ಕಂಗನಾ ರಣಾವತ್​-ಕರಣ್​ ಜೋಹರ್​ ನಡುವಿನ ಜಗಳ ಜೋರಾಯ್ತು; ಪರೋಕ್ಷವಾಗಿ ಕುಟುಕಿದ ನಿರ್ಮಾಪಕ

|

Updated on: Mar 31, 2023 | 5:31 PM

ಇತ್ತೀಚಿನ ಕೆಲವು ಘಟನೆಗಳ ಬಗ್ಗೆ ಕರಣ್​ ಜೋಹರ್​ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಆ ಕುರಿತು ನೆಟ್ಟಿಗರು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಕಂಗನಾ ರಣಾವತ್​-ಕರಣ್​ ಜೋಹರ್​ ನಡುವಿನ ಜಗಳ ಜೋರಾಯ್ತು; ಪರೋಕ್ಷವಾಗಿ ಕುಟುಕಿದ ನಿರ್ಮಾಪಕ
ಕರಣ್ ಜೋಹರ್, ಕಂಗನಾ ರಣಾವತ್
Follow us on

ನಟಿ ಕಂಗನಾ ರಣಾವತ್​ (Priyanka Chopra) ಅವರು ಅನೇಕರ ಜೊತೆ ಕಿರಿಕ್​ ಮಾಡಿಕೊಂಡಿದ್ದಾರೆ. ಅದರಲ್ಲೂ ಬಾಲಿವುಡ್ ನಿರ್ಮಾಪಕ ಕರಣ್​ ಜೋಹರ್​ ಬಗ್ಗೆ ಅವರು ಅನೇಕ ಬಾರಿ ಬಹಿರಂಗವಾಗಿ ಕಿಡಿಕಾರಿದ್ದಿದೆ. ಹಿಂದಿ ಚಿತ್ರರಂಗದಲ್ಲಿ ಕರಣ್​ ಜೋಹರ್​ ಅವರು ನೆಪೋಟಿಸಂ ಪ್ರೋತ್ಸಾಹಿಸುತ್ತಾರೆ ಎಂಬ ಕಾರಣಕ್ಕೆ ಅವರನ್ನು ಕಂಡರೆ ಕಂಗನಾಗೆ ಆಗುವುದಿಲ್ಲ. ಸಮಯ ಸಿಕ್ಕಾಗಲೆಲ್ಲ ಅವರು ಕರಣ್​ ಜೋಹರ್​ (Karan Johar) ವಿರುದ್ಧ ಗುಡುಗುತ್ತಾರೆ. ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಬಗ್ಗೆ ಕಂಗನಾ ವ್ಯಂಗ್ಯವಾಡಿದ್ದರು. ಈ ಎಲ್ಲ ಘಟನೆಗಳ ಬಗ್ಗೆ ಕರಣ್​ ಜೋಹರ್​ ಅವರು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಆ ಬಗ್ಗೆ ನೆಟ್ಟಿಗರು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಕರಣ್​ ಜೋಹರ್​ ಅವರು ಕೆಲವು ಸ್ಟೋರಿ ಪೋಸ್ಟ್​ ಮಾಡಿದ್ದಾರೆ. ‘ವಿಮಾನ ನಿಲ್ದಾಣ ಒಂದು ರನ್​ ವೇ. ಅದು ಸುದ್ದಿಗೋಷ್ಠಿ ಮಾಡುವ ಸ್ಥಳ ಕೂಡ ಆಗಿದೆ. ಮುಂದಿನ ದಿನಗಳಲ್ಲಿ ಅದು ಟ್ರೇಲರ್​ ಲಾಂಚ್​ ಮಾಡುವ ಜಾಗವೂ ಆಗಬಹುದು’ ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ. ಅವರು ಈ ರೀತಿ ಪೋಸ್ಟ್​ ಮಾಡಿರುವುದು ಕಂಗನಾ ರಣಾವತ್​ ಬಗ್ಗೆಯೇ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: ನೆಪೋಟಿಸಂ ಅಂದ್ರೆ ನೆನಪಾಗೋದೇ ಕರಣ್​ ಜೋಹರ್​

ಇದನ್ನೂ ಓದಿ
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​ ತೊರೆದಿದ್ದರ ಬಗ್ಗೆ ಇತ್ತೀಚೆಗೆ ಮೌನ ಮುರಿದರು. ಹಿಂದಿ ಚಿತ್ರರಂಗದ ಒಳರಾಜಕೀಯದ ಕಾರಣದಿಂದ ತಾವು ಹಾಲಿವುಡ್​ಗೆ ಹೋಗಿದ್ದಾಗಿ ಅವರು ಹೇಳಿದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕಂಗನಾ ರಣಾವತ್​ ಅವರು ನೇರವಾಗಿ ಕರಣ್​ ಜೋಹರ್​ ಕಡೆಗೆ ಕೈ ತೋರಿಸಿದರು. ಅದರ ಬಗ್ಗೆ ಪ್ರತಿಕ್ರಿಯೆ ಪಡೆಯುವ ಸಲುವಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರನ್ನು ಪಾಪರಾಜಿಗಳು ಮಾತನಾಡಿಸುವ ಪ್ರಯತ್ನ ಮಾಡಿದ್ದರು.

ಇದನ್ನೂ ಓದಿ: Karan Johar: ಐಡಿ ಕಾರ್ಡ್​ ತೋರಿಸದೇ ಏರ್​ಪೋರ್ಟ್​ ಒಳಗೆ ನುಗ್ಗಲು ಯತ್ನಿಸಿದ ಕರಣ್​ ಜೋಹರ್​; ವಿಡಿಯೋ ವೈರಲ್​

‘ನನ್ನ ಬಗ್ಗೆ ಏನಾದರೂ ಕಾಂಟ್ರವರ್ಸಿ ಇದ್ದರೆ ನೀವೆಲ್ಲ ಎಷ್ಟು ಜೋರಾಗಿ ಕೂಗಾಡುತ್ತ ಪ್ರಶ್ನೆ ಕೇಳುತ್ತೀರಿ.. ಆದರೆ ಈಗ ಮೌನವಾಗಿದ್ದೀರಿ. ನನಗೆ ಎಲ್ಲವೂ ತಿಳಿದಿದೆ’ ಎಂದು ಕಂಗನಾ ಅವರು ನಗುನಗುತ್ತಲೇ ಪಾಪರಾಜಿಗಳನ್ನು ಟೀಕೆ ಮಾಡಿದರು. ಇದೇ ಘಟನೆಯನ್ನು ಗಮನದಲ್ಲಿ ಇಟ್ಟುಕೊಂಡು ಕರಣ್​ ಜೋಹರ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ಸ್ಟೋರಿ ಪೋಸ್ಟ್​ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕರಣ್​ ಜೋಹರ್​ ಅವರು ನಿರ್ಮಾಪಕನಾಗಿ, ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಫೇಮಸ್​ ಆಗಿದ್ದಾರೆ. ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲುತ್ತದೆ. ಶೀಘ್ರದಲ್ಲೇ ಅವರು ‘ಕಾಫಿ ವಿತ್​ ಕರಣ್​’ 8ನೇ ಸೀಸನ್​ಗೆ ಚಾಲನೆ ನೀಡುತ್ತಾರೆ ಎನ್ನಲಾಗಿದೆ. ಇದಲ್ಲದೇ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದಲ್ಲಿ ರಣವೀರ್​ ಸಿಂಗ್​ ಮತ್ತು ಆಲಿಯಾ ಭಟ್​ ಜೋಡಿಯಾಗಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:31 pm, Fri, 31 March 23