AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲಿಲ್ಲ’: ಕಂಬ್ಯಾಕ್ ಬಗ್ಗೆ ಪ್ರೀತಿ ಜಿಂಟಾ ಮಾತು

ರಾಜ್​ಕುಮಾರ್ ಸಂತೋಷಿ ನಿರ್ದೇಶನದ ‘ಬಟ್ವಾರಾ 1947’ ಸಿನಿಮಾದಲ್ಲಿ ಸನ್ನಿ ಡಿಯೋಲ್, ಪ್ರೀತಿ ಜಿಂಟಾ ಮುಖ್ಯಭೂಮಿಕೆ ನಿಭಾಯಿಸಿದ್​ದಾರೆ. ಈ ಸಿನಿಮಾ ಮೂಲಕ ಪ್ರೀತಿ ಜಿಂಟಾ ಅವರು ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಆದರೆ ಇಷ್ಟು ವರ್ಷಗಳ ಕಾಲ ತಾವು ಸಿನಿಮಾವನ್ನು ಮಿಸ್ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

‘ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲಿಲ್ಲ’: ಕಂಬ್ಯಾಕ್ ಬಗ್ಗೆ ಪ್ರೀತಿ ಜಿಂಟಾ ಮಾತು
Preity Zinta
ಮದನ್​ ಕುಮಾರ್​
|

Updated on: Aug 05, 2026 | 7:22 PM

Share

2000ರ ದಶಕದಲ್ಲಿ ಬಾಲಿವುಡ್‌ನ ಅತ್ಯಂತ ಯಶಸ್ವಿ ಹಾಗೂ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿಯರಲ್ಲಿ ಒಬ್ಬರಾಗಿದ್ದ ಪ್ರೀತಿ ಜಿಂಟಾ (Preity Zinta) ಅವರು ಮದುವೆ ಮತ್ತು ಮಕ್ಕಳು ಆದ ನಂತರ ಬಣ್ಣದ ಲೋಕದಿಂದ ದೂರ ಉಳಿದಿದ್ದರು. 2008ರ ನಂತರ ಅಪರೂಪಕ್ಕೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರು, 2018ರ ಬಳಿಕ ತಮ್ಮ ಪೂರ್ಣ ಸಮಯವನ್ನು ಕುಟುಂಬ ಮತ್ತು ಮಕ್ಕಳ ಪಾಲನೆಗಾಗಿಯೇ ಮೀಸಲಿಟ್ಟಿದ್ದರು. ಇದೀಗ ಬರೋಬ್ಬರಿ 8 ವರ್ಷಗಳ ಸುದೀರ್ಘ ವಿರಾಮದ ನಂತರ ರಾಜ್​ಕುಮಾರ್ ಸಂತೋಷಿ ನಿರ್ದೇಶನದ ‘ಬಟ್ವಾರಾ 1947’ (Batwara 1947) ಚಿತ್ರದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರವು ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

‘ಬಟ್ವಾರಾ 1947’ ಚಿತ್ರ ಬಿಡುಗಡೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರೀತಿ ಜಿಂಟಾ ಅವರು ತಮ್ಮ ಈ ಕಂಬ್ಯಾಕ್ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ದಿನಗಳ ಬಗ್ಗೆ ಆಸಕ್ತಿಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ದೀರ್ಘ ವಿರಾಮದ ನಂತರ ಮತ್ತೆ ಕ್ಯಾಮೆರಾ ಎದುರಿಸುವಾಗ ಹೇಗನ್ನಿಸಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆರಂಭದಲ್ಲಿ ತಮಗೆ ತುಂಬಾ ಭಯ ಮತ್ತು ಆತಂಕವಿತ್ತು ಎಂದು ಒಪ್ಪಿಕೊಂಡರು.

‘ಮೊದಲ ದಿನವೇ ನಿರ್ದೇಶಕ ರಾಜ್​ಕುಮಾರ್ ಸಂತೋಷಿ ಅವರು ಈ ಸಿನಿಮಾದ ಅತ್ಯಂತ ಕಷ್ಟಕರವಾದ ದೃಶ್ಯವನ್ನು ಶೂಟ್ ಮಾಡುವ ಮೂಲಕ ನನಗೆ ಹಿಂಸೆ ನೀಡಿದರು. ಆ ದೃಶ್ಯ ನಟಿಸುವಾಗ ನಾನು ಆತಂಕದಿಂದ ನಡುಗುತ್ತಿದ್ದೆ. ಆಗ ನನ್ನ ಜೊತೆಗಿದ್ದ ಸನ್ನಿ ಡಿಯೋಲ್ ಅವರು ಧೈರ್ಯ ತುಂಬಿದರು. ಸನ್ನಿ ಅತ್ಯಂತ ಪ್ರೀತಿಯ ಮತ್ತು ವಿಶಾಲ ಮನಸ್ಸಿನ ವ್ಯಕ್ತಿ. ಅವರು ನನ್ನನ್ನು ಸಮಾಧಾನಪಡಿಸಿದರು. ಮೊದಲ ದಿನದ ಆ ಕಷ್ಟದ ಸೀನ್ ಮುಗಿದ ನಂತರ ಎಲ್ಲವೂ ಸುಲಭವಾಯಿತು’ ಎಂದು ಶೂಟಿಂಗ್ ನೆನಪನ್ನು ಪ್ರೀತಿ ಜಿಂಟಾ ಹಂಚಿಕೊಂಡರು.

‘ಸಿನಿಮಾಗಿಂತ ಮಕ್ಕಳೇ ನನ್ನ ದೊಡ್ಡ ಸಾಧನೆ’

2018ರಲ್ಲಿ ಸನ್ನಿ ಡಿಯೋಲ್ ಜೊತೆ ನಟಿಸಿದ್ದ ‘ಭಯ್ಯಾಜಿ ಸೂಪರ್‌ಹಿಟ್’ ಸಿನಿಮಾದ ನಂತರ ಪ್ರೀತಿ ಜಿಂಟಾ ನಟಿಸಿರಲಿಲ್ಲ. ಆದರೆ ಈ ಅವಧಿಯಲ್ಲಿ ತಾವು ಸಿನಿಮಾವನ್ನು ಮಿಸ್ ಮಾಡಿಕೊಳ್ಳಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳಲೇ ಇಲ್ಲ. ಕುಟುಂಬದ ಜೊತೆ ಸಮಯ ಕಳೆಯುವುದು, ಮಕ್ಕಳನ್ನು ಬೆಳೆಸುವುದು ಮತ್ತು ವೈಯಕ್ತಿಕ ಜೀವನದ ಕಡೆ ಗಮನಹರಿಸುವುದು ನನಗೆ ಹೊಸ ಅನುಭವ ನೀಡಿತು. ನನ್ನ ವೃತ್ತಿಜೀವನದಲ್ಲಿ ನಾನು ಎಷ್ಟೇ ದೊಡ್ಡ ಮೈಲಿಗಲ್ಲುಗಳನ್ನು ಸಾಧಿಸಿದ್ದರೂ, ನನಗೆ ಮಕ್ಕಳು ಹುಟ್ಟಿದ್ದೇ ನನ್ನ ಜೀವನದ ಅತಿ ದೊಡ್ಡ ಸಾಧನೆ’ ಎಂದು ಪ್ರೀತಿ ಹೆಮ್ಮೆಯಿಂದ ಹೇಳಿದರು.

ಇದನ್ನೂ ಓದಿ: ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್ ಮಾಡಿದ್ದು ನಿಜವೇ? ಉತ್ತರಿಸಿದ ಬ್ರೆಟ್ ಲೀ

ಪಾತ್ರಕ್ಕೆ ಜೀವ ತುಂಬಲು ನೆರವಾಯಿತು:

‘ಬಟ್ವಾರಾ 1947’ ಸಿನಿಮಾದಲ್ಲಿ ಪ್ರೀತಿ ಜಿಂಟಾ ಅವರು ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತ-ಪಾಕ್ ವಿಭಜನೆಯ ನಂತರ ಲಾಹೋರ್‌ನಲ್ಲಿರುವ ತಮ್ಮ ಮನೆಯಲ್ಲಿ ಆಶ್ರಯ ಪಡೆಯುವ ಹಿಂದೂ ಮಹಿಳೆಗೆ ಆಕೆಯ ಪತಿ ಆಶ್ರಯ ನೀಡುವ ಕಥಾಹಂದರ ಚಿತ್ರದಲ್ಲಿದೆ. ಈ ಪಾತ್ರದ ಬಗ್ಗೆ ಮಾತನಾಡಿದ ಪ್ರೀತಿ ಜಿಂಟಾ, ‘ನಾನು ತಾಯಿಯಾಗಿರುವುದು ಈ ಪಾತ್ರದ ಭಾವನೆಯನ್ನು ಅರ್ಥಮಾಡಿಕೊಳ್ಳಲು ನೆರವಾಯಿತು. 2026ರದಲ್ಲೂ ನನ್ನ ಮೊದಲ ಆದ್ಯತೆ ನನ್ನ ಕುಟುಂಬವೇ ಆಗಿದೆ. ಹಾಗಿರುವಾಗ 1947ರ ದೇಶ ವಿಭಜನೆಯಂತಹ ಕಠಿಣ ಸಮಯದಲ್ಲಿ ಜನರ ಆಲೋಚನೆ ಮತ್ತು ಕುಟುಂಬದ ಮೇಲಿನ ಕಾಳಜಿ ಹೇಗಿರುತ್ತಿತ್ತು ಎಂಬುದನ್ನು ನಾನು ಸುಲಭವಾಗಿ ಕನೆಕ್ಟ್ ಮಾಡಿಕೊಳ್ಳಲು ಸಾಧ್ಯವಾಯಿತು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ