AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

The Kerala Story Teaser | Vipul Shah: ‘ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ’ ಎಂದು ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ಮಾಪಕ ವಿಪುಲ್​ ಶಾ ಹೇಳಿದ್ದಾರೆ. ಈ ಚಿತ್ರದ ಟೀಸರ್​ ಬಗ್ಗೆ ಟೀಕೆ ವ್ಯಕ್ತವಾಗಿದೆ.

The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ
ವಿಪುಲ್ ಶಾ, ಅದಾ ಶರ್ಮಾ
TV9 Web
| Edited By: |

Updated on: Dec 26, 2022 | 7:42 PM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 2022ರಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿತು. ಅದೇ ರೀತಿ ಈಗ ಮತ್ತೊಂದು ಸಿನಿಮಾ ಕೂಡ ಚರ್ಚೆಯ ಬಿರುಗಾಳಿ ಎಬ್ಬಿಸುವ ಮುನ್ಸೂಚನೆ ನೀಡಿದೆ. ಈ ಸಿನಿಮಾ ಹೆಸರು ‘ದಿ ಕೇರಳ ಸ್ಟೋರಿ’. ಒಂದಷ್ಟು ವಾರಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಆಗಿತ್ತು. ಆಗ ಅನೇಕ ಪ್ರಶ್ನೆಗಳು ಹುಟ್ಟಿಕೊಂಡವು. ಕೇರಳದಲ್ಲಿ ನಡೆದ ಸಾವಿರಾರು ಹುಡುಗಿಯರ ಮತಾಂತರದ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗುತ್ತಿದೆ ಎಂಬುದು ಟೀಸರ್​ನಲ್ಲಿ ಸ್ಪಷ್ಟವಾಗಿದೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕುರಿತು ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ (Vipul Shah) ಮಾತನಾಡಿದ್ದಾರೆ. ‘ಸಾಕ್ಷಿ ಇಲ್ಲದೇ ನಾವು ಏನನ್ನೂ ತೋರಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ. ಈ ಸಿನಿಮಾದಲ್ಲಿ ನಟಿ ಅದಾ ಶರ್ಮಾ (Adah Sharma) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡ ಹುಡುಗಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ.

‘ಮಿಡ್​-ಡೇ’ಗೆ ನೀಡಿದ ಸಂದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ಕುರಿತ ವಿವಾದದ ಬಗ್ಗೆ ವಿಪುಲ್​ ಶಾ ಮಾತನಾಡಿದ್ದಾರೆ. ‘ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ. ಸಾಕ್ಷಿ ಇಲ್ಲದೇ ನಾವು ಏನನ್ನೂ ಹೇಳುವುದಿಲ್ಲ. ಸತ್ಯಾಂಶ ಮತ್ತು ಅಂಕಿಅಂಶಗಳನ್ನು ನಾವು ತೆರೆದಿಟ್ಟಾಗ ಜನರಿಗೆ ಉತ್ತರ ಸಿಗಲಿದೆ. ಅದನ್ನು ಒಪ್ಪಿಕೊಳ್ಳುವುದು ಬಿಡುವುದು ಜನರಿಗೆ ಆಯ್ಕೆಗೆ ಬಿಟ್ಟ ವಿಚಾರ. ಈ ಸಿನಿಮಾ ಶುರು ಮಾಡುವುದಕ್ಕೂ ಮುನ್ನ ನಿರ್ದೇಶಕ ಸುದಿಪ್ತೋ ಸೇನ್​ ಅವರು 4 ವರ್ಷಗಳ ಕಾಲ ಅಧ್ಯಯನ ನಡೆಸಿದ್ದಾರೆ’ ಎಂದು ವಿಪುಲ್​ ಶಾ ಹೇಳಿದ್ದಾರೆ.

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ದಿ ಕೇರಳ ಸ್ಟೋರಿ’ ಟೀಸರ್​ನಲ್ಲಿ ಏನಿದೆ?

‘ದಿ ಕೇರಳ ಸ್ಟೋರಿ’ ಟೀಸರ್​ ಸಖತ್​ ವೈರಲ್​ ಆಗಿದೆ. ಕೇರಳವನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಕಾರಣದಿಂದ ಈ ಟೀಸರ್​ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ‘ನನ್ನ ಹೆಸರು ಶಾಲಿನಿ ಉನ್ನಿಕೃಷ್ಣನ್​ ಆಗಿತ್ತು. ನರ್ಸ್​ ಆಗಿ ಜನರ ಸೇವೆ ಮಾಡಬೇಕು ಅಂತ ನಾನು ಬಯಸಿದ್ದೆ. ಈಗ ನಾನು ಫಾತಿಮಾ ಬಾ ಎಂಬ ಐಸಿಸ್​ ಭಯೋತ್ಪಾದಕಿ ಆಗಿದ್ದೇನೆ. ಅಫ್ಘಾನಿಸ್ತಾನದ ಜೈಲಿನಲ್ಲಿ ಇದ್ದೇನೆ’ ಎಂಬ ಡೈಲಾಗ್​ನೊಂದಿಗೆ ಈ ಟೀಸರ್​ ಆರಂಭ ಆಗುತ್ತದೆ.

ಇದನ್ನೂ ಓದಿ: ತುಮಕೂರಿನಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆ: ಹಿಂದೂ ದೇವರುಗಳ ಬಗ್ಗೆ ಅವಮಾನ ಆರೋಪ

‘ನಾನು ಒಬ್ಬಳೇ ಅಲ್ಲ. ನನ್ನಂತಹ 32 ಸಾವಿರ ಹುಡುಗಿಯರು ಮತಾಂತರಗೊಂಡು ಸಿರಿಯಾ ಮತ್ತು ಯೆಮನ್​ ಮರುಭೂಮಿಯಲ್ಲಿ ಸತ್ತಿದ್ದಾರೆ. ಕೇರಳದಲ್ಲಿ ಓರ್ವ ಸಿಂಪಲ್​ ಹುಡುಗಿಯನ್ನು ಅಪಾಯಕಾರಿ ಟೆರೆರಿಸ್ಟ್​ ಆಗಿ ಮಾಡುವ ಭಯಂಕರ ಆಟ ನಡೆದಿದೆ. ಅದು ಕೂಡ ಬಹಿರಂಗವಾಗಿ. ಇದನ್ನು ಯಾರೂ ತಡೆಯೋದಿಲ್ಲವೇ? ಇದು ನನ್ನ ಕಥೆ. ಇದು ಆ 32 ಸಾವಿರ ಹುಡುಗಿಯರ ಕಥೆ. ಇದು ಕೇರಳದ ಕಥೆ’ ಎಂಬ ಡೈಲಾಗ್​ ಮೂಲಕ ಟೀಸರ್​ ಕೊನೆಯಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ