AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​

ಪ್ರಿಯದರ್ಶನ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಹೇರಾ ಫೇರಿ’, ‘ಭೂಲ್​ಭುಲಯ್ಯ’ ಸಿನಿಮಾ ಜನಮನ ಗೆದ್ದಿದ್ದವು. ಈಗ ಅವರಿಬ್ಬರು ಮತ್ತೆ ಒಂದಾಗುತ್ತಿದ್ದಾರೆ. ಏಕ್ತಾ ಕಪೂರ್​ ಅವರ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಸದ್ಯದಲ್ಲೇ ಇದರ ಚಿತ್ರೀಕರಣ ಶುರುವಾಗಲಿದೆ.

ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Apr 25, 2024 | 9:03 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಆದರೂ ಕೂಡ ಅವರಿಗೆ ಆಫರ್​ ಕಡಿಮೆ ಆಗಿಲ್ಲ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡಲು ಖ್ಯಾತ ನಿರ್ದೇಶಕ ಪ್ರಿಯದರ್ಶನ್​ (Priyadarshan) ಅವರು ಮುಂದೆ ಬಂದಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಹಾರರ್​ ಸಿನಿಮಾ ಮೂಡಿಬರಲಿದೆ ಎಂಬುದು ವಿಶೇಷ.

ಹಿರಿಯ ನಿರ್ದೇಶಕ ಪ್ರಿಯದರ್ಶನ್​ ಅವರು ಈವರೆಗೆ 90ಕ್ಕೂ ಅಧಿಕ ಸಿನಿಮಾಗಳಿಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ಅಕ್ಷಯ್​ ಕುಮಾರ್​ ಜೊತೆ ಅವರು ‘ಹೇರಾ ಫೇರಿ’ ಹಾಗೂ ‘ಭೂಲ್​ಭುಲಯ್ಯ’ ಸಿನಿಮಾ ಮಾಡಿ ಯಶಸ್ಸು ಕಂಡಿದ್ದರು. ಆ ಎರಡೂ ಸಿನಿಮಾಗಳಿಂದ ಅಕ್ಷಯ್​ ಕುಮಾರ್​ ಅವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿತ್ತು.

ಇದನ್ನೂ ಓದಿ: 500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?

ಅಕ್ಷಯ್​ ಕುಮಾರ್​ ಮತ್ತು ಪ್ರಿಯದರ್ಶನ್​ ಅವರು 14 ವರ್ಷಗಳ ಬಳಿಕ ಒಂದಾಗಿದ್ದಾರೆ. ಈ ಬಾರಿ ಅವರು ಹಾರರ್​ ಸಿನಿಮಾ ಮಾಡಲಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಕಾದಿದ್ದಾರೆ. ‘ಹೇರಾ ಫೇರಿ’ ಮತ್ತು ‘ಭೂಲ್​ಭುಲಯ್ಯ’ ಚಿತ್ರಗಳು ಮಲಯಾಳಂನ ರಿಮೇಕ್​ ಆಗಿದ್ದವು. ಆದರೆ ಈ ಬಾರಿ ಪ್ರಿಯದರ್ಶನ್​ ಅವರು ಅಕ್ಷಯ್​ ಕುಮಾರ್​ಗಾಗಿ ಸ್ವಮೇಕ್​ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಏಕ್ತಾ ಕಪೂರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ‘ಈ ಸಿನಿಮಾದಲ್ಲಿ ಫ್ಯಾಂಟಸಿ ಇರಲಿದೆ. ಜಾದೂ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡುವುದು ಯಾವಾಗಲೂ ಖುಷಿ ನೀಡುತ್ತದೆ. ಅವರು ಭಾವನೆಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಅವರ ಜೊತೆ ಸಿನಿಮಾ ಮಾಡಲು ಒಳ್ಳೆಯ ಕಥೆ ಬೇಕು ಅಂತ ನಾನು ಕಾದಿದ್ದೆ. ಅದು ಈಗ ಸಿಕ್ಕಿದೆ’ ಎಂದು ಪ್ರಿಯದರ್ಶನ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!