AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ

ವಿಮಾನ ನಿಲ್ದಾಣದಲ್ಲಿ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ
ರೂಹಿ, ಕರಣ್​ ಜೋಹರ್​, ಯಶ್​
TV9 Web
| Edited By: |

Updated on: Jul 03, 2022 | 10:53 AM

Share

ಖ್ಯಾತ ನಿರ್ದೇಶಕ/ನಿರ್ಮಾಪಕ ಕರಣ್ ಜೋಹರ್​ (Karan Johar) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಾರೆ. ಅನೇಕ ಬಾರಿ ನೆಟ್ಟಿಗರಿಂದ ಅವರು ಟೀಕೆಗೂ ಒಳಗಾಗುವುದುಂಟು. ಈಗ ಒಂದು ವಿಚಾರಕ್ಕಾಗಿ ಅವರಿಗೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಇತ್ತೀಚೆಗೆ ಕರಣ್​ ಜೋಹರ್​ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಅವರು ಪಾಪರಾಜಿ (Paparazzi) ಕ್ಯಾಮೆರಾಗಳ ಕಣ್ಣಿಗೆ ಕಾಣಿಸಿಕೊಂಡರು. ಕರಣ್​ ಜೋಹರ್​ ಜೊತೆ ಮಕ್ಕಳಾದ ಯಶ್​ ಮತ್ತು ರೂಹಿ (Yash and Roohi) ಕೂಡ ಇದ್ದರು. ಈ ವೇಳೆ ಮಕ್ಕಳಿಗೆ ಕರಣ್​ ಜೋಹರ್​ ಅವರು ನಮಸ್ತೆ ಮಾಡುವುದು ಕಲಿಸಿದ್ದಾರೆ. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ತುಂಬ ಕ್ಯೂಟ್​ ಆಗಿದೆ ಎಂದು ಕೂಡ ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳನ್ನು ಕಂಡಾಗ ಅವರ ಫೋಟೋ ಮತ್ತು ವಿಡಿಯೋಗಾಗಿ ಪಾಪರಾಜಿಗಳು ಮುಗಿಬೀಳಿತ್ತಾರೆ. ಸ್ಟಾರ್​ ಕಿಡ್​ಗಳನ್ನು ಕಂಡಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಆಗ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಹೇಗಿದ್ದೀರಿ ಸರ್​’ ಎಂದು ಪಾಪರಾಜಿಗಳು ಕೇಳಿದ ಪ್ರಶ್ನೆಗೆ ಕರಣ್​ ಜೋಹರ್​ ಉತ್ತರಿಸಿದ್ದಾರೆ. ‘ಪಾಪರಾಜಿಗಳಿಗೆ ನಮಸ್ತೆ ಮಾಡಿ’ ಎಂದು ಮಕ್ಕಳಿಗೆ ಅವರು ಹೇಳಿಕೊಟ್ಟಿದ್ದಾರೆ. ಎರಡೂ ಕೈಗಳನ್ನು ಜೋಡಿಸಿ ಯಶ್​ ಮತ್ತು ರೂಹಿ ನಮಸ್ತೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕರಣ್​ ಜೋಹರ್​ ಅವರು ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಆಗಾಗ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಾರೆ.

ಸದ್ಯ ಹಲವು ಕೆಲಸಗಳಲ್ಲಿ ಕರಣ್​ ಜೋಹರ್​ ಬ್ಯುಸಿ ಆಗಿದ್ದಾರೆ. ನಿರೂಪಕನಾಗಿಯೂ ಅವರು ತುಂಬ ಫೇಮಸ್​. ‘ಕಾಫಿ ವಿತ್​ ಕರಣ್​ ಸೀಸನ್​ 7’ ಶೋ ಅನ್ನು ಅವರು ನಡೆಸಿಕೊಡುತ್ತಿದ್ದಾರೆ. ಇದರ ಜೊತೆಗೆ ಆಲಿಯಾ ಭಟ್​ ಮತ್ತು ರಣಬೀರ್​ ಸಿಂಗ್​ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ಕರಣ್ ಜೋಹರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷ ಅವರು 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅನೇಕ ಸ್ಟಾರ್​ ಕಿಡ್​ಗಳನ್ನು ಲಾಂಚ್​ ಮಾಡುವ ಉಸ್ತುವಾರಿಯನ್ನೂ ಅವರು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​ ಸಂಸಾರದ ಗುಟ್ಟು ರಟ್ಟು ಮಾಡ್ತಾರಾ ಕರಣ್​ ಜೋಹರ್​?

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ