ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ

ಪ್ರೀತಿಗೆ ಬೇರೆಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು, ಹೊಸ ಪಾತ್ರಗಳಿಗೆ ತೆರೆದುಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಅಭಿಮಾನಿಗಳು ಇದಕ್ಕೆ ಅವಕಾಶ ನೀಡುತ್ತಿಲ್ಲ.

ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ
ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 22, 2021 | 1:31 PM

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಕೆಲ ಪಾತ್ರಗಳಲ್ಲಿ ಕಾಣಿಸಿಕೊಂಡ ನಂತರ ಅದೇ ರೀತಿಯ ಪಾತ್ರಗಳಲ್ಲಿ ನೋಡೋಕೆ ಅಭಿಮಾನಿಗಳು ಇಷ್ಟಪಡುತ್ತಾರೆ. ಇದಕ್ಕೆ ಪ್ರೀತಿ ಜಾಂಗಿಯಾನಿ ಉತ್ತಮ ಉದಾಹರಣೆ. ಇವರು ಸಿನಿಮಾಗಳಲ್ಲಿ ಸೀರೆಉಟ್ಟು ಲಕ್ಷಣವಾಗಿ ಕಾಣಿಸಿಕೊಳ್ಳುತ್ತಿದ್ದರು. ಅವರನ್ನು ಅದೇ ರೀತಿ ನೋಡಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಇದು ಅವರಿಗೆ ಉಸಿರುಗಟ್ಟಿಸುತ್ತಿದೆ.

ಪ್ರೀತಿಗೆ ಬೇರೆಬೇರೆ ರೀತಿಯ ಪಾತ್ರಗಳನ್ನು ಮಾಡಬೇಕು, ಹೊಸ ಪಾತ್ರಗಳಿಗೆ ತೆರೆದುಕೊಳ್ಳಬೇಕು ಎನ್ನುವ ಆಸೆ ಇದೆ. ಆದರೆ, ಅಭಿಮಾನಿಗಳು ಇದಕ್ಕೆ ಅವಕಾಶ ನೀಡುತ್ತಿಲ್ಲ. ‘ವಿಕ್ಟೋರಿಯಾ ನಂಬರ್​ 203 ಸಿನಿಮಾದಲ್ಲಿ ನೆಗೆಟಿವ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಇದು ನನಗೆ ಇಷ್ಟವಾಗಿತ್ತು. ಆದರೆ, ಫ್ಯಾನ್ಸ್​ಗೆ ಇದು ಇಷ್ಟವಾಗಿಲ್ಲ. ನಾನು ಇದನ್ನು ಬದಲಾಯಿಸೋಕೆ ಪ್ರಯತ್ನಿಸಿದ್ದೀನಿ. ಏನೇ ಮಾಡಿದರೂ ಇದನ್ನು ಅವರು ಒಪ್ಪಿಕೊಳ್ಳುತ್ತಿಲ್ಲ’ ಎನ್ನುತ್ತಾರೆ ಪ್ರೀತಿ.

‘ಕಿಸ್ಸಿಂಗ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಬೇಕು ಎಂದು ನನಗೆ ಅನಿಸಿದರೂ ಅದನ್ನು ಮಾಡೋಕೆ ಸಾಧ್ಯವಾಗುವುದಿಲ್ಲ. ನನಗೆ ಒಂದೇ ಪಾತ್ರಕ್ಕೆ ಸೀಮಿತವಾಗೋಕೆ ಇಷ್ಟವಿಲ್ಲ. ಅಸಹಾಯಕ ಸೊಸೆಯ ಪಾತ್ರಗಳಲ್ಲಿ ಕಾಣಿಸಿಕೊಳ್ಳೋಕೆ ನನಗೆ ಮನಸ್ಸಿಲ್ಲ. ಆದರೆ, ಅದೇ ರೀತಿಯ ಪಾತ್ರಗಳು ನನ್ನ ಹುಡುಕಿಕೊಂಡು ಬರುತ್ತಿವೆ. ಇದನ್ನು ನಾನು ಒಪ್ಪಿಕೊಳ್ಳಲೇ ಬೇಕಿದೆ. ನನ್ನನ್ನು ಅಭಿಮಾನಿಗಳು ಒಂದು ಪಾತ್ರಕ್ಕೆ ಸೀಮಿತ ಮಾಡಿದ್ದಾರೆ’ ಎಂದು ಬೇಸರ ಹೊರಹಾಕುತ್ತಾರೆ ಅವರು.

1997ರಲ್ಲಿ ರಿಲೀಸ್​ ಆದ ‘ಯೇ ಹೇ ಪ್ರೇಮ್​’ ಆಲ್ಬಮ್​ ಮೂಲಕ ಬಣ್ಣದ ಲೋಕಕ್ಕೆ ಪ್ರೀತಿ ಪರಿಚಯಗೊಂಡರು. ನಂತರ ಅವರಿಗೆ ಸಿನಿಮಾ ಅವಕಾಶಗಳು ಬಂದವು. 1999ರಿಂದ ಇಲ್ಲಿಯವರೆಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2017ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿಲ್ಲ. ಇವರಿಗೆ ಮದುವೆ ಆಗಿದ್ದು, ಇಬ್ಬರು ಮಕ್ಕಳಿದ್ದಾರೆ. ಸದ್ಯ, ಕುಟುಂಬದವರ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಮನೆಯಲ್ಲಿ ಕ್ಯಾಮೆರಾ ಎದುರೇ ಲೈಂಗಿಕ ಕ್ರಿಯೆ ನಡೆದಿದೆ, ಆದರೆ ತೋರಿಸಿಲ್ಲ’; ಸತ್ಯ ಬಾಯ್ಬಿಟ್ಟ ಸ್ಪರ್ಧಿ

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ