AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿಯ ಸಿಹಿ ಮಾತು

Priyanka Chopra: ನಟಿ ಪ್ರಿಯಾಂಕಾ ಚೋಪ್ರಾ ಭಾರತೀಯ ಚಿತ್ರರಂಗವನ್ನು ದಾಟಿ ಹಾಲಿವುಡ್​ನಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್​ನಲ್ಲಿ ಅವರಿಗೆ ಒಂದರ ಹಿಂದೊಂದು ಅವಕಾಶಗಳು ಲಭ್ಯವಾಗುತ್ತಿವೆ. ಬಾಲಿವುಡ್, ಹಾಲಿವುಡ್ ಎರಡಲ್ಲೂ ಸ್ಟಾರ್ ಆಗಿರುವ ಪ್ರಿಯಾಂಕಾ ಚೋಪ್ರಾಗೆ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್​ ಜೊತೆಗೆ ಆಪ್ತ ನಂಟಿದೆ. ಪ್ರಿಯಾಂಕಾ ಚೋಪ್ರಾರ ತಾಯಿ ಮಧು ಚೋಪ್ರಾ, ದಳಪತಿ ವಿಜಯ್ ಬಗ್ಗೆ ಮಾತನಾಡಿದ್ದಾರೆ.

ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿಯ ಸಿಹಿ ಮಾತು
Priyanka Chopra
ಮಂಜುನಾಥ ಸಿ.
|

Updated on: Mar 04, 2025 | 11:37 AM

Share

ಪ್ರಿಯಾಂಕಾ ಚೋಪ್ರಾ ಈಗ ಹಾಲಿವುಡ್ ನಟಿ. ಭಾರತೀಯ ಚಿತ್ರರಂಗವನ್ನು ದಾಟಿ ಹಾಲಿವುಡ್​ನಲ್ಲಿ ಹವಾ ಎಬ್ಬಿಸಿದ್ದಾರೆ. ಆದರೆ ಪ್ರಿಯಾಂಕಾ ಚೋಪ್ರಾಗೂ, ತಮಿಳಿನ ಸ್ಟಾರ್ ನಟ ದಳಪತಿ ವಿಜಯ್​ಗೂ ಆಪ್ತ ನಂಟು ಇದೆ. ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾಕ್ಕೆ ದಳಪತಿ ವಿಜಯ್ ನಾಯಕ. 2002 ರಲ್ಲಿ ಬಿಡುಗಡೆ ಆದ ‘ತಮಿಳನ್’ ಸಿನಿಮಾ ಪ್ರಿಯಾಂಕಾ ಚೋಪ್ರಾ ನಟಿಸಿದ ಮೊದಲ ಸಿನಿಮಾ. ಅದಾಗಲೇ ಸ್ಟಾರ್ ನಟರಾಗಿದ್ದ ವಿಜಯ್ ಆ ಸಿನಿಮಾಕ್ಕೆ ನಾಯಕ. ಈಗ ಪ್ರಿಯಾಂಕಾ ಚೋಪ್ರಾ ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಪ್ರಿಯಾಂಕಾ ಅವರ ತಾಯಿ ವಿಜಯ್ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದು, ಮೊದಲ ಸಿನಿಮಾದ ನೆನಪುಗಳನ್ನು ಮೆಲಕು ಹಾಕಿದ್ದಾರೆ.

ಇತ್ತೀಚೆಗೆ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಪ್ರಿಯಾಂಕಾ ಚೋಪ್ರಾರ ತಾಯಿ ಮಧು ಚೋಪ್ರಾ, ‘ಮಿಸ್ ವರ್ಲ್ಡ್ ಗೆದ್ದ ಬಳಿಕ ಪ್ರಿಯಾಂಕಾ ಚೋಪ್ರಾಗೆ ಮುಂದೆ ಏನು ಮಾಡಬೇಕು ಎಂಬ ಯೋಚನೆ ಇರಲಿಲ್ಲ. ನಟನೆ ಬಗ್ಗೆ ಆಸಕ್ತಿ ಇರಲಿಲ್ಲ. ‘ತಮಿಳನ್’ ಸಿನಿಮಾ ಅವಕಾಶವನ್ನು ಪ್ರಿಯಾಂಕಾ ನಿರಾಕರಿಸಿಬಿಟ್ಟಿದ್ದರು. ಆ ನಂತರ ‘ತಮಿಳನ್’ ತಂಡದವರು ಪ್ರಿಯಾಂಕಾರ ತಂದೆಯ ಮೂಲಕ ಪ್ರಿಯಾಂಕಾರನ್ನು ಸಿನಿಮಾದಲ್ಲಿ ನಟಿಸಲು ಒಪ್ಪಿಸಿದರು’ ಎಂದಿದ್ದಾರೆ.

‘ಸಿನಿಮಾದ ಶೂಟಿಂಗ್ ಪ್ರಿಯಾಂಕಾ ಪಾಲಿಗೆ ಬಹಳ ಕಷ್ಟದ್ದಾಗಿತ್ತು. ಆಕೆ ಹೊಸ ಭಾಷೆ ಕಲಿತು, ಸಂಭಾಷಣೆ ಹೇಳಬೇಕಿತ್ತು. ಆ ಸಿನಿಮಾಕ್ಕೆ ಪ್ರಭುದೇವ ಸಹೋದರ ರಾಜಸುಂದರಂ ನೃತ್ಯ ನಿರ್ದೇಶಕರಾಗಿದ್ದರು, ಕೆಲವು ಡ್ಯಾನ್ಸ್ ಸ್ಟೆಪ್ಪುಗಳ ಬಹಳ ಕಷ್ಟದ್ದಾಗಿತ್ತು. ಪ್ರಿಯಾಂಕಾಗೆ ಡ್ಯಾನ್ಸ್ ಮಾಡುವುದು ಬಹಳ ಕಷ್ಟವಾಗಿತ್ತು. ಆದರೆ ವಿಜಯ್ ಬಹಳ ತಾಳ್ಮೆ ಪ್ರದರ್ಶಿಸಿದರು. ಪ್ರಿಯಾಂಕಾ ಸಹ ಎಲ್ಲವನ್ನೂ ಬೇಗನೆ ಕಲಿತು, ಕೊನೆ, ಕೊನೆಗೆ ವಿಜಯ್​ರಿಂದ ಭೇಷ್ ಎನಿಸಿಕೊಂಡಲು. ಶೂಟಿಂಗ್ ಮುಗಿಯುವ ವೇಳೆಗೆ ವಿಜಯ್ ಸ್ನೇಹವನ್ನು ಪ್ರಿಯಾಂಕಾ ಸಂಪಾದಿಸಿದರು’ ಎಂದಿದ್ದಾರೆ ಮಧು.

ಇದನ್ನೂ ಓದಿ:ಪ್ರಿಯಾಂಕಾ ಚೋಪ್ರಾಗಾಗಿ ಬೇಲಿ ಹಾರಿ ಮನೆಗೆ ನುಗ್ಗಿದ್ದ ಹುಡುಗ; ಘಟನೆ ವಿವರಿಸಿದ ತಾಯಿ

2021 ರಲ್ಲಿ ಪ್ರಿಯಾಂಕಾ ಚೋಪ್ರಾ ಬರೆದ ತಮ್ಮ ಆಟೋಬಯೋಗ್ರಾಫಿ ‘ಅನ್​ಫಿನಿಶ್ಡ್’ನಲ್ಲಿಯೂ ಸಹ ಅವರು ದಳಪತಿ ವಿಜಯ್ ಅವರ ಬಗ್ಗೆ ಬರೆದಿದ್ದಾರೆ. ತಮ್ಮ ಮೊದಲ ಸಿನಿಮಾದಲ್ಲಿ ವಿಜಯ್ ತಮಗೆ ನೀಡಿದ ಆತ್ಮವಿಶ್ವಾಸದಿಂದಲೇ ನಾನು ನಟಿಯಾಗಿ ನಿಲ್ಲಲು ಸಾಧ್ಯವಾಯಿತು, ಇಲ್ಲವಾದರೆ ‘ತಮಿಳನ್’ ನನ್ನ ಮೊದಲ ಮತ್ತು ಕೊನೆಯ ಸಿನಿಮಾ ಆಗಿರುತ್ತಿತ್ತು’ ಎಂದು ಸಹ ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.

ಮೊದಲ ಸಿನಿಮಾದ ಬಳಿಕ ಯಾವುದೇ ದಕ್ಷಿಣ ಭಾರತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿಲ್ಲ. ಇದೀಗ 23 ವರ್ಷಗಳ ಬಳಿಕ ಮತ್ತೆ ದಕ್ಷಿಣ ಭಾರತ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಪ್ರಿಯಾಂಕಾ. ಮಹೇಶ್ ಬಾಬು ನಟಿಸಿ, ರಾಜಮೌಳಿ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್