AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಗೆದ್ದರೆ ಮಾತ್ರ ಸಂಭಾವನೆ ಪಡೆಯುತ್ತಾರೆ ಅಕ್ಷಯ್ ಕುಮಾರ್; ನಟನಿಗೆ ಆದ ನಷ್ಟ ಎಷ್ಟು?

Akshay Kumar: ಬಾಲಿವುಡ್ ನಟ ಅಕ್ಷಯ್ ಕುಮಾರ್, ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಏಕೈಕ ಸೂಪರ್ ಸ್ಟಾರ್ ನಟ. ಸಂಭಾವನೆ ಬಗ್ಗೆ ಬಹಳ ಕಟ್ಟು-ನಿಟ್ಟಾಗಿರುವ ಅಕ್ಷಯ್ ಕುಮಾರ್, ಕೆಲಸದ ವಿಷಯದಲ್ಲಿಯೂ ಅಷ್ಟೇ ಕಟ್ಟು-ನಿಟ್ಟು. ಅಂದಹಾಗೆ ಪೃಥ್ವಿರಾಜ್ ಸುಕುಮಾರ್ ಹೇಳಿರುವಂತೆ, ಸಿನಿಮಾ ಹಿಟ್ ಆಗದಿದ್ದರೆ ಸಂಭಾವನೆಯನ್ನೇ ತೆಗೆದುಕೊಳ್ಳುವುದಿಲ್ಲವಂತೆ ಅಕ್ಷಯ್ ಕುಮಾರ್.

ಸಿನಿಮಾ ಗೆದ್ದರೆ ಮಾತ್ರ ಸಂಭಾವನೆ ಪಡೆಯುತ್ತಾರೆ ಅಕ್ಷಯ್ ಕುಮಾರ್; ನಟನಿಗೆ ಆದ ನಷ್ಟ ಎಷ್ಟು?
Akshay Kumar
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Apr 13, 2025 | 1:20 PM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಪ್ರತಿ ಚಿತ್ರಕ್ಕೆ 100 ಕೋಟಿ ರೂಪಾಯಿವರೆಗೆ ಸಂಭಾವನೆ ಪಡೆಯುತ್ತಾರೆ ಎಂದೆಲ್ಲ ಹೇಳಲಾಗುತ್ತಿದೆ. ಆದರೆ, ಈ ವರೆಗೆ ಸಂಭಾವನೆ ಬಗ್ಗೆ ಅವರು ಒಂದೇ ಒಂದು ಹೇಳಿಕೆ ನೀಡಿಲ್ಲ. ಆದರೆ, ಇತ್ತೀಚೆಗೆ ಪೃಥ್ವಿರಾಜ್ ಸುಕುಮಾರನ್ ಅವರು ಈ ಬಗ್ಗೆ ಮಾತನಾಡಿದ್ದರು. ಅಕ್ಷಯ್ ಕುಮಾರ್ ಅವರು ಸಿನಿಮಾ ಹಿಟ್ ಆದರೆ ಮಾತ್ರ ಸಂಭಾವನೆ ಪಡೆಯುತ್ತಾರೆ ಎನ್ನುವ ಮೂಲಕ ಶಾಕಿಂಗ್ ವಿಚಾರವನ್ನು ಹೇಳಿಕೊಂಡಿದ್ದರು.

2023ರಲ್ಲಿ ಬಂದ ‘ಸೆಲ್ಫೀ’ ಸಿನಿಮಾ ಸೋತಿದೆ. ಈ ಚಿತ್ರಕ್ಕೆ ಪೃಥ್ವಿರಾಜ್ ಕೂಡ ನಿರ್ಮಾಪಕರಲ್ಲಿ ಒಬ್ಬರು. ಇದಕ್ಕೆ ಕಾರಣವೂ ಇದೆ. ಏಕೆಂದರೆ, ಮಲಯಾಳಂನ ‘ಡ್ರೈವಿಂಗ್ ಲೈಸೆನ್ಸ್’ ಚಿತ್ರದ ನಿರ್ಮಾಣ ಮಾಡಿದ್ದು ಪೃಥ್ವಿರಾಜ್. ಇದರ ಹಿಂದಿ ರಿಮೇಕ್​ಗೆ ಪೃಥ್ವಿರಾಜ್ ಕೂಡ ನಿರ್ಮಾಪಕರಾದರು. ಇವರು ಅಕ್ಷಯ್ ಕುಮಾರ್ ಸಂಭಾವನೆ ವಿಚಾರವಾಗಿ ಮಾತನಾಡಿದ್ದಾರೆ.

‘ನಾನು ಅಕ್ಷಯ್ ಕುಮಾರ್ ಜೊತೆ ಸಿನಿಮಾ ಮಾಡಿದೆ. ಆದರೆ, ಒಂದೇ ಒಂದು ರೂಪಾಯಿ ಪಡೆದಿಲ್ಲ. ಸಿನಿಮಾ ಹಣ ಮಾಡಿದರೆ ಮಾತ್ರ ಸಂಭಾವನೆ ಪಡೆಯುತ್ತೇನೆ ಎಂದರು. ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಲ್ಲ. ಹೀಗಾಗಿ, ಅವರು ಸಂಭಾವನೆ ಪಡೆದಿಲ್ಲ’ ಎಂದು ಪೃಥ್ವಿರಾಜ್ ಅವರು ಹೇಳಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಕ್ಷಯ್ ಕುಮಾರ್ ಅವರ ಈ ನಿರ್ಧಾರದಿಂದ ಅವರಿಗೆ ಸಾಕಷ್ಟು ನಷ್ಟ ಆಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ:ಅಕ್ಷಯ್ ಕುಮಾರ್ ಜೊತೆ ನಟಿಸಲಿರುವ ‘ಸೂರ್ಯಕಾಂತಿ’ ನಟಿ

ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ದೊಡ್ಡ ಯಶಸ್ಸು ಅನ್ನೋದು ಕಂಡಿದ್ದು 2021ರಲ್ಲಿ ಬಂದ ‘ಸೂರ್ಯವಂಶಿ’. ಇದಾದ ಬಳಿಕ ಅಕ್ಷಯ್ ಕುಮಾರ್ ನಟನೆಯ 10ಕ್ಕೂ ಅಧಿಕ ಸಿನಿಮಾಗಳು ಬಂದಿವೆ. ಈ ಪೈಕಿ ಬಹುತೇಕ ಎಲ್ಲಾ ಚಿತ್ರಗಳು ಮಕಾಡೆ ಮಲಗಿವೆ. ಅಂದರೆ, ಅಕ್ಷಯ್ ಕುಮಾರ್ ಅವರು ಈ ಎಲ್ಲಾ ಸಿನಿಮಾ ನಿರ್ಮಾಪಕರಿಂದ ಸಂಭಾವನೆಯನ್ನೇ ಪಡೆದಿಲ್ಲವೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ.

ಇನ್ನು, ‘ಬಡೆ ಮಿಯಾ ಚೋಟೆ ಮಿಯಾ’ ಸೋತಾಗ ನಿರ್ಮಾಪಕರು ಕೂಡ ಅಕ್ಷಯ್ ಬಗ್ಗೆ ಮಾತನಾಡಿದ್ದರು. ಅಕ್ಷಯ್ ಕುಮಾರ್ ಅವರು ಉಳಿದ ಕಲಾವಿದರೆ ಸಂಭಾವನೆ ಕೊಟ್ಟು ಆ ಬಳಿಕ ಹಣ ಇದ್ದರೆ ನನಗೆ ನೀಡಿ ಎಂದು ಹೇಳಿದ್ದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್