AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಮೊಟ್ಟ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು ದಳಪತಿ ವಿಜಯ್​ ಜೊತೆ. ಆ ಸಿನಿಮಾದಲ್ಲಿ ನಟಿಸಲು ಆಫರ್​ ಬಂದಾಗ ಪ್ರಿಯಾಂಕಾ ಅವರು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಆ ಘಟನೆಯ ಬಗ್ಗೆ ಅವರ ತಾಯಿ ಮಧು ಚೋಪ್ರಾ ಈಗ ಮಾತನಾಡಿದ್ದಾರೆ. ತಮಿಳಿನಲ್ಲಿ ಮೊದಲ ಸಿನಿಮಾ ಮಾಡಿದ ಬಳಿಕ ಪ್ರಿಯಾಂಕಾ ಅವರು ಬಾಲಿವುಡ್​ನಲ್ಲಿ ಬ್ಯುಸಿ ಆದರು.

ವಿಜಯ್​ ಜತೆ ಸಿನಿಮಾ ಮಾಡಲ್ಲ ಅಂತ ಕಣ್ಣೀರು ಹಾಕಿದ್ದ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ, ದಳಪತಿ ವಿಜಯ್​
Follow us
ಮದನ್​ ಕುಮಾರ್​
|

Updated on: May 30, 2024 | 4:03 PM

ನಟ ದಳಪತಿ ವಿಜಯ್​ (Thalapathy Vijay) ಜೊತೆ ಸಿನಿಮಾ ಮಾಡಬೇಕು ಎಂಬುದು ಎಷ್ಟೋ ನಟಿಯರ ಆಸೆ. ಆದರೆ ಪ್ರಿಯಾಂಕಾ ಚೋಪ್ರಾ (Priyanka Chopra) ಅವರಿಗೆ ಅಂಥ ಆಫರ್​ ಸಿಕ್ಕಾಗ ಅವರು ಕಣ್ಣೀರು ಹಾಕಿದ್ದರು. ಆ ಸಿನಿಮಾವನ್ನು ಒಪ್ಪಿಕೊಳ್ಳಲು ಪ್ರಿಯಾಂಕಾ ಚೋಪ್ರಾಗೆ ಇಷ್ಟ ಇರಲಿಲ್ಲ. ಬಳಿಕ ತಾಯಿ ಮಧು ಚೋಪ್ರಾ ಅವರು ಮನವೊಲಿಸಿದ ಬಳಿಕ ಪ್ರಿಯಾಂಕಾ ಆ ಸಿನಿಮಾ ಮಾಡಲು ಒಪ್ಪಿಕೊಂಡರು. ಈ ಘಟನೆ ನಡೆದಿದ್ದು 2002ರಲ್ಲಿ. ಆ ಘಟನೆಯನ್ನು ಮಧು ಚೋಪ್ರಾ (Madhu Chopra) ಅವರು ಈಗ ನೆನಪಿಸಿಕೊಂಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

2000ನೇ ಇಸವಿಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಮಿಸ್​ ವರ್ಲ್ಡ್​ ಕಿರೀಟ ಮುಡಿಗೇರಿಸಿಕೊಂಡರು. ಬಳಿಕ ಅವರಿಗೆ ತಮಿಳು ಚಿತ್ರರಂಗದಿಂದ ಆಫರ್​ ಬಂತು. ದಳಪತಿ ವಿಜಯ್​ ನಟನೆಯ ‘ತಮಿಳನ್​’ ಸಿನಿಮಾಗೆ ನಾಯಕಿ ಆಗುವಂತೆ ಆಫರ್​ ನೀಡಲಾಯಿತು. ಆದರೆ ತಾವು ಆ ಸಿನಿಮಾ ಮಾಡಲ್ಲ ಎಂದು ಪ್ರಿಯಾಂಕಾ ಚೋಪ್ರಾ ಅವರು ಅಳಲು ಆರಂಭಿಸಿದ್ದರು. ಅದಕ್ಕೆ ಕಾರಣ ಏನು ಎಂಬುದನ್ನು ಮಧು ಚೋಪ್ರಾ ವಿವವರಿಸಿದ್ದಾರೆ.

‘ಸಿನಿಮಾಗಳಲ್ಲಿ ನಟಿಸುವುದು ಪ್ರಿಯಾಂಕಾಗೆ ಇಷ್ಟ ಇರಲಿಲ್ಲ. ಯಾರಿಂದಲೂ ಆಕೆಗೆ ದಕ್ಷಿಣ ಭಾರತದ ಸಿನಿಮಾ ಆಫರ್​ ಸಿಕ್ಕಿತು. ಆ ಬಗ್ಗೆ ನಾನು ಆಕೆಗೆ ಹೇಳಿದಾಗ ಅಳಲು ಆರಂಭಿಸಿದಳು. ಸಿನಿಮಾಗಳಲ್ಲಿ ನಟಿಸಲು ತನಗೆ ಇಷ್ಟ ಇಲ್ಲ ಎಂದಳು. ಆದರೆ ಒಪ್ಪಿಕೋ ಎಂದು ನಾನು ಹೇಳಿದ ಬಳಿಕ ಸಹಿ ಮಾಡಿದಳು’ ಎಂದು ಮಧು ಚೋಪ್ರಾ ಹೇಳಿದ್ದಾರೆ. ಆ ಸಿನಿಮಾದ ಬಳಿಕ ಪ್ರಿಯಾಂಕಾ ಅವರಿಗೆ ಬಾಲಿವುಡ್​ನಿಂದ ಆಫರ್​ ಬರಲು ಆರಂಭ ಆಯಿತು.

ಇದನ್ನೂ ಓದಿ: ಕೊನೆಯ ಚಿತ್ರಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ದಳಪತಿ ವಿಜಯ್?

‘ದಳಪತಿ ವಿಜಯ್​ ಜೊತೆ ಸಿನಿಮಾ ಮಾಡಲು ಆರಂಭಿಸಿದಾಗ ಪ್ರಿಯಾಂಕಾಗೆ ಅದು ಇಷ್ಟ ಆಯಿತು. ತಮಿಳು ಭಾಷೆ ಬರದಿದ್ದರೂ ಕೂಡ ಆಕೆ ಶೂಟಿಂಗ್​ ಎಂಜಾಯ್​ ಮಾಡಿದಳು. ಚಿತ್ರತಂಡದವರು ಆಕೆಯನ್ನು ಗೌರವದಿಂದ ನೋಡಿಕೊಂಡರು. ವಿಜಯ್​ ಅವರು ಜಂಟಲ್​ಮನ್​. ಹಾಡಿಗೆ ರಾಜು ಸುಂದರಂ ಕೊರಿಯೋಗ್ರಫಿ ಮಾಡಿದರು. ಆರಂಭದಲ್ಲಿ ವಿಜಯ್​ ಜೊತೆ ಡ್ಯಾನ್ಸ್​ ಸ್ಟೆಪ್​ ಮ್ಯಾಚ್​ ಮಾಡಲು ಪ್ರಿಯಾಂಕಾಗೆ ಸಾಧ್ಯವಾಗಲಿಲ್ಲ. ನಂತರ ಕೊರಿಯೋಗ್ರಾಫರ್​ ಜೊತೆ ಅಭ್ಯಾಸ ಮಾಡಿ ಶೂಟಿಂಗ್​ನಲ್ಲಿ ಭಾಗಿಯಾದಳು’ ಎಂದಿದ್ದಾರೆ ಮಧು ಚೋಪ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ