AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ನಿಧನವಾಗಿ ಮೂರು ವರ್ಷದ ಬಳಿಕ ಮಹತ್ವದ ಸುಳಿವು ಪತ್ತೆ ಎಂದ ಮಹಾ ಡಿಸಿಎಂ

Sushant Singh: ಸುಶಾಂತ್ ಸಿಂಗ್ ರಜಪೂತ್ ನಿಧನ ಹೊಂದಿ ಮೂರು ವರ್ಷಗಳ ಬಳಿಕ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದಿದ್ದಾರೆ ಮಹಾರಾಷ್ಟ್ರ ಡಿಸಿಎಂ.

ಸುಶಾಂತ್ ನಿಧನವಾಗಿ ಮೂರು ವರ್ಷದ ಬಳಿಕ ಮಹತ್ವದ ಸುಳಿವು ಪತ್ತೆ ಎಂದ ಮಹಾ ಡಿಸಿಎಂ
ಸುಶಾಂತ್ ಸಿಂಗ್
ಮಂಜುನಾಥ ಸಿ.
|

Updated on: Jun 29, 2023 | 4:43 PM

Share

ಬಾಲಿವುಡ್ (Bollywood) ನಟ ಸುಶಾಂತ್ ಸಿಂಗ್ ರಜಪೂತ್ (Sushant Singh) ನಿಧನ ಹೊಂದ ಮೂರು ವರ್ಷಗಳಾಗಿವೆ. ಪ್ರಕರಣವನ್ನು ಮುಂಬೈ ಪೊಲೀಸರು (Mumbai Police) ಹಾಗೂ ಸಿಬಿಐ ತನಿಖೆ ನಡೆಸುತ್ತಲೇ ಇದೆ. ಆದರೆ ಈವರೆಗೆ ಸುಶಾಂತ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಈಗ ಈ ಪ್ರಕರಣದಲ್ಲಿ ಮಹತ್ವದ ಸುಳಿವೊಂದು ತನಿಖಾ ಸಂಸ್ಥೆಗೆ ಲಭ್ಯವಾಗಿದೆಯಂತೆ. ಹೀಗೆಂದು ಸ್ವತಃ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ದೇವೇಂದ್ರ ಫಡ್ಣವೀಸ್ ”ದಿಶಾ ಸಾಲಿಯಾನ್ ಹಾಗೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ. ಆದರೆ ಆ ಸಾಕ್ಷ್ಯಗಳು ನಿಖರವೇ, ನಂಬಲರ್ಹವೇ, ಸತ್ಯವಾದುವೇ ಎಂಬ ಪರಿಶೀಲನೆ ನಡೆಯುತ್ತಿವೆ. ಕೆಲವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ, ಕೆಲವರ ಹೇಳಿಕೆ ದಾಖಲಿಸಿಕೊಳ್ಳುವುದು ಹಾಗೂ ಸಾಕ್ಷ್ಯಗಳ ಪರಿಶೀಲನೆ ಬಾಕಿ ಇದೆ” ಎಂದಿದ್ದಾರೆ.

ಸುಶಾಂತ್ ಸಿಂಗ್ ಹಾಗೂ ದಿಶಾ ಸಾಲಿಯಾನ್ ಪ್ರಕರಣದ ತನಿಖೆಯಲ್ಲಿ ಅಂತಿಮ ವರದಿ ಇನ್ನೂ ಸಲ್ಲಿಸಿಲ್ಲ, ಈಗಲೂ ತನಿಖೆ ಚಾಲ್ತಿಯಲ್ಲಿದೆ. ಸಾಕ್ಷ್ಯಗಳನ್ನು ನೀಡುವಂತೆ ಜನರನ್ನು ಕೋರಿದ್ದೆವು ಹಲವರು ಕೊಟ್ಟಿದ್ದಾರೆ. ಅವರ ಸಾಕ್ಷ್ಯಗಳು ಸರಿಯಾಗಿವೆಯೇ ಎಂಬುದರ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ವಿಷಯಗಳು ಗೊತ್ತಾಗಿವೆ. ಈ ಪ್ರಕರಣಗಳ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡುವ ಸಮಯ ಹತ್ತಿರ ಬಂದಿದೆ, ಮಾತನಾಡುವ ಸಮಯದಲ್ಲಿ ನಾನು ಆ ಬಗ್ಗೆ ಮಾತನಾಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ:ಮರಣೋತ್ತರ ಪರೀಕ್ಷೆ ವೇಳೆ ಸುಶಾಂತ್ ಸಿಂಗ್ ದೇಹದ ಮೇಲಿತ್ತು ಗಾಯ; ಸತ್ಯ ಮುಚ್ಚಿಟ್ರಾ ವೈದ್ಯರು?

ಸುಶಾಂತ್ ಸಿಂಗ್ ರಜಪೂತ್ 2020 ರ ಜೂನ್ 14ರಂದು ನಿಧನ ಹೊಂದಿದ್ದರು. ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಅದಕ್ಕೆ ಕೆಲವು ದಿನಗಳ ಮುಂಚೆಯಷ್ಟೆ ಸುಶಾಂತ್​ರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮಹಡಿ ಮೇಲಿಂದ ಬಿದ್ದು ನಿಧನ ಹೊಂದಿದ್ದರು. ಈ ಎರಡೂ ಸಾವಿಗೆ ಪರಸ್ಪರ ಸಂಬಂಧವಿದೆ ಎನ್ನಲಾಗಿತ್ತು. ಸುಶಾಂತ್ ಸಿಂಗ್ ಸಾವು ದೇಶ, ವಿದೇಶಗಳಲ್ಲಿ ಸುದ್ದಿಯಾಯ್ತು. ಬಾಲಿವುಡ್​ನಲ್ಲಿಯಂತೂ ದೊಡ್ಡ ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಿತ್ತು.

ಸುಶಾಂತ್ ಸಿಂಗ್ ಸಾವಿನ ಬಳಿಕ ಬಾಲಿವುಡ್​ನ ಡ್ರಗ್ಸ್ ಪ್ರಕರಣ ಬಹಿರಂಗವಾಗಿ ಸುಶಾಂತ್​ರ ಮಾಜಿ ಗರ್ಲ್​ಫ್ರೆಂಡ್ ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಬಂಧನವಾಯ್ತು. ಕರಣ್ ಜೋಹರ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್, ಅರ್ಜುನ್ ರಾಮ್​ಪಾಲ್, ಮಹೇಶ್ ಭಟ್, ರಕುಲ್ ಪ್ರೀತ್ ಸಿಂಗ್ ಇನ್ನು ಹಲವು ಖ್ಯಾತನಾಮರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಯ್ತು. ಆದರೆ ಈ ವರೆಗೆ ಸುಶಾಂತ್ ಸಿಂಗ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು