AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..

Akshay Kumar: ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ.

Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..
ಅಕ್ಷಯ್​ ಕುಮಾರ್
TV9 Web
| Edited By: |

Updated on: Nov 15, 2021 | 2:03 PM

Share

ಸಿನಿಮಾ ಕೆಲಸಗಳಲ್ಲಿ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಸದಾ ಕಾಲ ಬ್ಯುಸಿ ಆಗಿರುತ್ತಾರೆ. ಆ ಕಾರಣದಿಂದಲೇ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ತೆರೆ ಕಾಣುತ್ತಿವೆ. ನ.5ರಂದು ಬಿಡುಗಡೆ ಆಗಿದ್ದ ‘ಸೂರ್ಯವಂಶಿ’ (Sooryavanshi) ಸಿನಿಮಾ ಗೆದ್ದು ಬೀಗಿದೆ. ಅದರ ಬೆನ್ನಲ್ಲೇ ಅವರ ‘ಪೃಥ್ವಿರಾಜ್​’ ಚಿತ್ರ (Prithviraj Movie) ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಆ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅದರ ಮೊದಲ ಹಂತವಾಗಿ ಟೀಸರ್​ (Prithviraj Teaser:) ಬಿಡುಗಡೆ ಮಾಡಲಾಗಿದೆ. ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಜೊತೆ ಸಂಜಯ್​ ದತ್​ ಮತ್ತು ಸೋನು ಸೂದ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಟೀಸರ್ ಮೂಲಕ ಅವರೆಲ್ಲರ ಪಾತ್ರಗಳ ಗೆಟಪ್​ ಬಹಿರಂಗ ಆಗಿದೆ. ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಲು ಈ ಟೀಸರ್​ ಕಾರಣ ಆಗಿದೆ.

ಡಾ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿರುವ ‘ಪೃಥ್ವಿರಾಜ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಮಾನುಷಿ ಚಿಲ್ಲರ್​ ಅವರಿಗೆ ಇದು ಮೊದಲ ಸಿನಿಮಾ. ಈ ಚಿತ್ರಕ್ಕೆ ಯಶ್​ ರಾಜ್​ ಫಿಲ್ಮ್ಸ್​ ಬಂಡವಾಳ ಹೂಡಿದೆ. ಈ ಪ್ರತಿಷ್ಠಿತ ಬ್ಯಾನರ್​ನಲ್ಲಿ ಮೂಡಿಬರುತ್ತಿರುವ ಮೊದಲ ಐತಿಹಾಸಿಕ ಕಥಾಹಂದರದ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಸಾಮ್ರಾಟ್​ ಪೃಥ್ವಿರಾಜ್​ ಚೌಹಾಣ್​ ಪಾತ್ರವನ್ನು ನಿಭಾಯಿಸಿದ್ದಾರೆ. ಯುದ್ಧದ ದೃಶ್ಯಗಳನ್ನು ಈ ಟೀಸರ್​ನಲ್ಲಿ ತೋರಿಸಲಾಗಿದೆ. ಪೃಥ್ವಿರಾಜ್​ ಪಾತ್ರದಲ್ಲಿ ಅಕ್ಷಯ್​ ಕುಮಾರ್​ ಹೇಗೆ ಕಾದಾಡಿದ್ದಾರೆ ಎಂಬುದರ ಝಲಕ್​ ಈ ಟೀಸರ್​ನಲ್ಲಿದೆ.

ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಟೀಸರ್​ನಲ್ಲಿ ಅದರ ಝಲಕ್​ ನೋಡಿದ ಸಿನಿಪ್ರಿಯರಿಗೆ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಯೂಟ್ಯೂಬ್​ನಲ್ಲಿ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 15 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. 2022ರ ಜನವರಿ 21ರಂದು ಈ ಚಿತ್ರ ಬಿಡುಗಡೆ ಆಗಲಿದೆ. ‘ಸೂರ್ಯವಂಶಿ’ ರೀತಿ ಈ ಚಿತ್ರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಾಣುವ ನಿರೀಕ್ಷೆ ಇದೆ. ಇದಲ್ಲದೇ, ‘ಬಚ್ಚನ್​ ಪಾಂಡೆ’, ‘ರಕ್ಷಾ ಬಂಧನ್​’, ‘ಗೋರ್ಕಾ’, ‘ರಾಮ್​ ಸೇತು’ ಮುಂತಾದ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್ ನಟಿಸುತ್ತಿದ್ದಾರೆ.

ಇದನ್ನೂ ಓದಿ:

ಯಾವ ಖಾನ್​ಗೂ ಕಮ್ಮಿ ಇಲ್ಲ ಅಕ್ಷಯ್​ ಕುಮಾರ್; ವಿಶ್ವಾದ್ಯಂತ 200 ಕೋಟಿ ಬಾಚಿದ ‘ಸೂರ್ಯವಂಶಿ’

‘ಮುಸ್ಲಿಮರನ್ನು ಯಾಕೆ ಕೆಟ್ಟದಾಗಿ ತೋರಿಸಿದ್ದೀರಿ?’: ಪತ್ರಕರ್ತೆ ಪ್ರಶ್ನೆಗೆ ‘ಸೂರ್ಯವಂಶಿ’ ನಿರ್ದೇಶಕನ ಖಡಕ್​ ತಿರುಗೇಟು

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ