AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

The Kerala Story Teaser | Vipul Shah: ‘ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ’ ಎಂದು ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕ ವಿಪುಲ್​ ಶಾ ಹೇಳಿದ್ದಾರೆ. ಈ ಚಿತ್ರದ ಟೀಸರ್​ ಬಗ್ಗೆ ಟೀಕೆ ವ್ಯಕ್ತವಾಗಿದೆ.

The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ
ವಿಪುಲ್ ಶಾ, ಅದಾ ಶರ್ಮಾ
TV9 Web
| Edited By: |

Updated on: Dec 26, 2022 | 7:42 PM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 2022ರಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿತು. ಅದೇ ರೀತಿ ಈಗ ಮತ್ತೊಂದು ಸಿನಿಮಾ ಕೂಡ ಚರ್ಚೆಯ ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ನೀಡಿದೆ. ಈ ಸಿನಿಮಾ ಹೆಸರು ‘ದಿ ಕೇರಳ ಸ್ಟೋರಿ’. ಒಂದಷ್ಟು ವಾರಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಆಗಿತ್ತು. ಆಗ ಅನೇಕ ಪ್ರಶ್ನೆಗಳು ಹುಟ್ಟಿಕೊಂಡವು. ಕೇರಳದಲ್ಲಿ ನಡೆದ ಸಾವಿರಾರು ಹುಡುಗಿಯರ ಮತಾಂತರದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗುತ್ತಿದೆ ಎಂಬುದು ಟೀಸರ್​ನಲ್ಲಿ ಸ್ಪಷ್ಟವಾಗಿದೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕುರಿತು ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ (Vipul Shah) ಮಾತನಾಡಿದ್ದಾರೆ. ‘ಸಾಕ್ಷಿ ಇಲ್ಲದೇ ನಾವು ಏನನ್ನೂ ತೋರಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ. ಈ ಸಿನಿಮಾದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡ ಹುಡುಗಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ.

‘ಮಿಡ್​-ಡೇ’ಗೆ ನೀಡಿದ ಸಂದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಕುರಿತ ವಿವಾದದ ಬಗ್ಗೆ ವಿಪುಲ್​ ಶಾ ಮಾತನಾಡಿದ್ದಾರೆ. ‘ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ. ಸಾಕ್ಷಿ ಇಲ್ಲದೇ ನಾವು ಏನನ್ನೂ ಹೇಳುವುದಿಲ್ಲ. ಸತ್ಯಾಂಶ ಮತ್ತು ಅಂಕಿಅಂಶಗಳನ್ನು ನಾವು ತೆರೆದಿಟ್ಟಾಗ ಜನರಿಗೆ ಉತ್ತರ ಸಿಗಲಿದೆ. ಅದನ್ನು ಒಪ್ಪಿಕೊಳ್ಳುವುದು ಬಿಡುವುದು ಜನರಿಗೆ ಆಯ್ಕೆಗೆ ಬಿಟ್ಟ ವಿಚಾರ. ಈ ಸಿನಿಮಾ ಶುರು ಮಾಡುವುದಕ್ಕೂ ಮುನ್ನ ನಿರ್ದೇಶಕ ಸುದಿಪ್ತೋ ಸೇನ್​ ಅವರು 4 ವರ್ಷಗಳ ಕಾಲ ಅಧ್ಯಯನ ನಡೆಸಿದ್ದಾರೆ’ ಎಂದು ವಿಪುಲ್​ ಶಾ ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ದಿ ಕೇರಳ ಸ್ಟೋರಿ’ ಟೀಸರ್​ನಲ್ಲಿ ಏನಿದೆ?

‘ದಿ ಕೇರಳ ಸ್ಟೋರಿ’ ಟೀಸರ್​ ಸಖತ್​ ವೈರಲ್​ ಆಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ ಈ ಟೀಸರ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ‘ನನ್ನ ಹೆಸರು ಶಾಲಿನಿ ಉನ್ನಿಕೃಷ್ಣನ್​ ಆಗಿತ್ತು. ನರ್ಸ್​ ಆಗಿ ಜನರ ಸೇವೆ ಮಾಡಬೇಕು ಅಂತ ನಾನು ಬಯಸಿದ್ದೆ. ಈಗ ನಾನು ಫಾತಿಮಾ ಬಾ ಎಂಬ ಐಸಿಸ್​ ಭಯೋತ್ಪಾದಕಿ ಆಗಿದ್ದೇನೆ. ಅಫ್ಘಾನಿಸ್ತಾನದ ಜೈಲಿನಲ್ಲಿ ಇದ್ದೇನೆ’ ಎಂಬ ಡೈಲಾಗ್​ನೊಂದಿಗೆ ಈ ಟೀಸರ್​ ಆರಂಭ ಆಗುತ್ತದೆ.

ಇದನ್ನೂ ಓದಿ: ತುಮಕೂರಿನಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆ: ಹಿಂದೂ ದೇವರುಗಳ ಬಗ್ಗೆ ಅವಮಾನ ಆರೋಪ

‘ನಾನು ಒಬ್ಬಳೇ ಅಲ್ಲ. ನನ್ನಂತಹ 32 ಸಾವಿರ ಹುಡುಗಿಯರು ಮತಾಂತರಗೊಂಡು ಸಿರಿಯಾ ಮತ್ತು ಯೆಮನ್​ ಮರುಭೂಮಿಯಲ್ಲಿ ಸತ್ತಿದ್ದಾರೆ. ಕೇರಳದಲ್ಲಿ ಓರ್ವ ಸಿಂಪಲ್​ ಹುಡುಗಿಯನ್ನು ಅಪಾಯಕಾರಿ ಟೆರೆರಿಸ್ಟ್​ ಆಗಿ ಮಾಡುವ ಭಯಂಕರ ಆಟ ನಡೆದಿದೆ. ಅದು ಕೂಡ ಬಹಿರಂಗವಾಗಿ. ಇದನ್ನು ಯಾರೂ ತಡೆಯೋದಿಲ್ಲವೇ? ಇದು ನನ್ನ ಕಥೆ. ಇದು ಆ 32 ಸಾವಿರ ಹುಡುಗಿಯರ ಕಥೆ. ಇದು ಕೇರಳದ ಕಥೆ’ ಎಂಬ ಡೈಲಾಗ್​ ಮೂಲಕ ಟೀಸರ್​ ಕೊನೆಯಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್