AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​

ಪ್ರಿಯದರ್ಶನ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಹೇರಾ ಫೇರಿ’, ‘ಭೂಲ್​ಭುಲಯ್ಯ’ ಸಿನಿಮಾ ಜನಮನ ಗೆದ್ದಿದ್ದವು. ಈಗ ಅವರಿಬ್ಬರು ಮತ್ತೆ ಒಂದಾಗುತ್ತಿದ್ದಾರೆ. ಏಕ್ತಾ ಕಪೂರ್​ ಅವರ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಸದ್ಯದಲ್ಲೇ ಇದರ ಚಿತ್ರೀಕರಣ ಶುರುವಾಗಲಿದೆ.

ಹಾರರ್​ ಸಿನಿಮಾಗಾಗಿ ಸೂಪರ್​ ಹಿಟ್​ ನಿರ್ದೇಶಕನ ಜತೆ ಕೈ ಜೋಡಿಸಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Apr 25, 2024 | 9:03 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಆದರೂ ಕೂಡ ಅವರಿಗೆ ಆಫರ್​ ಕಡಿಮೆ ಆಗಿಲ್ಲ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡಲು ಖ್ಯಾತ ನಿರ್ದೇಶಕ ಪ್ರಿಯದರ್ಶನ್​ (Priyadarshan) ಅವರು ಮುಂದೆ ಬಂದಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಹಾರರ್​ ಸಿನಿಮಾ ಮೂಡಿಬರಲಿದೆ ಎಂಬುದು ವಿಶೇಷ.

ಹಿರಿಯ ನಿರ್ದೇಶಕ ಪ್ರಿಯದರ್ಶನ್​ ಅವರು ಈವರೆಗೆ 90ಕ್ಕೂ ಅಧಿಕ ಸಿನಿಮಾಗಳಿಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಚಿತ್ರರಂಗದಲ್ಲಿ ಅವರ ಅನುಭವ ಅಪಾರ. ಅಕ್ಷಯ್​ ಕುಮಾರ್​ ಜೊತೆ ಅವರು ‘ಹೇರಾ ಫೇರಿ’ ಹಾಗೂ ‘ಭೂಲ್​ಭುಲಯ್ಯ’ ಸಿನಿಮಾ ಮಾಡಿ ಯಶಸ್ಸು ಕಂಡಿದ್ದರು. ಆ ಎರಡೂ ಸಿನಿಮಾಗಳಿಂದ ಅಕ್ಷಯ್​ ಕುಮಾರ್​ ಅವರ ವೃತ್ತಿಜೀವನಕ್ಕೆ ಮೈಲೇಜ್​ ಸಿಕ್ಕಿತ್ತು.

ಇದನ್ನೂ ಓದಿ: 500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?

ಅಕ್ಷಯ್​ ಕುಮಾರ್​ ಮತ್ತು ಪ್ರಿಯದರ್ಶನ್​ ಅವರು 14 ವರ್ಷಗಳ ಬಳಿಕ ಒಂದಾಗಿದ್ದಾರೆ. ಈ ಬಾರಿ ಅವರು ಹಾರರ್​ ಸಿನಿಮಾ ಮಾಡಲಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಕಾದಿದ್ದಾರೆ. ‘ಹೇರಾ ಫೇರಿ’ ಮತ್ತು ‘ಭೂಲ್​ಭುಲಯ್ಯ’ ಚಿತ್ರಗಳು ಮಲಯಾಳಂನ ರಿಮೇಕ್​ ಆಗಿದ್ದವು. ಆದರೆ ಈ ಬಾರಿ ಪ್ರಿಯದರ್ಶನ್​ ಅವರು ಅಕ್ಷಯ್​ ಕುಮಾರ್​ಗಾಗಿ ಸ್ವಮೇಕ್​ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

ಶೀಘ್ರದಲ್ಲೇ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ಏಕ್ತಾ ಕಪೂರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ‘ಈ ಸಿನಿಮಾದಲ್ಲಿ ಫ್ಯಾಂಟಸಿ ಇರಲಿದೆ. ಜಾದೂ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ಅಕ್ಷಯ್​ ಕುಮಾರ್​ ಜೊತೆ ಸಿನಿಮಾ ಮಾಡುವುದು ಯಾವಾಗಲೂ ಖುಷಿ ನೀಡುತ್ತದೆ. ಅವರು ಭಾವನೆಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಅವರ ಜೊತೆ ಸಿನಿಮಾ ಮಾಡಲು ಒಳ್ಳೆಯ ಕಥೆ ಬೇಕು ಅಂತ ನಾನು ಕಾದಿದ್ದೆ. ಅದು ಈಗ ಸಿಕ್ಕಿದೆ’ ಎಂದು ಪ್ರಿಯದರ್ಶನ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್