AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಈ ಸೆಲೆಬ್ರಿಟಿಗಳಿಗೆ ಇತ್ತು ಅಫೇರ್? ಭಾರೀ ಚರ್ಚೆ ಹುಟ್ಟುಹಾಕಿದ್ದ ಸ್ಟಾರ್ಸ್​ಗಳಿವರು

ಮದುವೆ ಆದ ಬಳಿಕ ಅಫೇರ್ ಇಟ್ಟುಕೊಂಡು ಸುದ್ದಿ ಆದವರೂ ಸಾಕಷ್ಟಿದ್ದಾರೆ. ಕೆಲವು ಲವ್​ ಅಫೇರ್ ವಿಚಾರಗಳು ಬಾಲಿವುಡ್ ಅಂಗಳದಲ್ಲಿ ಸಾಕಷ್ಟು ಹಲ್​ಚಲ್ ಎಬ್ಬಿಸಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಬಾಲಿವುಡ್​ನಲ್ಲಿ ಈ ಸೆಲೆಬ್ರಿಟಿಗಳಿಗೆ ಇತ್ತು ಅಫೇರ್? ಭಾರೀ ಚರ್ಚೆ ಹುಟ್ಟುಹಾಕಿದ್ದ ಸ್ಟಾರ್ಸ್​ಗಳಿವರು
ಬಾಲಿವುಡ್​ನಲ್ಲಿ ಈ ಸೆಲೆಬ್ರಿಟಿಗಳಿಗೆ ಇತ್ತು ಅಫೇರ್?
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Dec 05, 2023 | 8:35 AM

Share

ಬಾಲಿವುಡ್ ಸೆಲೆಬ್ರಿಟಿಗಳಿ ಲವ್, ಬ್ರೇಕಪ್​, ಅಫೇರ್​ಗಳು ಸಖತ್ ಕಾಮನ್. ಇಂದು ಸುತ್ತಾಡುತ್ತಿರುವವರು ನಾಳೆ ಬ್ರೇಕಪ್ ಮಾಡಿಕೊಳ್ಳಬಹುದು. ಮದುವೆ ಆದ ಬಳಿಕ ಅಫೇರ್ ಇಟ್ಟುಕೊಂಡು ಸುದ್ದಿ ಆದವರೂ ಸಾಕಷ್ಟಿದ್ದಾರೆ. ಕೆಲವು ಲವ್​ ಅಫೇರ್ ವಿಚಾರಗಳು ಬಾಲಿವುಡ್ (Bollywood) ಅಂಗಳದಲ್ಲಿ ಸಾಕಷ್ಟು ಹಲ್​ಚಲ್ ಎಬ್ಬಿಸಿತ್ತು. ಆ ರೀತಿಯ ಪ್ರಕರಣಗಳ ಬಗ್ಗೆ ಇಲ್ಲಿದೆ ವಿವರ.

ಹರ್ನಾಜ್ ಸಂಧು ಮತ್ತ ವೀರ್ ಪಹರಿಯಾ

ಹರ್ನಾಜ್ ಕೌರ್ ಸಂಧು ಹಾಗೂ ವೀರ್ ಪಹರಿಯಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಅಚ್ಚರಿ ತಂದಿದೆ. ವೀರ್ ಅವರು ಪೋಸ್ಟ್​ ಮಾಡಿದ್ದ  ಫೋಟೋ ವೈರಲ್ ಆಗಿತ್ತು. ಈ ಫೋಟೋಗೆ ಹರ್ನಾಜ್ ಅವರು ಪ್ರತಿಕ್ರಿಯಿಸಿದ್ದರು.

ಕರೀನಾ ಕಪೂರ್ ಹಾಗೂ ಶಾಹಿದ್ ಕಪೂರ್

ಬಾಲಿವುಡ್​ನಲ್ಲಿ ಕರೀನಾ ಕಪೂರ್ ಹಾಗೂ ಶಾಹಿದ್ ಕಪೂರ್ ಸುತ್ತಾಟ ನಡೆಸಿದ್ದರು. ಇವರು ‘ಜಬ್ ವಿ ಮೆಟ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು ಎನ್ನಲಾಗಿದೆ. ಸುಮಾರು ಐದು ವರ್ಷಗಳ ಕಾಲ ಇವರು ಸುತ್ತಾಟ ನಡೆಸಿದ್ದರು. ಶಾಹಿದ್​ಗಾಗಿ ಅವರು ನಾನ್​ ವೆಜ್ ಬಿಟ್ಟಿದ್ದರು. ಇವರ ಸಂಬಂಧ ಬ್ರೇಕಪ್​ನಲ್ಲಿ ಕೊನೆ ಆಯಿತು.

ಅಮಿತಾಭ್ ಬಚ್ಚನ್-ರೇಖಾ

ಅಮಿತಾಭ್ ಬಚ್ಚನ್ ಹಾಗೂ ರೇಖಾ ಲವ್​ಸ್ಟೋರಿ ಸಾಕಷ್ಟು ಸುದ್ದಿಯಲ್ಲಿತ್ತು. ಇದು ಇನ್ನೂ ನಿಗೂಢವಾಗಿಯೇ ಇದೆ. ಈ ವಿಚಾರವನ್ನು ಇಬ್ಬರೂ ಒಪ್ಪಿಕೊಂಡಿಲ್ಲ. ರೇಖಾ ಅವರು ಹಣೆಗೆ ತಿಲಕ ಇಟ್ಟು ಕಾಣಿಸಿಕೊಂಡಿದ್ದರು. ರೇಖಾ ಹಾಗೂ ಅಮಿತಾಭ್ ಮದುವೆ ಆಗಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇವರು ಬೇರೆ ಆದರು.

ಶಾರುಖ್ ಖಾನ್ ಹಾಗೂ ಪ್ರಿಯಾಂಕಾ ಚೋಪ್ರಾ

‘ಡಾನ್’ ಸಿನಿಮಾ ಸಂದರ್ಭದಲ್ಲಿ ಶಾರುಖ್ ಖಾನ್​ಗೆ ಆಗಲೇ ಮದುವೆ ಆಗಿತ್ತು. ಶಾರುಖ್ ಖಾನ್ ಹಾಗೂ ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ಅಫೇರ್​ ನಡೆಯುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿ ಕೇಳಿ ಶಾರುಖ್ ಅಸಮಾಧಾನಗೊಂಡಿದ್ದರು.

ಹೃತಿಕ್ ರೋಷನ್-ಕಂಗನಾ ರಣಾವತ್

ಹೃತಿಕ್ ರೋಷನ್ ಹಾಗೂ ಕಂಗನಾ ರಣಾವತ್ ಸಾಕಷ್ಟು ಸುದ್ದಿಯಲ್ಲಿದ್ದರು. ಇವರು ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ರಿಲೇಶನ್​ಶಿಪ್ ಇತ್ತು ಎನ್ನಲಾಗಿದೆ. ಇವರ ಲವ್​​ಸ್ಟೋರಿ ಇನ್ನೂ ಮಿಸ್ಟರಿಯಾಗಿಯೇ ಇದೆ. ಈ ಬಗ್ಗೆ ಕಂಗನಾ ಅವರು ಹೃತಿಕ್ ಬಗ್ಗೆ ಆರೋಪ ಮಾಡಿದ್ದರು. ಆದರೆ, ಈ ಆರೋಪವನ್ನು ಹೃತಿಕ್ ಅಲ್ಲಗಳೆದಿದ್ದರು.

ಆಮಿರ್ ಖಾನ್ ಹಾಗೂ ಫಾತಿಮಾ ಸನಾ ಶೇಖ್

ಆಮಿರ್ ಖಾನ್ ಹಾಗೂ ಕಿರಣ್ ರಾವ್ ಬೇರೆ ಆದರು. ಈ ವೇಳೆ ಆಮಿರ್ ಖಾನ್ ಅವರು ಸಾಕಷ್ಟು ಸುದ್ದಿ ಆದರು. ಫಾತಿಮಾ ಸನಾ ಶೇಖ್​ ಜೊತೆ ರಿಲೇಶನ್​ಶಿಪ್ ಹೊಂದಿದ್ದಕ್ಕೆ ಕಿರಣ್ ರಾವ್​​ಗೆ ಆಮಿರ್​ ವಿಚ್ಛೇದನ ನೀಡಿದರು ಎನ್ನಲಾಗಿತ್ತು. ಆದರೆ, ಇದನ್ನು ಫಾತಿಮಾ ಅಲ್ಲ ಗಳೆದಿದ್ದರು.

ಅಕ್ಷಯ್ ಕುಮಾರ್ ಹಾಗೂ ಪ್ರಿಯಾಂಕಾ ಚೋಪ್ರಾ

ಅಕ್ಷಯ್ ಕುಮಾರ್ ಹಾಗೂ ಪ್ರಿಯಾಂಕಾ ಚೋಪ್ರಾ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದರು. ಇವರ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿತ್ತು. ಸದ್ಯ, ಅಕ್ಷಯ್ ಕುಮಾರ್ ಅವರು ಟ್ವಿಂಕಲ್ ಖನ್ನಾ ಅವರನ್ನು ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಬಾಲಿವುಡ್​ನ ಸ್ಟ್ರಾಂಗ್ ಕಪಲ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Tiger 3: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರಾ

ಮಲೈಕಾ ಅರೋರಾ ಹಾಗೂ ಅರ್ಬಾಜ್ ಖಾನ್ ಬೇರೆ ಅದರು. ಆ ಬಳಿಕ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರಾ ಡೇಟಿಂಗ್ ಶುರು ಹಚ್ಚಿಕೊಂಡರು. ಇಬ್ಬರಿಗೂ ಮದುವೆ ಆಗುವ ಆಲೋಚನೆ ಇಲ್ಲ. ಆದರೆ, ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್