AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ

ವಿಮಾನ ನಿಲ್ದಾಣದಲ್ಲಿ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

Karan Johar: ಕರಣ್​ ಜೋಹರ್​ ಮಕ್ಕಳ ವಿಡಿಯೋ ವೈರಲ್​; ವಿಮಾನ ನಿಲ್ದಾಣದಲ್ಲಿ ನಮಸ್ತೆ ಮಾಡೋದು ಕಲಿಸಿದ ನಿರ್ಮಾಪಕ
ರೂಹಿ, ಕರಣ್​ ಜೋಹರ್​, ಯಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 03, 2022 | 10:53 AM

ಖ್ಯಾತ ನಿರ್ದೇಶಕ/ನಿರ್ಮಾಪಕ ಕರಣ್ ಜೋಹರ್​ (Karan Johar) ಅವರು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಾರೆ. ಅನೇಕ ಬಾರಿ ನೆಟ್ಟಿಗರಿಂದ ಅವರು ಟೀಕೆಗೂ ಒಳಗಾಗುವುದುಂಟು. ಈಗ ಒಂದು ವಿಚಾರಕ್ಕಾಗಿ ಅವರಿಗೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಇತ್ತೀಚೆಗೆ ಕರಣ್​ ಜೋಹರ್​ ಅವರು ವಿದೇಶಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಅವರು ಪಾಪರಾಜಿ (Paparazzi) ಕ್ಯಾಮೆರಾಗಳ ಕಣ್ಣಿಗೆ ಕಾಣಿಸಿಕೊಂಡರು. ಕರಣ್​ ಜೋಹರ್​ ಜೊತೆ ಮಕ್ಕಳಾದ ಯಶ್​ ಮತ್ತು ರೂಹಿ (Yash and Roohi) ಕೂಡ ಇದ್ದರು. ಈ ವೇಳೆ ಮಕ್ಕಳಿಗೆ ಕರಣ್​ ಜೋಹರ್​ ಅವರು ನಮಸ್ತೆ ಮಾಡುವುದು ಕಲಿಸಿದ್ದಾರೆ. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ತುಂಬ ಕ್ಯೂಟ್​ ಆಗಿದೆ ಎಂದು ಕೂಡ ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಸೆಲೆಬ್ರಿಟಿಗಳನ್ನು ಕಂಡಾಗ ಅವರ ಫೋಟೋ ಮತ್ತು ವಿಡಿಯೋಗಾಗಿ ಪಾಪರಾಜಿಗಳು ಮುಗಿಬೀಳಿತ್ತಾರೆ. ಸ್ಟಾರ್​ ಕಿಡ್​ಗಳನ್ನು ಕಂಡಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಆಗ ಸೆಲೆಬ್ರಿಟಿಗಳು ಮತ್ತು ಅವರ ಮಕ್ಕಳು ಸಿಡಿಮಿಡಿ ಮಾಡಿದ ಪ್ರಸಂಗಗಳು ಸಾಕಷ್ಟಿವೆ. ಆದರೆ ಕರಣ್​ ಜೋಹರ್​ ಅವರು ಆ ರೀತಿ ಮಾಡಿಲ್ಲ. ತುಂಬ ಸೌಮ್ಯವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ನನ್ನನ್ನೇಕೆ ದೂಷಿಸುತ್ತೀರಿ?’; ಏಕಾಏಕಿ ಸಿಟ್ಟಾದ ನಿರ್ಮಾಪಕ ಕರಣ್​ ಜೋಹರ್
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

‘ಹೇಗಿದ್ದೀರಿ ಸರ್​’ ಎಂದು ಪಾಪರಾಜಿಗಳು ಕೇಳಿದ ಪ್ರಶ್ನೆಗೆ ಕರಣ್​ ಜೋಹರ್​ ಉತ್ತರಿಸಿದ್ದಾರೆ. ‘ಪಾಪರಾಜಿಗಳಿಗೆ ನಮಸ್ತೆ ಮಾಡಿ’ ಎಂದು ಮಕ್ಕಳಿಗೆ ಅವರು ಹೇಳಿಕೊಟ್ಟಿದ್ದಾರೆ. ಎರಡೂ ಕೈಗಳನ್ನು ಜೋಡಿಸಿ ಯಶ್​ ಮತ್ತು ರೂಹಿ ನಮಸ್ತೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಕರಣ್​ ಜೋಹರ್​ ಅವರು ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಆಗಾಗ ಶೇರ್​ ಮಾಡಿಕೊಳ್ಳುತ್ತಾ ಇರುತ್ತಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಾರೆ.

ಸದ್ಯ ಹಲವು ಕೆಲಸಗಳಲ್ಲಿ ಕರಣ್​ ಜೋಹರ್​ ಬ್ಯುಸಿ ಆಗಿದ್ದಾರೆ. ನಿರೂಪಕನಾಗಿಯೂ ಅವರು ತುಂಬ ಫೇಮಸ್​. ‘ಕಾಫಿ ವಿತ್​ ಕರಣ್​ ಸೀಸನ್​ 7’ ಶೋ ಅನ್ನು ಅವರು ನಡೆಸಿಕೊಡುತ್ತಿದ್ದಾರೆ. ಇದರ ಜೊತೆಗೆ ಆಲಿಯಾ ಭಟ್​ ಮತ್ತು ರಣಬೀರ್​ ಸಿಂಗ್​ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾಗೆ ಕರಣ್ ಜೋಹರ್​ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷ ಅವರು 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಅನೇಕ ಸ್ಟಾರ್​ ಕಿಡ್​ಗಳನ್ನು ಲಾಂಚ್​ ಮಾಡುವ ಉಸ್ತುವಾರಿಯನ್ನೂ ಅವರು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​ ಸಂಸಾರದ ಗುಟ್ಟು ರಟ್ಟು ಮಾಡ್ತಾರಾ ಕರಣ್​ ಜೋಹರ್​?

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು