AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ಲೀಲಾ ಬನ್ಸಾಲಿ ಜೊತೆ ಪ್ರಿಯಾಂಕಾ ಚೋಪ್ರಾ ಹೊಸ ಸಿನಿಮಾ?

ಒಂದಷ್ಟು ಕೆಲಸಗಳ ಸಲುವಾಗಿ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಿಂದ ಮುಂಬೈಗೆ ಆಗಮಿಸಿದ್ದಾರೆ. ಅವರ ಪ್ರೊಡಕ್ಷನ್​ ಹೌಸ್​ ಕೂಡ ಇದೆ. ಅದರಲ್ಲಿ 3-4 ಪ್ರಾಜೆಕ್ಟ್​ಗಳನ್ನು ಸದ್ಯದಲ್ಲೇ ಆರಂಭಿಸಲಾಗುತ್ತಿದೆ. ಆ ಸಲುವಾಗಿ ಕೆಲವರ ಜೊತೆ ಪ್ರಿಯಾಂಕಾ ಚೋಪ್ರಾ ಮೀಟಿಂಗ್​ ನಡೆಸಿದ್ದಾರೆ. ಇದೇ ವೇಳೆ ಸಂಜಯ್​ ಲೀಲಾ ಬನ್ಸಾಲಿ ಜೊತೆಗೂ ಅವರು ಮಾತುಕತೆ ಮಾಡಿದ್ದಾರೆ ಎನ್ನಲಾಗಿದೆ.

ಸಂಜಯ್​ ಲೀಲಾ ಬನ್ಸಾಲಿ ಜೊತೆ ಪ್ರಿಯಾಂಕಾ ಚೋಪ್ರಾ ಹೊಸ ಸಿನಿಮಾ?
ಪ್ರಿಯಾಂಕಾ ಚೋಪ್ರಾ, ಸಂಜಯ್​ ಲೀಲಾ ಬನ್ಸಾಲಿ
ಮದನ್​ ಕುಮಾರ್​
|

Updated on: Mar 22, 2024 | 6:08 PM

Share

ಸದ್ಯಕ್ಕೆ ಅಮೆರಿಕದಲ್ಲೇ ಸೆಟ್ಲ್​ ಆಗಿರುವ ಪ್ರಿಯಾಂಕಾ ಚೋಪ್ರಾ ಅವರು ಮತ್ತೆ ಬಾಲಿವುಡ್​ (Bollywood) ಸಿನಿಮಾ ಮಾಡುವುದು ಯಾವಾಗ ಎಂದು ಅಭಿಮಾನಿಗಳು ಕಾದಿದ್ದಾರೆ. ಅಂಥವರಿಗೆಲ್ಲ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಶೀಘ್ರದಲ್ಲೇ ಅವರು ಹಿಂದಿಯಲ್ಲಿ ಹೊಸ ಸಿನಿಮಾ ಬಗ್ಗೆ ಅನೌನ್ಸ್​ ಮಾಡುವ ಸಾಧ್ಯತೆ ದಟ್ಟವಾಗಿದೆ. ಕೆಲವೇ ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಭಾರತಕ್ಕೆ ಬಂದಿದ್ದು, ಹಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಕೆಲವು ನಿರ್ದೇಶಕರನ್ನು ಕೂಡ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಆ ಪೈಕಿ ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali) ಜೊತೆ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸಂಜಯ್​ ಲೀಲಾ ಬನ್ಸಾಲಿ ಮತ್ತು ಪ್ರಿಯಾಂಕಾ ಚೋಪ್ರಾ ಅವರ ನಡುವೆ ಉತ್ತಮ ಒಡನಾಟ ಇದೆ. ಈ ಹಿಂದೆ ಅವರು ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ ಸಿನಿಮಾಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು. ಅಲ್ಲದೇ ಸಂಜಯ್​ ಲೀಲಾ ಬನ್ಸಾಲಿ ಅವರ ಕಸುಬುದಾರಿಕೆ ಮೇಲೆ ಪ್ರಿಯಾಂಕಾ ಚೋಪ್ರಾ ಅವರಿಗೆ ಸಖತ್​ ನಂಬಿಕೆ ಇದೆ. ಹಾಗಾಗಿ ಅವರ ಜೊತೆಗಿನ ಹೊಸ ಸಿನಿಮಾಗೆ ಸಹಿ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಿಯಾಂಕಾ ಚೋಪ್ರಾ ಮತ್ತು ಸಂಜಯ್​ ಲೀಲಾ ಬನ್ಸಾಲಿ ಅವರ ಕಾಂಬಿನೇಷನ್​ನಲ್ಲಿ ಬರಲಿರುವ ಈ ಹೊಸ ಸಿನಿಮಾದಲ್ಲಿ ಆ್ಯಕ್ಷನ್​-ಥ್ರಿಲ್ಲರ್​ ಕಥೆ ಇರಲಿದೆ. ಬೇರೆ ಬೇರೆ ಕಾಲಘಟ್ಟದಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ. ಕಾಲಘಟ್ಟ ಯಾವುದು ಹಾಗೂ ಪ್ರಿಯಾಂಕಾ ಅವರ ಕಾಸ್ಟ್ಯೂಮ್​ ಯಾವ ರೀತಿ ಇರಲಿದೆ ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತಿದೆಯಂತೆ. ಒಂದು ವೇಳೆ ಈ ಸಿನಿಮಾ ಸೆಟ್ಟೇರಿದ್ದೇ ಹೌದಾದರೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಮಾಡಲಿದೆ.

ಇದನ್ನೂ ಓದಿ: ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

ಇಷ್ಟು ಮಾತ್ರವಲ್ಲದೇ ಇನ್ನೂ ಕೆಲವು ಕೆಲಸಗಳ ಸಲುವಾಗಿ ಪ್ರಿಯಾಂಕಾ ಚೋಪ್ರಾ ಅವರು ಮುಂಬೈಗೆ ಬಂದಿದ್ದಾರೆ. ಅವರದ್ದೇ ಪ್ರೊಡಕ್ಷನ್​ ಹೌಸ್​ ಇದೆ. ಅದರಲ್ಲಿ ಮೂರು-ನಾಲ್ಕು ಪ್ರಾಜೆಕ್ಟ್​ಗಳನ್ನು ಆರಂಭಿಸಲಾಗುತ್ತಿದೆ. ಆ ಸಲುವಾಗಿ ಕೆಲವರ ಜೊತೆ ಪ್ರಿಯಾಂಕಾ ಚೋಪ್ರಾ ಮೀಟಿಂಗ್​ ನಡೆಸಿದ್ದಾರೆ. ಈ ಎಲ್ಲ ಕೆಲಸಗಳನ್ನು ಮುಗಿಸಲು ಅವರು ಭಾರತಕ್ಕೆ ಬಂದಿದ್ದಾರೆ ಎಂದು ಆಪ್ತ ಮೂಲಗಳು ಹೇಳಿರುವುದಾಗಿ ‘ಪಿಂಕ್​ವಿಲ್ಲಾ’ ವರದಿ ಮಾಡಿದೆ.

ಇದನ್ನೂ ಓದಿ: ಅಂಬಾನಿ ಪ್ರೀ ವೆಡ್ಡಿಂಗ್ ಸಂಭ್ರಮಕ್ಕೆ ಪ್ರಿಯಾಂಕಾ ಚೋಪ್ರಾ ಬರಲಿಲ್ಲ ಏಕೆ?

ಅಮೆರಿಕದ ಪಾಪ್​ ಸಿಂಗರ್​ ನಿಕ್​ ಜೋನಸ್​​ ಅವರ ಜೊತೆ ಪ್ರಿಯಾಂಕಾ ಚೋಪ್ರಾ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಹಾಲಿವುಡ್​ ವಲಯದಲ್ಲಿ ಅವರು ಈಗ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ. ಮಗಳು ಮಾಲ್ತಿ ಮೇರಿ ಚೋಪ್ರಾ ಜೋನಸ್​ ಆರೈಕೆಯಲ್ಲೂ ಅವರು ಬ್ಯುಸಿ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅಪ್​ಡೇಟ್​ ನೀಡಲು ಸೋಶಿಯಲ್​ ಮೀಡಿಯಾದಲ್ಲಿ ಪ್ರಿಯಾಂಕಾ ಚೋಪ್ರಾ ಆ್ಯಕ್ಟೀವ್​ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ