ ನಂಬರ್​ 203 ಸಿನಿಮಾದಲ್ಲಿ ನೆಗೆಟಿವ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಇದು ನನಗೆ ಇಷ್ಟವಾಗಿತ್ತು. ಆದರೆ, ಫ್ಯಾನ್ಸ್​ಗೆ ಇದು ಇಷ್ಟವಾಗಿಲ್ಲ. ನಾನು ಇದನ್ನು ಬದಲಾಯಿಸೋಕೆ ಪ್ರಯತ್ನಿಸಿದ್ದೀನಿ. ಏನೇ ಮಾಡಿದರೂ ಇದನ್ನು ಅವರು ಒಪ್ಪಿಕೊಳ್ಳುತ್ತಿಲ್ಲ’ ಎನ್ನುತ್ತಾರೆ ಪ್ರೀತಿ.

‘ಕಿಸ್ಸಿಂಗ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಬೇಕು ಎಂದು ನನಗೆ ಅನಿಸಿದರೂ ಅದನ್ನು ಮಾಡೋಕೆ ಸಾಧ್ಯವಾಗುವುದಿಲ್ಲ. ನನಗೆ ಒಂದೇ ಪಾತ್ರಕ್ಕೆ ಸೀಮಿತವಾಗೋಕೆ ಇಷ್ಟವಿಲ್ಲ. ಅಸಹಾಯಕ ಸೊಸೆಯ ಪಾತ್ರಗಳಲ್ಲಿ ಕಾಣಿಸಿಕೊಳ್ಳೋಕೆ ನನಗೆ ಮನಸ್ಸಿಲ್ಲ. ಆದರೆ, ಅದೇ ರೀತಿಯ ಪಾತ್ರಗಳು ನನ್ನ ಹುಡುಕಿಕೊಂಡು ಬರುತ್ತಿವೆ. ಇದನ್ನು ನಾನು ಒಪ್ಪಿಕೊಳ್ಳಲೇ ಬೇಕಿದೆ. ನನ್ನನ್ನು ಅಭಿಮಾನಿಗಳು ಒಂದು ಪಾತ್ರಕ್ಕೆ ಸೀಮಿತ ಮಾಡಿದ್ದಾರೆ’ ಎಂದು ಬೇಸರ ಹೊರಹಾಕುತ್ತಾರೆ ಅವರು.

1997ರಲ್ಲಿ ರಿಲೀಸ್​ ಆದ ‘ಯೇ ಹೇ ಪ್ರೇಮ್​’ ಆಲ್ಬಮ್​ ಮೂಲಕ ಬಣ್ಣದ ಲೋಕಕ್ಕೆ ಪ್ರೀತಿ ಪರಿಚಯಗೊಂಡರು. ನಂತರ ಅವರಿಗೆ ಸಿನಿಮಾ ಅವಕಾಶಗಳು ಬಂದವು. 1999ರಿಂದ ಇಲ್ಲಿಯವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2017ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿಲ್ಲ. ಇವರಿಗೆ ಮದುವೆ ಆಗಿದ್ದು, ಇಬ್ಬರು ಮಕ್ಕಳಿದ್ದಾರೆ. ಸದ್ಯ, ಕುಟುಂಬದವರ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಮನೆಯಲ್ಲಿ ಕ್ಯಾಮೆರಾ ಎದುರೇ ಲೈಂಗಿಕ ಕ್ರಿಯೆ ನಡೆದಿದೆ, ಆದರೆ ತೋರಿಸಿಲ್ಲ’; ಸತ್ಯ ಬಾಯ್ಬಿಟ್ಟ ಸ್ಪರ್ಧಿ

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ