AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಬ್ಬಿಕೊಂಡು ರಾಜಿಯಾದ ಪ್ರಿಯಾಂಕಾ-ಕರಣ್​ ಜೋಹರ್​; ಮಧ್ಯ ಮಾತಾಡಿ ನಿಷ್ಠುರವಾಗಿದ್ದು ಕಂಗನಾ

Priyanka Chopra | Karan Johar: ಪ್ರಿಯಾಂಕಾ ಚೋಪ್ರಾ ಹಾಗೂ ಕರಣ್​ ಜೋಹರ್ ನಡುವೆ ಯಾವುದೇ ಮನಸ್ಥಾಪ ಇಲ್ಲ ಎಂಬುದಕ್ಕೆ ಒಂದು ವೈರಲ್​ ವಿಡಿಯೋ ಸಾಕ್ಷಿ ಆಗಿದೆ. ಆದರೆ ನೇರವಾಗಿ ಮಾತನಾಡಿದ ಕಂಗನಾ ರಣಾವತ್​ ಅವರು ನಿಷ್ಠುರ ಕಟ್ಟಿಕೊಳ್ಳುವಂತಾಗಿದೆ.

ತಬ್ಬಿಕೊಂಡು ರಾಜಿಯಾದ ಪ್ರಿಯಾಂಕಾ-ಕರಣ್​ ಜೋಹರ್​; ಮಧ್ಯ ಮಾತಾಡಿ ನಿಷ್ಠುರವಾಗಿದ್ದು ಕಂಗನಾ
ಪ್ರಿಯಾಂಕಾ ಚೋಪ್ರಾ, ಕರಣ್ ಜೋಹರ್, ಕಂಗನಾ ರಣಾವತ್
ಮದನ್​ ಕುಮಾರ್​
|

Updated on:Apr 02, 2023 | 10:58 AM

Share

ಬಾಲಿವುಡ್​ನಲ್ಲಿ ಹಲವು ಸೆಲೆಬ್ರಿಟಿಗಳ ನಡುವೆ ಮುಸುಕಿನ ಗುದ್ದಾಟ ಇದೆ. ಅದು ಆಗಾಗ ಬಹಿರಂಗ ಆಗುತ್ತದೆ. ಕೆಲವೇ ದಿನಗಳ ಹಿಂದೆ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಬಾಲಿವುಡ್​ ಒಳರಾಜಕೀಯದ ಬಗ್ಗೆ ಮಾತನಾಡಿದ್ದರು. ಆದರೆ ಅವರು ಯಾರ ಹೆಸರನ್ನೂ ಪ್ರಸ್ತಾಪಿಸಿರಲಿಲ್ಲ. ಪ್ರಿಯಾಂಕಾ ಬಾಲಿವುಡ್​ ತೊರೆಯಲು ಕರಣ್​ ಜೋಹರ್​ (Karan Johar) ಕಾರಣ ಎಂದು ಅನೇಕರು ಊಹಿಸಿದ್ದರು. ನಟಿ ಕಂಗನಾ ರಣಾವತ್​ (Kangana Ranaut) ಕೂಡ ಓಪನ್​ ಆಗಿ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದರು. ಆದರೆ ಈಗ ಪ್ರಿಯಾಂಕಾ ಚೋಪ್ರಾ ಮತ್ತು ಕರಣ್​ ಜೋಹರ್​ ಪರಸ್ಪರ ರಾಜಿ ಆಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ವಿಡಿಯೋ ವೈರಲ್​ ಆಗಿದೆ.

ಗಾಯಕ ನಿಕ್​ ಜೋನಸ್​ ಜೊತೆ ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲೇ ಸೆಟ್ಲ್​ ಆಗಿದ್ದಾರೆ. ಅಪರೂಪಕ್ಕೆ ಅವರು ಭಾರತಕ್ಕೆ ಬರುತ್ತಾರೆ. ಮುಂಬೈನಲ್ಲಿ ನಡೆದ ‘ನೀತಾ ಮುಕೇಶ್​ ಅಂಬಾನಿ ಕಲ್ಚರಲ್​ ಸೆಂಟರ್’​ ಉದ್ಘಾಟನೆ ಸಲುವಾಗಿ ಅವರು ಈಗ ಮುಂಬೈಗೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಬಹುತೇಕ ಎಲ್ಲ ಸ್ಟಾರ್​ ನಟ-ನಟಿಯರು, ನಿರ್ದೇಶಕ-ನಿರ್ಮಾಪಕರು ಭಾಗವಹಿಸಿದ್ದಾರೆ. ಈ ವೇಳೆ ಕರಣ್​ ಜೋಹರ್​ ಮತ್ತು ಪ್ರಿಯಾಂಕಾ ಚೋಪ್ರಾ ಅವರು ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ‘ಲಾಸ್​ ಏಂಜಲಿಸ್​ಗೆ ಬಂದಾಗ ನಿಮ್ಮ ಮಗಳನ್ನು ನೋಡಲು ಬರುತ್ತೇನೆ’ ಎಂದು ಪ್ರಿಯಾಂಕಾಗೆ ಕರಣ್​ ಜೋಹರ್​ ಹೇಳಿದರಂತೆ.

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ: ಕಂಗನಾ ರಣಾವತ್​-ಕರಣ್​ ಜೋಹರ್​ ನಡುವಿನ ಜಗಳ ಜೋರಾಯ್ತು; ಪರೋಕ್ಷವಾಗಿ ಕುಟುಕಿದ ನಿರ್ಮಾಪಕ

‘ನೀತಾ ಮುಕೇಶ್​ ಅಂಬಾನಿ ಕಲ್ಚರಲ್​ ಸೆಂಟರ್’​ ಉದ್ಘಾಟನೆಗೆ ನಿಕ್​ ಜೋನಸ್​ ಕೂಡ ಆಗಮಿಸಿದ್ದರು. ಕರಣ್​ ಜೋಹರ್​ ಮತ್ತು ಪ್ರಿಯಾಂಕಾ ಚೋಪ್ರಾ ತಪ್ಪಿಕೊಂಡು ಪರಸ್ಪರ ವಿಶ್​ ಮಾಡಿದ ವಿಡಿಯೋ ವೈರಲ್​ ಆಗಿದೆ. ಇದಕ್ಕೆ ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ಇಬ್ಬರು ನಡುವೆ ಯಾವುದೇ ಮನಸ್ಥಾಪ ಇಲ್ಲ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಆದರೆ ನೇರವಾಗಿ ಮಾತನಾಡಿದ ಕಂಗನಾ ರಣಾವತ್​ ಅವರು ನಿಷ್ಠುರ ಕಟ್ಟಿಕೊಳ್ಳುವಂತಾಗಿದೆ.

ಇದನ್ನೂ ಓದಿ: Kangana Ranaut: ಎಲ್ಲರ ಬಳಿ ಕ್ಷಮೆ ಕೇಳಿದ ಕಂಗನಾ ರಣಾವತ್​; ಬರ್ತ್​ಡೇ ದಿನವೇ ಬದಲಾಯಿತು ಮನಸ್ಸು

‘ಪ್ರಿಯಾಂಕಾ ಚೋಪ್ರಾ ಅವರನ್ನು ಬಾಲಿವುಡ್​ನಲ್ಲಿ ಬ್ಯಾನ್​ ಮಾಡಿದ್ದೇ ಕರಣ್​ ಜೋಹರ್​’ ಎಂದು ಕಂಗನಾ ರಣಾವತ್​ ಹೇಳಿದ್ದರು. ಈ ವಿಚಾರವಾಗಿ ಅವರು ಮುಂಬೈ ಏರ್​ಪೋರ್ಟ್​ನಲ್ಲೂ ಪಾಪರಾಜಿಗಳನ್ನು ವ್ಯಂಗ್ಯವಾಡಿದ್ದರು. ಇದಕ್ಕೆ ಪರೋಕ್ಷವಾಗಿ ತಿರುಗೇಟ್ ನೀಡಿದ ಕರಣ್​ ಜೋಹರ್​ ಅವರು, ‘ವಿಮಾನ ನಿಲ್ದಾಣ ಒಂದು ರನ್​ ವೇ. ಅದು ಸುದ್ದಿಗೋಷ್ಠಿ ಮಾಡುವ ಸ್ಥಳ ಕೂಡ ಆಗಿದೆ. ಮುಂದಿನ ದಿನಗಳಲ್ಲಿ ಅದು ಟ್ರೇಲರ್​ ಲಾಂಚ್​ ಮಾಡುವ ಜಾಗವೂ ಆಗಬಹುದು’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:58 am, Sun, 2 April 23

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ