AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..

Akshay Kumar: ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..
ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 15, 2021 | 2:03 PM

Share

ಸಿನಿಮಾ ಕೆಲಸಗಳಲ್ಲಿ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸದಾ ಕಾಲ ಬ್ಯುಸಿ ಆಗಿರುತ್ತಾರೆ. ಆ ಕಾರಣದಿಂದಲೇ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆ ಕಾಣುತ್ತಿವೆ. ನ.5ರಂದು ಬಿಡುಗಡೆ ಆಗಿದ್ದ ‘ಸೂರ್ಯವಂಶಿ’ (Sooryavanshi) ಸಿನಿಮಾ ಗೆದ್ದು ಬೀಗಿದೆ. ಅದರ ಬೆನ್ನಲ್ಲೇ ಅವರ ‘ಪೃಥ್ವಿರಾಜ್​’ ಚಿತ್ರ (Prithviraj Movie) ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಆ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅದರ ಮೊದಲ ಹಂತವಾಗಿ ಟೀಸರ್​ (Prithviraj Teaser:) ಬಿಡುಗಡೆ ಮಾಡಲಾಗಿದೆ. ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಜೊತೆ ಸಂಜಯ್​ ದತ್​ ಮತ್ತು ಸೋನು ಸೂದ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಟೀಸರ್ ಮೂಲಕ ಅವರೆಲ್ಲರ ಪಾತ್ರಗಳ ಗೆಟಪ್​ ಬಹಿರಂಗ ಆಗಿದೆ. ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಲು ಈ ಟೀಸರ್​ ಕಾರಣ ಆಗಿದೆ.

ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಮಾನುಷಿ ಚಿಲ್ಲರ್​ ಅವರಿಗೆ ಇದು ಮೊದಲ ಸಿನಿಮಾ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ. ಈ ಪ್ರತಿಷ್ಠಿತ ಬ್ಯಾನರ್​ನಲ್ಲಿ ಮೂಡಿಬರುತ್ತಿರುವ ಮೊದಲ ಐತಿಹಾಸಿಕ ಕಥಾಹಂದರದ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಸಾಮ್ರಾಟ್​ ಪೃಥ್ವಿರಾಜ್​ ಚೌಹಾಣ್​ ಪಾತ್ರವನ್ನು ನಿಭಾಯಿಸಿದ್ದಾರೆ. ಯುದ್ಧದ ದೃಶ್ಯಗಳನ್ನು ಈ ಟೀಸರ್​ನಲ್ಲಿ ತೋರಿಸಲಾಗಿದೆ. ಪೃಥ್ವಿರಾಜ್​ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ಹೇಗೆ ಕಾದಾಡಿದ್ದಾರೆ ಎಂಬುದರ ಝಲಕ್​ ಈ ಟೀಸರ್​ನಲ್ಲಿದೆ.

ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಟೀಸರ್​ನಲ್ಲಿ ಅದರ ಝಲಕ್​ ನೋಡಿದ ಸಿನಿಪ್ರಿಯರಿಗೆ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಯೂಟ್ಯೂಬ್​ನಲ್ಲಿ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 15 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 2022ರ ಜನವರಿ 21ರಂದು ಈ ಚಿತ್ರ ಬಿಡುಗಡೆ ಆಗಲಿದೆ. ‘ಸೂರ್ಯವಂಶಿ’ ರೀತಿ ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಾಣುವ ನಿರೀಕ್ಷೆ ಇದೆ. ಇದಲ್ಲದೇ, ‘ಬಚ್ಚನ್​ ಪಾಂಡೆ’, ‘ರಕ್ಷಾ ಬಂಧನ್​’, ‘ಗೋರ್ಕಾ’, ‘ರಾಮ್​ ಸೇತು’ ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಯಾವ ಖಾನ್​ಗೂ ಕಮ್ಮಿ ಇಲ್ಲ ಅಕ್ಷಯ್​ ಕುಮಾರ್; ವಿಶ್ವಾದ್ಯಂತ 200 ಕೋಟಿ ಬಾಚಿದ ‘ಸೂರ್ಯವಂಶಿ’

‘ಮುಸ್ಲಿಮರನ್ನು ಯಾಕೆ ಕೆಟ್ಟದಾಗಿ ತೋರಿಸಿದ್ದೀರಿ?’: ಪತ್ರಕರ್ತೆ ಪ್ರಶ್ನೆಗೆ ‘ಸೂರ್ಯವಂಶಿ’ ನಿರ್ದೇಶಕನ ಖಡಕ್​ ತಿರುಗೇಟು

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!