AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಿಯಾಂಕಾ ವರ್ತನೆಯಿಂದ ನಾನು ಸಿನಿಮಾ ಕಳೆದುಕೊಂಡೆ’; ಈ ನಟನಿಗೆ ನಂತರ ಸಿಗಲೇ ಇಲ್ಲ ಗೆಲುವು  

ಸಿದ್ದಾರ್ಥ್ ಕಣ್ಣನ್ ಜೊತೆ ನಡೆದ ಸಂದರ್ಶನದಲ್ಲಿ ರಜನೀಶ್ ಈ ಬಗ್ಗೆ ಮಾತನಾಡಿದ್ದಾರೆ. ಹೊಸಬರ ಜೊತೆ ಸಿನಿಮಾ ಮಾಡಲ್ಲ ಎಂದು ಪ್ರಿಯಾಂಕಾ ಹೇಳಿದ್ದರು. ಹೀಗಾಗಿ, ನಿರ್ಮಾಪಕರು ರಜನೀಶ್ ಬದಲು ಬೇರೆಯವರನ್ನು ಆಯ್ಕೆ ಮಾಡಿಕೊಂಡಿದ್ದರು. ಆ ಬಳಿಕ ರಜನೀಶ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಮೂರು ವರ್ಷ ವಿಳಂಬ ಆಯಿತು.

‘ಪ್ರಿಯಾಂಕಾ ವರ್ತನೆಯಿಂದ ನಾನು ಸಿನಿಮಾ ಕಳೆದುಕೊಂಡೆ’; ಈ ನಟನಿಗೆ ನಂತರ ಸಿಗಲೇ ಇಲ್ಲ ಗೆಲುವು  
ರಜನೀಶ್​-ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
|

Updated on:May 27, 2024 | 7:40 AM

Share

ರಜನೀಶ್ ದುಗ್ಗಲ್ (Rajneesh Duggal) ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ‘ಮಿಸ್ಟರ್ ಇಂಡಿಯಾ’ ಹಾಗೂ ಮಿಸ್ಟರ್ ಇಂಟರ್​ನ್ಯಾಷನ್’ ಆಗಿ ಗಮನ ಸೆಳೆದಿದ್ದರು. ಅವರು 2005ರಲ್ಲಿ ಪ್ರಿಯಾಂಕಾ ಚೋಪ್ರಾ ಜೊತೆ ‘ಯಕೀನ್’ ಸಿನಿಮಾ ಮಾಡಬೇಕಿತ್ತು. ಆದರೆ, ಅವರಿಗೆ ಸಿಕ್ಕ ಸಿನಿಮಾ ಆಫರ್ ಪ್ರಿಯಾಂಕಾ ಚೋಪ್ರಾ ವರ್ತನೆಯಿಂದ ಕೈ ತಪ್ಪಿತು. ಈ ಬಗ್ಗೆ ಅವರು ಇತ್ತೀಚೆಗೆ ಹೇಳಿಕೊಂಡಿದ್ದಾರೆ.

ಸಿದ್ದಾರ್ಥ್ ಕಣ್ಣನ್ ಜೊತೆ ನಡೆದ ಸಂದರ್ಶನದಲ್ಲಿ ರಜನೀಶ್ ಈ ಬಗ್ಗೆ ಮಾತನಾಡಿದ್ದಾರೆ. ಹೊಸಬರ ಜೊತೆ ಸಿನಿಮಾ ಮಾಡಲ್ಲ ಎಂದು ಪ್ರಿಯಾಂಕಾ ಹೇಳಿದ್ದರು. ಹೀಗಾಗಿ, ನಿರ್ಮಾಪಕರು ರಜನೀಶ್ ಬದಲು ಬೇರೆಯವರನ್ನು ಆಯ್ಕೆ ಮಾಡಿಕೊಂಡಿದ್ದರು. ‘ಯಕೀನ್ ಚಿತ್ರಕ್ಕೆ ನಾನು ಮೊದಲ ಆಯ್ಕೆ ಆಗಿದ್ದೆ. ನಾನು ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದೆ. ನನ್ನೂರಿನಿಂದ ಮುಂಬೈ ಶಿಫ್ಟ್ ಆದೆ. ನಿರ್ಮಾಪಕರು ನನ್ನ ಜೊತೆ ಮೂರು ಸಿನಿಮಾಗಳ ಡೀಲ್ ಮಾಡಿಕೊಂಡಿದ್ದರು. ಯಕೀನ್ ಸಿನಿಮಾದಲ್ಲಿ ಪ್ರಿಯಾಂಕಾ ಜೊತೆ ನಾನು ನಟಿಸಬೇಕಿತ್ತು. ನನಗೆ ನಿರ್ಮಾಪಕರು ಜುಹುನಲ್ಲಿ ಪೆಂಟ್​ಹೌಸ್ ನೀಡಿದ್ದರು. ಓಡಾಡೋಕೆ ಕಾರು ಹಾಗೂ ಅದಕ್ಕೆ ಡ್ರೈವರ್ ಕೂಡ ಕೊಟ್ಟಿದ್ದರು. ನಿತ್ಯವೂ ನನ್ನ ಫ್ಲ್ಯಾಟ್​ಗೆ ಊಟ ಬರುತ್ತಿತ್ತು. ನಾನು ನಟನೆಯ ಬಗ್ಗೆ ಮಾತ್ರ ಗಮನ ಹರಿಸಿದೆ. ಆಗ ಬಂದ ಹಲವು ಜಾಹೀರಾತುಗಳನ್ನು ಕೈ ಬಿಟ್ಟೆ’ ಎಂದಿದ್ದಾರೆ ರಜನೀಶ್.

‘ಒಂದು ದಿನ ನಿರ್ಮಾಪಕ ಸುಜಿತ್ ಕುಮಾರ್ ಸಿಂಗ್ ನನ್ನನ್ನು ಕರೆದರು. ಪ್ರಿಯಾಂಕಾ ಚೋಪ್ರಾ ಹೊಸಬರ ಜೊತೆ ನಟಿಸಲ್ಲ ಎನ್ನುತ್ತಿದ್ದಾರೆ ಎಂದು ಹೇಳಿದರು. ನೀವು ನನ್ನ ಮೇಲೆ ಸಾಕಷ್ಟು ಹಣ ಸುರಿದಿದ್ದೀರಲ್ಲ, ನಟಿಯನ್ನು ಬದಲಾಯಿಸಿ ಎಂದು ನಿರ್ಮಾಪಕರಿಗೆ ಹೇಳಿದೆ. ಸಿನಿಮಾ ಬಿಸ್ನೆಸ್ ಹೇಗೆ ನಡೆಯುತ್ತದೆ ಎನ್ನುವುದರ ಅರಿವು ನನಗೆ ಇರಲಿಲ್ಲ. ಪ್ರಿಯಾಂಕಾ ನಿರ್ಧಾರ ತಪ್ಪು ಎನ್ನುವುದಿಲ್ಲ. ಆದರೆ, ಅವರು ನನ್ನ ಜೊತೆ ನಟಿಸುತ್ತೇನೆ ಎನ್ನಬೇಕಿತ್ತು’ ಎಂದಿದ್ದಾರೆ ರಜನೀಶ್.

ಇದನ್ನೂ ಓದಿ:  ಶಾರುಖ್ ಖಾನ್ ಅವರು ಒಂದುಸಲಕ್ಕೆ ಎಷ್ಟು ಸಿಗರೇಟು ಸೇದುತ್ತಾರೆ ಗೊತ್ತಾ?

ಆ ಬಳಿಕ ರಜನೀಶ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಮೂರು ವರ್ಷ ವಿಳಂಬ ಆಯಿತು. 2008ರಲ್ಲಿ ರಿಲೀಸ್ ಆದ ‘1920’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಹೇಳಿಕೊಳ್ಳುವಂಥ ಗೆಲುವು ನಂತರ ಸಿಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Mon, 27 May 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು