AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

Allu Arjun: ಹಿಂದಿ ಸಿನಿಮಾ ಆಫರ್​ ಎಂದಮಾತ್ರಕ್ಕೆ ತಾವು ಸೆಕೆಂಡ್​ ಹೀರೋ ಆಗುವುದಿಲ್ಲ ಎಂಬುದನ್ನು ಅಲ್ಲು ಅರ್ಜುನ್​ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಅವರು ಖಡಕ್​ ಆಗಿ ತಿಳಿಸಿದ್ದಾರೆ.

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್
TV9 Web
| Updated By: ಮದನ್​ ಕುಮಾರ್​|

Updated on: Jan 03, 2022 | 7:45 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ದಕ್ಷಿಣ ಭಾರತದಲ್ಲಿ ತಮ್ಮದೇ ಚಾರ್ಮ್​ ಸೃಷ್ಟಿಸಿದ್ದಾರೆ. ಅವರ ಸಿನಿಮಾಗಳು (Allu Arjun Movies) ಹಿಂದಿಗೂ ಡಬ್​ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೆ ಈವರೆಗೂ ಅವರು ನೇರವಾಗಿ ಯಾವುದೇ ಬಾಲಿವುಡ್​ ಸಿನಿಮಾದಲ್ಲಿ ನಟಿಸಿಲ್ಲ. ಇತ್ತೀಚೆಗೆ ತೆರೆಕಂಡ ಅವರ ‘ಪುಷ್ಪ’ (Pushpa Movie) ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಮಾಯಿ ಮಾಡಿದೆ. ಈ ಸಿನಿಮಾದ ಹಿಂದಿ ಡಬ್ಬಿಂಗ್​ ವರ್ಷನ್​ ಕೂಡ ಈವರೆಗೆ 56 ಕೋಟಿ ರೂಪಾಯಿ ಗಳಿಸಿದೆ. ಹಾಗಾಗಿ ಅಲ್ಲು ಅರ್ಜುನ್​ ಅವರು ಡಬ್ಬಿಂಗ್​ ಬದಲು ನೇರವಾಗಿ ಬಾಲಿವುಡ್​ (Bollywood ) ಸಿನಿಮಾ ಮಾಡೋದು ಯಾವಾಗ ಎಂಬ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸಿರುವ ಅವರು, ತಮ್ಮ ಆದ್ಯತೆ ಏನು ಎಂಬುದನ್ನು ವಿವರಿಸಿದ್ದಾರೆ.

ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಹೀರೋ ಆಗಿ ಮಿಂಚುತ್ತಿದ್ದಾರೆ. ಅವರ ಸಿನಿಮಾದಲ್ಲಿ ಪರಭಾಷೆಯ ಸ್ಟಾರ್​ ಕಲಾವಿದರು ವಿಲನ್​ ಅಥವಾ ಇನ್ನಿತರ ಪೋಷಕ ಪಾತ್ರಗಳನ್ನು ಮಾಡಿದ್ದುಂಟು. ‘ಪುಷ್ಪ’ ಸಿನಿಮಾದಲ್ಲಿ ಡಾಲಿ ಧನಂಜಯ, ಫಹಾದ್​ ಫಾಸಿಲ್​ ಅವರಂತಹ ಸ್ಟಾರ್​ ನಟರು ವಿಲನ್​ ಆಗಿ ಅಭಿನಯಿಸಿದ್ದಾರೆ. ಆದರೆ ಇಂಥ ಪಾತ್ರಗಳನ್ನು ಅಲ್ಲು ಅರ್ಜುನ್​ ಯಾವುದೇ ಕಾರಣಕ್ಕೂ ಮಾಡುವುದಿಲ್ಲವಂತೆ!

ಸಂದರ್ಶನವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಬಾಲಿವುಡ್​ನಿಂದ ಒಂದು ಆಫರ್​ ಬಂದಿದೆ. ಆದರೆ ಅದು ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಎಗ್ಸೈಟಿಂಗ್​ ಎನಿಸುತ್ತಿಲ್ಲ. ಸದ್ಯದಲ್ಲೇ ನಾನು ಬಾಲಿವುಡ್ ಸಿನಿಮಾ ಮಾಡಬಹುದು. ಬೇರೆ ಇಂಡಸ್ಟ್ರಿಗೆ ಹೋಗುವಂತಹ ರಿಸ್ಕ್ ತೆಗೆದುಕೊಳ್ಳಲೇಬೇಕು’ ಎಂದು ಹೇಳಿರುವ ಅಲ್ಲು ಅರ್ಜುನ್​ ಅವರು, ತಾವು ಸೆಕೆಂಡ್​ ಹೀರೋ ಆಗಿ ನಟಿಸುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ದಾರೆ.

ಹಿಂದಿ ಸಿನಿಮಾ ಆಫರ್​ ಎಂದಮಾತ್ರಕ್ಕೆ ತಾವು ಸೆಕೆಂಡ್​ ಹೀರೋ ಆಗುವುದಿಲ್ಲ ಎಂಬುದನ್ನು ಅಲ್ಲು ಅರ್ಜುನ್​ ಸ್ಪಷ್ಟಪಡಿಸಿದ್ದಾರೆ. ‘ನಮ್ಮ ಸಿನಿಮಾಗಳಲ್ಲಿ ನಾವು ಹೀರೋ ಆಗಿದ್ದಾಗ, ನಮ್ಮ ಬಳಿ ಬರುವ ಎಲ್ಲರೂ ಕೂಡ ಹೀರೋ ಪಾತ್ರವನ್ನೇ ಆಫರ್​ ಮಾಡುತ್ತಾರೆ. ಹೀರೋ ಪಾತ್ರ ಬಿಟ್ಟು ಬೇರೆ ಯಾವುದರಲ್ಲೂ ನನಗೆ ಆಸಕ್ತಿ ಇಲ್ಲ. ದೊಡ್ಡ ಸ್ಟಾರ್​ ನಟನ ಬಳಿ ಬಂದು ಸೆಕೆಂಡ್​ ಹೀರೋ ಪಾತ್ರ ಮಾಡಿ ಅಂತ ಯಾರೂ ಕೇಳುವುದಿಲ್ಲ. ಹಾಗೆ ಕೇಳಿದರೆ ಸಿನಿಮಾಗೆ ತೊಂದರೆ ಆಗುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಈ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ವಿಶ್ವಾದ್ಯಂತ ‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಸುಕುಮಾರ್​ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಮೂಲಕ ರಶ್ಮಿಕಾ ವೃತ್ತಿ ಜೀವನಕ್ಕೂ ಬಿಗ್​ ಬ್ರೇಕ್​ ಸಿಕ್ಕಿದೆ.

ಇದನ್ನೂ ಓದಿ:

ರಾಯಚೂರು: ಅಲ್ಲು ಅರ್ಜುನ್​ ಕಟೌಟ್​ಗೆ ನಿಂಬೆ ಹಣ್ಣಿನ ಹಾರದ ಜತೆ ಟಗರಿನ ತಲೆ ಪೋಣಿಸಿದ ಅಭಿಮಾನಿಗಳು

ಹೊಸ ವರ್ಷದಂದು ಗಲ್ಲಾ ಪೆಟ್ಟಿಗೆಯಲ್ಲಿ ಭರಪೂರ ಬೆಳೆ ತೆಗೆದ ‘ಪುಷ್ಪ’, ‘83’; ಚಿತ್ರಗಳ ಒಟ್ಟಾರೆ ಕಲೆಕ್ಷನ್ ಎಷ್ಟು?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ