ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಮೊಟ್ಟ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು ದಳಪತಿ ವಿಜಯ್​ ಜೊತೆ. ಆ ಸಿನಿಮಾದಲ್ಲಿ ನಟಿಸಲು ಆಫರ್​ ಬಂದಾಗ ಪ್ರಿಯಾಂಕಾ ಅವರು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಆ ಘಟನೆಯ ಬಗ್ಗೆ ಅವರ ತಾಯಿ ಮಧು ಚೋಪ್ರಾ ಈಗ ಮಾತನಾಡಿದ್ದಾರೆ. ತಮಿಳಿನಲ್ಲಿ ಮೊದಲ ಸಿನಿಮಾ ಮಾಡಿದ ಬಳಿಕ ಪ್ರಿಯಾಂಕಾ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆದರು.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ, ದಳಪತಿ ವಿಜಯ್​
Follow us
|

Updated on: May 30, 2024 | 4:03 PM

ನಟ ದಳಪತಿ ವಿಜಯ್​ (Thalapathy Vijay) ಜೊತೆ ಸಿನಿಮಾ ಮಾಡಬೇಕು ಎಂಬುದು ಎಷ್ಟೋ ನಟಿಯರ ಆಸೆ. ಆದರೆ ಪ್ರಿಯಾಂಕಾ ಚೋಪ್ರಾ (Priyanka Chopra) ಅವರಿಗೆ ಅಂಥ ಆಫರ್​ ಸಿಕ್ಕಾಗ ಅವರು ಕಣ್ಣೀರು ಹಾಕಿದ್ದರು. ಆ ಸಿನಿಮಾವನ್ನು ಒಪ್ಪಿಕೊಳ್ಳಲು ಪ್ರಿಯಾಂಕಾ ಚೋಪ್ರಾಗೆ ಇಷ್ಟ ಇರಲಿಲ್ಲ. ಬಳಿಕ ತಾಯಿ ಮಧು ಚೋಪ್ರಾ ಅವರು ಮನವೊಲಿಸಿದ ಬಳಿಕ ಪ್ರಿಯಾಂಕಾ ಆ ಸಿನಿಮಾ ಮಾಡಲು ಒಪ್ಪಿಕೊಂಡರು. ಈ ಘಟನೆ ನಡೆದಿದ್ದು 2002ರಲ್ಲಿ. ಆ ಘಟನೆಯನ್ನು ಮಧು ಚೋಪ್ರಾ (Madhu Chopra) ಅವರು ಈಗ ನೆನಪಿಸಿಕೊಂಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

2000ನೇ ಇಸವಿಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಮಿಸ್​ ವರ್ಲ್ಡ್​ ಕಿರೀಟ ಮುಡಿಗೇರಿಸಿಕೊಂಡರು. ಬಳಿಕ ಅವರಿಗೆ ತಮಿಳು ಚಿತ್ರರಂಗದಿಂದ ಆಫರ್​ ಬಂತು. ದಳಪತಿ ವಿಜಯ್​ ನಟನೆಯ ‘ತಮಿಳನ್​’ ಸಿನಿಮಾಗೆ ನಾಯಕಿ ಆಗುವಂತೆ ಆಫರ್​ ನೀಡಲಾಯಿತು. ಆದರೆ ತಾವು ಆ ಸಿನಿಮಾ ಮಾಡಲ್ಲ ಎಂದು ಪ್ರಿಯಾಂಕಾ ಚೋಪ್ರಾ ಅವರು ಅಳಲು ಆರಂಭಿಸಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಮಧು ಚೋಪ್ರಾ ವಿವವರಿಸಿದ್ದಾರೆ.

‘ಸಿನಿಮಾಗಳಲ್ಲಿ ನಟಿಸುವುದು ಪ್ರಿಯಾಂಕಾಗೆ ಇಷ್ಟ ಇರಲಿಲ್ಲ. ಯಾರಿಂದಲೂ ಆಕೆಗೆ ದಕ್ಷಿಣ ಭಾರತದ ಸಿನಿಮಾ ಆಫರ್​ ಸಿಕ್ಕಿತು. ಆ ಬಗ್ಗೆ ನಾನು ಆಕೆಗೆ ಹೇಳಿದಾಗ ಅಳಲು ಆರಂಭಿಸಿದಳು. ಸಿನಿಮಾಗಳಲ್ಲಿ ನಟಿಸಲು ತನಗೆ ಇಷ್ಟ ಇಲ್ಲ ಎಂದಳು. ಆದರೆ ಒಪ್ಪಿಕೋ ಎಂದು ನಾನು ಹೇಳಿದ ಬಳಿಕ ಸಹಿ ಮಾಡಿದಳು’ ಎಂದು ಮಧು ಚೋಪ್ರಾ ಹೇಳಿದ್ದಾರೆ. ಆ ಸಿನಿಮಾದ ಬಳಿಕ ಪ್ರಿಯಾಂಕಾ ಅವರಿಗೆ ಬಾಲಿವುಡ್​ನಿಂದ ಆಫರ್​ ಬರಲು ಆರಂಭ ಆಯಿತು.

ಇದನ್ನೂ ಓದಿ: ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ದಳಪತಿ ವಿಜಯ್?

‘ದಳಪತಿ ವಿಜಯ್​ ಜೊತೆ ಸಿನಿಮಾ ಮಾಡಲು ಆರಂಭಿಸಿದಾಗ ಪ್ರಿಯಾಂಕಾಗೆ ಅದು ಇಷ್ಟ ಆಯಿತು. ತಮಿಳು ಭಾಷೆ ಬರದಿದ್ದರೂ ಕೂಡ ಆಕೆ ಶೂಟಿಂಗ್​ ಎಂಜಾಯ್​ ಮಾಡಿದಳು. ಚಿತ್ರತಂಡದವರು ಆಕೆಯನ್ನು ಗೌರವದಿಂದ ನೋಡಿಕೊಂಡರು. ವಿಜಯ್​ ಅವರು ಜಂಟಲ್​ಮನ್​. ಹಾಡಿಗೆ ರಾಜು ಸುಂದರಂ ಕೊರಿಯೋಗ್ರಫಿ ಮಾಡಿದರು. ಆರಂಭದಲ್ಲಿ ವಿಜಯ್​ ಜೊತೆ ಡ್ಯಾನ್ಸ್​ ಸ್ಟೆಪ್​ ಮ್ಯಾಚ್​ ಮಾಡಲು ಪ್ರಿಯಾಂಕಾಗೆ ಸಾಧ್ಯವಾಗಲಿಲ್ಲ. ನಂತರ ಕೊರಿಯೋಗ್ರಾಫರ್​ ಜೊತೆ ಅಭ್ಯಾಸ ಮಾಡಿ ಶೂಟಿಂಗ್​ನಲ್ಲಿ ಭಾಗಿಯಾದಳು’ ಎಂದಿದ್ದಾರೆ ಮಧು ಚೋಪ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!