AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಸಿನಿಮಾ ನಿರ್ಮಾಪಕನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Producer: ಆಮಿರ್ ಖಾನ್​ರ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ನಿರ್ದೇಶನ, ನಿರ್ಮಾಣ ಮಾಡಿದ್ದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

ಆಮಿರ್ ಖಾನ್ ಸಿನಿಮಾ ನಿರ್ಮಾಪಕನಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 17, 2024 | 9:08 PM

Share

ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಫೇಮಸ್ ಆಗಿರುವ ನಿರ್ದೇಶಕ ರಾಜ್​ಕುಮಾರ್ ಸಂತೋಷಿ (Rajkumar Santhoshi) ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ಆಗಿದೆ. ಚೆಕ್ ಬೌನ್ಸ್ ಕೇಸ್​ನಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ. ಆಮಿರ್ ಖಾನ್, ಸನ್ನಿ ಡಿಯೋಲ್ ಜೊತೆಗೆ ‘ಲಾಹೋರ್ 1947’ ಸಿನಿಮಾನ ಅವರು ನಿರ್ದೇಶನ ಮಾಡಬೇಕಿತ್ತು. ಈಗ ಅವರಿಗೆ ಸಂಕಷ್ಟ ಎದುರಾಗಿದೆ. ಅವರಿಗೆ ಬಂಧನ ಭೀತಿ ಎದುರಾಗಿದೆ.

ಜಾಮ್​ನಗರ್​ ನಿವಾಸಿ ಹಾಗೂ ಶ್ರೀಜಿ ಶಿಪ್ಪಿಂಗ್ ಮಾಲೀಕ ಅಶೋಕ್ ಲಾಲ್ ಅವರ ಬಳಿ ರಾಜ್​ಕುಮಾರ್ ಸಂತೋಷಿ ಅವರು 1 ಕೋಟಿ ಹಣ ಪಡೆದಿದ್ದರು. 2015ರಲ್ಲಿ ಪಡೆದ ಹಣ ಇದಾಗಿತ್ತು. ಈ ಹಣವನ್ನು ಹಿಂದಿರುಗಿಸಲು 10 ಲಕ್ಷ ರೂಪಾಯಿಯ 10 ಚೆಕ್​ನ ನಿರ್ದೇಶಕರು ಅಶೋಕ್​ಲಾಲ್​ಗೆ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಆ ಬಳಿಕ ರಾಜ್​ಕುಮಾರ್ ಸಂತೋಷಿ ಅವರನ್ನು ಸಂಪರ್ಕಿಸಲು ಅಶೋಕ್ ಲಾಲ್ ಸಾಕಷ್ಟು ಪ್ರಯತ್ನಪಟ್ಟರು. ಆದರೆ ಯಾವುದೇ ಪ್ರಯೋಜನ ಆಗಲಿಲ್ಲ. ಆ ಬಳಿಕ ಅಶೋಕ್ ಲಾಲ್ ಅವರು ಕೇಸ್ ದಾಖಲು ಮಾಡಿದರು.

ಈ ಮೊದಲು ಜಾಮ್​ನಗರ ನ್ಯಾಯಾಲಯ ನಿರ್ದೇಶಕ ಸಂತೋಷಿ ಅವರಿಗೆ ಪ್ರತಿ ಚೆಕ್​ಗೆ 15 ಸಾವಿರ ರೂಪಾಯಿನ ಪರಿಹಾರ ಹಣ ನೀಡುವಂತೆ ಆದೇಶ ನೀಡಿತ್ತು. ಅಂದರೆ 1.50 ಲಕ್ಷ ರೂಪಾಯಿ ಪರಿಹಾರ ಹಣ ನೀಡಬೇಕಿತ್ತು. ಇದಕ್ಕೆ ಕಳೆದ ಏಪ್ರಿಲ್ 15ರವರೆಗೆ ಗಡುವು ನೀಡಲಾಗಿತ್ತು. ಆದರೆ, ರಾಜ್​ಕುಮಾರ್ ಸಂತೋಷಿ ಇದಕ್ಕೆ ಬೆಲೆ ನೀಡಲಿಲ್ಲ. ಈ ಕಾರಣಕ್ಕೆ ಜಾಮ್​ನಗರ್ ನ್ಯಾಯಾಲಯ ಅವರಿಗೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಿದೆ. ಜೊತೆಗೆ ಅಶೋಕ್ ಲಾಲ್​ಗೆ 2 ಕೋಟಿ ರೂಪಾಯಿ ನೀಡಬೇಕೆಂದು ಸೂಚಿಸಿದೆ.

ಇದನ್ನೂ ಓದಿ:‘ಒಂದು ಸರಳ ಪ್ರೇಮಕಥೆ’ ಸಿನಿಮಾ ನೋಡಿದ ಶಿವರಾಜ್​ಕುಮಾರ್-ಗೀತಾ ದಂಪತಿ

ರಾಜ್​ಕುಮಾರ್ ಸಂತೋಷಿ ಅವರು ಸನ್ನಿ ಡಿಯೋಲ್ ಹಾಗೂ ಆಮಿರ್ ಖಾನ್ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ‘ಲಾಹೋರ್ 1947’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಆಮಿರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ‘ಅಂದಾಜ್​ ಅಪ್ನಾ ಅಪ್ನಾ’ ಸಿನಿಮಾದಲ್ಲಿ ಆಮಿರ್ ಖಾನ್ ಜೊತೆ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದ್ದರು. ‘ಘಾಯಲ್’, ‘ದಾಮಿನಿ’, ‘ಘಾಟಕ್’ ಸಿನಿಮಾಗಳಲ್ಲಿ ಸನ್ನಿ ಡಿಯೋಲ್ ಜೊತೆ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದ್ದರು.

1982ರಲ್ಲಿ ರಿಲೀಸ್ ಆದ ‘ಅರ್ಧ ಸತ್ಯ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ರಾಜ್​ಕುಮಾರ್ ಸಂತೋಷಿ ಕೆಲಸ ಮಾಡಿದರು. 1990ರ ‘ಘಾಯಲ್’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ನಂತರ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದರು. ಕೆಲವು ಸಿನಿಮಾಗಳನ್ನು ಅವರು ನಿರ್ಮಾಣ ಕೂಡ ಮಾಡಿದ್ದಾರೆ. ಈಗ ಅವರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Sat, 17 February 24

Follow Us
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ