AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..

Akshay Kumar: ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..
ಅಕ್ಷಯ್​ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Nov 15, 2021 | 2:03 PM

Share

ಸಿನಿಮಾ ಕೆಲಸಗಳಲ್ಲಿ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸದಾ ಕಾಲ ಬ್ಯುಸಿ ಆಗಿರುತ್ತಾರೆ. ಆ ಕಾರಣದಿಂದಲೇ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆ ಕಾಣುತ್ತಿವೆ. ನ.5ರಂದು ಬಿಡುಗಡೆ ಆಗಿದ್ದ ‘ಸೂರ್ಯವಂಶಿ’ (Sooryavanshi) ಸಿನಿಮಾ ಗೆದ್ದು ಬೀಗಿದೆ. ಅದರ ಬೆನ್ನಲ್ಲೇ ಅವರ ‘ಪೃಥ್ವಿರಾಜ್​’ ಚಿತ್ರ (Prithviraj Movie) ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಆ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅದರ ಮೊದಲ ಹಂತವಾಗಿ ಟೀಸರ್​ (Prithviraj Teaser:) ಬಿಡುಗಡೆ ಮಾಡಲಾಗಿದೆ. ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಜೊತೆ ಸಂಜಯ್​ ದತ್​ ಮತ್ತು ಸೋನು ಸೂದ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಟೀಸರ್ ಮೂಲಕ ಅವರೆಲ್ಲರ ಪಾತ್ರಗಳ ಗೆಟಪ್​ ಬಹಿರಂಗ ಆಗಿದೆ. ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಲು ಈ ಟೀಸರ್​ ಕಾರಣ ಆಗಿದೆ.

ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಮಾನುಷಿ ಚಿಲ್ಲರ್​ ಅವರಿಗೆ ಇದು ಮೊದಲ ಸಿನಿಮಾ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ. ಈ ಪ್ರತಿಷ್ಠಿತ ಬ್ಯಾನರ್​ನಲ್ಲಿ ಮೂಡಿಬರುತ್ತಿರುವ ಮೊದಲ ಐತಿಹಾಸಿಕ ಕಥಾಹಂದರದ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಸಾಮ್ರಾಟ್​ ಪೃಥ್ವಿರಾಜ್​ ಚೌಹಾಣ್​ ಪಾತ್ರವನ್ನು ನಿಭಾಯಿಸಿದ್ದಾರೆ. ಯುದ್ಧದ ದೃಶ್ಯಗಳನ್ನು ಈ ಟೀಸರ್​ನಲ್ಲಿ ತೋರಿಸಲಾಗಿದೆ. ಪೃಥ್ವಿರಾಜ್​ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ಹೇಗೆ ಕಾದಾಡಿದ್ದಾರೆ ಎಂಬುದರ ಝಲಕ್​ ಈ ಟೀಸರ್​ನಲ್ಲಿದೆ.

ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಟೀಸರ್​ನಲ್ಲಿ ಅದರ ಝಲಕ್​ ನೋಡಿದ ಸಿನಿಪ್ರಿಯರಿಗೆ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಯೂಟ್ಯೂಬ್​ನಲ್ಲಿ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 15 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 2022ರ ಜನವರಿ 21ರಂದು ಈ ಚಿತ್ರ ಬಿಡುಗಡೆ ಆಗಲಿದೆ. ‘ಸೂರ್ಯವಂಶಿ’ ರೀತಿ ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಾಣುವ ನಿರೀಕ್ಷೆ ಇದೆ. ಇದಲ್ಲದೇ, ‘ಬಚ್ಚನ್​ ಪಾಂಡೆ’, ‘ರಕ್ಷಾ ಬಂಧನ್​’, ‘ಗೋರ್ಕಾ’, ‘ರಾಮ್​ ಸೇತು’ ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಯಾವ ಖಾನ್​ಗೂ ಕಮ್ಮಿ ಇಲ್ಲ ಅಕ್ಷಯ್​ ಕುಮಾರ್; ವಿಶ್ವಾದ್ಯಂತ 200 ಕೋಟಿ ಬಾಚಿದ ‘ಸೂರ್ಯವಂಶಿ’

‘ಮುಸ್ಲಿಮರನ್ನು ಯಾಕೆ ಕೆಟ್ಟದಾಗಿ ತೋರಿಸಿದ್ದೀರಿ?’: ಪತ್ರಕರ್ತೆ ಪ್ರಶ್ನೆಗೆ ‘ಸೂರ್ಯವಂಶಿ’ ನಿರ್ದೇಶಕನ ಖಡಕ್​ ತಿರುಗೇಟು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ