AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಮೊಟ್ಟ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು ದಳಪತಿ ವಿಜಯ್​ ಜೊತೆ. ಆ ಸಿನಿಮಾದಲ್ಲಿ ನಟಿಸಲು ಆಫರ್​ ಬಂದಾಗ ಪ್ರಿಯಾಂಕಾ ಅವರು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಆ ಘಟನೆಯ ಬಗ್ಗೆ ಅವರ ತಾಯಿ ಮಧು ಚೋಪ್ರಾ ಈಗ ಮಾತನಾಡಿದ್ದಾರೆ. ತಮಿಳಿನಲ್ಲಿ ಮೊದಲ ಸಿನಿಮಾ ಮಾಡಿದ ಬಳಿಕ ಪ್ರಿಯಾಂಕಾ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆದರು.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ, ದಳಪತಿ ವಿಜಯ್​
ಮದನ್​ ಕುಮಾರ್​
|

Updated on: May 30, 2024 | 4:03 PM

Share

ನಟ ದಳಪತಿ ವಿಜಯ್​ (Thalapathy Vijay) ಜೊತೆ ಸಿನಿಮಾ ಮಾಡಬೇಕು ಎಂಬುದು ಎಷ್ಟೋ ನಟಿಯರ ಆಸೆ. ಆದರೆ ಪ್ರಿಯಾಂಕಾ ಚೋಪ್ರಾ (Priyanka Chopra) ಅವರಿಗೆ ಅಂಥ ಆಫರ್​ ಸಿಕ್ಕಾಗ ಅವರು ಕಣ್ಣೀರು ಹಾಕಿದ್ದರು. ಆ ಸಿನಿಮಾವನ್ನು ಒಪ್ಪಿಕೊಳ್ಳಲು ಪ್ರಿಯಾಂಕಾ ಚೋಪ್ರಾಗೆ ಇಷ್ಟ ಇರಲಿಲ್ಲ. ಬಳಿಕ ತಾಯಿ ಮಧು ಚೋಪ್ರಾ ಅವರು ಮನವೊಲಿಸಿದ ಬಳಿಕ ಪ್ರಿಯಾಂಕಾ ಆ ಸಿನಿಮಾ ಮಾಡಲು ಒಪ್ಪಿಕೊಂಡರು. ಈ ಘಟನೆ ನಡೆದಿದ್ದು 2002ರಲ್ಲಿ. ಆ ಘಟನೆಯನ್ನು ಮಧು ಚೋಪ್ರಾ (Madhu Chopra) ಅವರು ಈಗ ನೆನಪಿಸಿಕೊಂಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

2000ನೇ ಇಸವಿಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಮಿಸ್​ ವರ್ಲ್ಡ್​ ಕಿರೀಟ ಮುಡಿಗೇರಿಸಿಕೊಂಡರು. ಬಳಿಕ ಅವರಿಗೆ ತಮಿಳು ಚಿತ್ರರಂಗದಿಂದ ಆಫರ್​ ಬಂತು. ದಳಪತಿ ವಿಜಯ್​ ನಟನೆಯ ‘ತಮಿಳನ್​’ ಸಿನಿಮಾಗೆ ನಾಯಕಿ ಆಗುವಂತೆ ಆಫರ್​ ನೀಡಲಾಯಿತು. ಆದರೆ ತಾವು ಆ ಸಿನಿಮಾ ಮಾಡಲ್ಲ ಎಂದು ಪ್ರಿಯಾಂಕಾ ಚೋಪ್ರಾ ಅವರು ಅಳಲು ಆರಂಭಿಸಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಮಧು ಚೋಪ್ರಾ ವಿವವರಿಸಿದ್ದಾರೆ.

‘ಸಿನಿಮಾಗಳಲ್ಲಿ ನಟಿಸುವುದು ಪ್ರಿಯಾಂಕಾಗೆ ಇಷ್ಟ ಇರಲಿಲ್ಲ. ಯಾರಿಂದಲೂ ಆಕೆಗೆ ದಕ್ಷಿಣ ಭಾರತದ ಸಿನಿಮಾ ಆಫರ್​ ಸಿಕ್ಕಿತು. ಆ ಬಗ್ಗೆ ನಾನು ಆಕೆಗೆ ಹೇಳಿದಾಗ ಅಳಲು ಆರಂಭಿಸಿದಳು. ಸಿನಿಮಾಗಳಲ್ಲಿ ನಟಿಸಲು ತನಗೆ ಇಷ್ಟ ಇಲ್ಲ ಎಂದಳು. ಆದರೆ ಒಪ್ಪಿಕೋ ಎಂದು ನಾನು ಹೇಳಿದ ಬಳಿಕ ಸಹಿ ಮಾಡಿದಳು’ ಎಂದು ಮಧು ಚೋಪ್ರಾ ಹೇಳಿದ್ದಾರೆ. ಆ ಸಿನಿಮಾದ ಬಳಿಕ ಪ್ರಿಯಾಂಕಾ ಅವರಿಗೆ ಬಾಲಿವುಡ್​ನಿಂದ ಆಫರ್​ ಬರಲು ಆರಂಭ ಆಯಿತು.

ಇದನ್ನೂ ಓದಿ: ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ದಳಪತಿ ವಿಜಯ್?

‘ದಳಪತಿ ವಿಜಯ್​ ಜೊತೆ ಸಿನಿಮಾ ಮಾಡಲು ಆರಂಭಿಸಿದಾಗ ಪ್ರಿಯಾಂಕಾಗೆ ಅದು ಇಷ್ಟ ಆಯಿತು. ತಮಿಳು ಭಾಷೆ ಬರದಿದ್ದರೂ ಕೂಡ ಆಕೆ ಶೂಟಿಂಗ್​ ಎಂಜಾಯ್​ ಮಾಡಿದಳು. ಚಿತ್ರತಂಡದವರು ಆಕೆಯನ್ನು ಗೌರವದಿಂದ ನೋಡಿಕೊಂಡರು. ವಿಜಯ್​ ಅವರು ಜಂಟಲ್​ಮನ್​. ಹಾಡಿಗೆ ರಾಜು ಸುಂದರಂ ಕೊರಿಯೋಗ್ರಫಿ ಮಾಡಿದರು. ಆರಂಭದಲ್ಲಿ ವಿಜಯ್​ ಜೊತೆ ಡ್ಯಾನ್ಸ್​ ಸ್ಟೆಪ್​ ಮ್ಯಾಚ್​ ಮಾಡಲು ಪ್ರಿಯಾಂಕಾಗೆ ಸಾಧ್ಯವಾಗಲಿಲ್ಲ. ನಂತರ ಕೊರಿಯೋಗ್ರಾಫರ್​ ಜೊತೆ ಅಭ್ಯಾಸ ಮಾಡಿ ಶೂಟಿಂಗ್​ನಲ್ಲಿ ಭಾಗಿಯಾದಳು’ ಎಂದಿದ್ದಾರೆ ಮಧು ಚೋಪ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್