AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗೆ ಬಂದ ದೀಪಿಕಾ-ರಣ್ವೀರ್, ಮಗುವಿನ ಆಗಮನದ ನಿರೀಕ್ಷೆ

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ಪಡುಕೋಣೆ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಸೆಪ್ಟೆಂಬರ್ 07) ಸಂಜೆ ವೇಳೆಗೆ ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್ ಹಾಗೂ ಇತರೆ ಕೆಲವು ಸಂಬಂಧಿಗಳು ಆಸ್ಪತ್ರೆಗೆ ಹೋಗಿದ್ದಾರೆ.

ಆಸ್ಪತ್ರೆಗೆ ಬಂದ ದೀಪಿಕಾ-ರಣ್ವೀರ್, ಮಗುವಿನ ಆಗಮನದ ನಿರೀಕ್ಷೆ
ಮಂಜುನಾಥ ಸಿ.
|

Updated on: Sep 07, 2024 | 7:48 PM

Share

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ದೀಪಿಕಾ ಪಡುಕೋಣೆ ಇಂದು (ಸೆಪ್ಟೆಂಬರ್ 07) ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ ರಣ್ವೀರ್ ಸಿಂಗ್ ಮತ್ತು ಇತರೆ ಕುಟುಂಬ ಸದಸ್ಯರೊಟ್ಟಿಗೆ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ಆಗಮಿಸಿದ್ದಾರೆ. ಇಂದು ಸಂಜೆ ವೇಳೆಗೆ ದೀಪಿಕಾ-ರಣ್ವೀರ್ ಅವರುಗಳು ದಕ್ಷಿಣ ಮುಂಬೈನ ಎಚ್​ಎನ್​ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಣ್ವೀರ್-ದೀಪಿಕಾ ಅವರುಗಳು ಆಸ್ಪತ್ರೆ ಒಳಗೆ ಹೋಗುತ್ತಿರುವ ವಿಡಿಯೋಗಳು ಇದೀಗ ವೈರಲ್ ಆಗಿವೆ.

ಅಸಲಿಗೆ ದೀಪಿಕಾ ಪಡುಕೋಣೆಗೆ ಇದೇ ತಿಂಗಳ 28 ಕ್ಕೆ ಡೇಟ್ ನೀಡಲಾಗಿತ್ತು. ಅದೇ ದಿನ ದೀಪಿಕಾರ ಮಾಜಿ ಪ್ರಿಯಕರ ರಣ್​ಬೀರ್ ಕಪೂರ್ ಹುಟ್ಟುಹಬ್ಬವೂ ಸಹ ಇತ್ತು. ಸೆಪ್ಟೆಂಬರ್ 20ರ ಮೇಲೆಯೇ ದೀಪಿಕಾಗೆ ಮಗು ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಇಂದು ಅಚಾನಕ್ಕಾಗಿ ದೀಪಿಕಾ ಹಾಗೂ ರಣ್​ವೀರ್ ಸಿಂಗ್ ಅವರುಗಳು ಆಸ್ಪತ್ರೆಗೆ ಬಂದಿರುವುದು ಗಮನಿಸಿದರೆ ಇನ್ನೂ ಶೀಘ್ರವಾಗಿ ಅಥವಾ ಇಂದೇ ದೀಪಿಕಾಗೆ ಮಗು ಆಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ:ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ

ಇಂದು (ಸೆಪ್ಟೆಂಬರ್ 07) ಬೆಳಿಗ್ಗೆಯಷ್ಟೆ ದೀಪಿಕಾ ಪಡುಕೋಣೆ ಮತ್ತು ರಣ್​ವೀರ್ ಸಿಂಗ್ ಅವರುಗಳು ಮುಂಬೈನಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಿದ್ದರು. ಇಬ್ಬರೂ ಒಟ್ಟಿಗೆ ತೆರಳಿ ಗಣೇಶನ ದರ್ಶನ ಮಾಡಿ ಬಂದಿದ್ದರು. ವಿಶೇಷ ಪೂಜೆಯನ್ನು ಸಹ ಮಾಡಿಸಿದ್ದರು. ಗಣೇಶನ ದರ್ಶನಕ್ಕೆ ಆಗಮಿಸಿದ್ದ ವೇಳೆ ದೀಪಿಕಾ ಆರಾಮವಾಗಿಯೇ ಇದ್ದರು, ಯಾವುದೇ ಬಳಲಿಕೆ ಇದ್ದಂತಿರಲಿಲ್ಲ. ಆದರೆ ಸಂಜೆ ವೇಳೆಗೆ ಹಠಾತ್ತನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರುಗಳು 2018ರ ನವೆಂಬರ್ 14 ರಂದು ಮದುವೆಯಾಗಿದ್ದರು. ಬಹಳ ವರ್ಷಗಳ ಬಳಿಕ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದೀಪಿಕಾರ ಹೆರಿಗೆ ಲಂಡನ್​ನಲ್ಲಿ ಆಗಲಿದೆ ಎಂಬ ಸುದ್ದಿಯೂ ಸಹ ಹರಿದಾಡಿತ್ತು. ಆದರೆ ಅದೆಲ್ಲ ಈಗ ಸುಳ್ಳಾಗಿದ್ದು, ದೀಪಿಕಾರ ಮೊದಲ ಮಗು ಮುಂಬೈನಲ್ಲಿಯೇ ಜನಿಸಲಿದೆ. ಆದಷ್ಟು ಬೇಗ ಸಿಹಿ ಸುದ್ದಿಯನ್ನು ದೀಪಿಕಾ ನೀಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ