AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

Allu Arjun: ಹಿಂದಿ ಸಿನಿಮಾ ಆಫರ್​ ಎಂದಮಾತ್ರಕ್ಕೆ ತಾವು ಸೆಕೆಂಡ್​ ಹೀರೋ ಆಗುವುದಿಲ್ಲ ಎಂಬುದನ್ನು ಅಲ್ಲು ಅರ್ಜುನ್​ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಅವರು ಖಡಕ್​ ಆಗಿ ತಿಳಿಸಿದ್ದಾರೆ.

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​
ಅಲ್ಲು ಅರ್ಜುನ್
TV9 Web
| Updated By: ಮದನ್​ ಕುಮಾರ್​|

Updated on: Jan 03, 2022 | 7:45 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ದಕ್ಷಿಣ ಭಾರತದಲ್ಲಿ ತಮ್ಮದೇ ಚಾರ್ಮ್​ ಸೃಷ್ಟಿಸಿದ್ದಾರೆ. ಅವರ ಸಿನಿಮಾಗಳು (Allu Arjun Movies) ಹಿಂದಿಗೂ ಡಬ್​ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೆ ಈವರೆಗೂ ಅವರು ನೇರವಾಗಿ ಯಾವುದೇ ಬಾಲಿವುಡ್​ ಸಿನಿಮಾದಲ್ಲಿ ನಟಿಸಿಲ್ಲ. ಇತ್ತೀಚೆಗೆ ತೆರೆಕಂಡ ಅವರ ‘ಪುಷ್ಪ’ (Pushpa Movie) ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಮಾಯಿ ಮಾಡಿದೆ. ಈ ಸಿನಿಮಾದ ಹಿಂದಿ ಡಬ್ಬಿಂಗ್​ ವರ್ಷನ್​ ಕೂಡ ಈವರೆಗೆ 56 ಕೋಟಿ ರೂಪಾಯಿ ಗಳಿಸಿದೆ. ಹಾಗಾಗಿ ಅಲ್ಲು ಅರ್ಜುನ್​ ಅವರು ಡಬ್ಬಿಂಗ್​ ಬದಲು ನೇರವಾಗಿ ಬಾಲಿವುಡ್​ (Bollywood ) ಸಿನಿಮಾ ಮಾಡೋದು ಯಾವಾಗ ಎಂಬ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸಿರುವ ಅವರು, ತಮ್ಮ ಆದ್ಯತೆ ಏನು ಎಂಬುದನ್ನು ವಿವರಿಸಿದ್ದಾರೆ.

ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಹೀರೋ ಆಗಿ ಮಿಂಚುತ್ತಿದ್ದಾರೆ. ಅವರ ಸಿನಿಮಾದಲ್ಲಿ ಪರಭಾಷೆಯ ಸ್ಟಾರ್​ ಕಲಾವಿದರು ವಿಲನ್​ ಅಥವಾ ಇನ್ನಿತರ ಪೋಷಕ ಪಾತ್ರಗಳನ್ನು ಮಾಡಿದ್ದುಂಟು. ‘ಪುಷ್ಪ’ ಸಿನಿಮಾದಲ್ಲಿ ಡಾಲಿ ಧನಂಜಯ, ಫಹಾದ್​ ಫಾಸಿಲ್​ ಅವರಂತಹ ಸ್ಟಾರ್​ ನಟರು ವಿಲನ್​ ಆಗಿ ಅಭಿನಯಿಸಿದ್ದಾರೆ. ಆದರೆ ಇಂಥ ಪಾತ್ರಗಳನ್ನು ಅಲ್ಲು ಅರ್ಜುನ್​ ಯಾವುದೇ ಕಾರಣಕ್ಕೂ ಮಾಡುವುದಿಲ್ಲವಂತೆ!

ಸಂದರ್ಶನವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಬಾಲಿವುಡ್​ನಿಂದ ಒಂದು ಆಫರ್​ ಬಂದಿದೆ. ಆದರೆ ಅದು ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಎಗ್ಸೈಟಿಂಗ್​ ಎನಿಸುತ್ತಿಲ್ಲ. ಸದ್ಯದಲ್ಲೇ ನಾನು ಬಾಲಿವುಡ್ ಸಿನಿಮಾ ಮಾಡಬಹುದು. ಬೇರೆ ಇಂಡಸ್ಟ್ರಿಗೆ ಹೋಗುವಂತಹ ರಿಸ್ಕ್ ತೆಗೆದುಕೊಳ್ಳಲೇಬೇಕು’ ಎಂದು ಹೇಳಿರುವ ಅಲ್ಲು ಅರ್ಜುನ್​ ಅವರು, ತಾವು ಸೆಕೆಂಡ್​ ಹೀರೋ ಆಗಿ ನಟಿಸುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ದಾರೆ.

ಹಿಂದಿ ಸಿನಿಮಾ ಆಫರ್​ ಎಂದಮಾತ್ರಕ್ಕೆ ತಾವು ಸೆಕೆಂಡ್​ ಹೀರೋ ಆಗುವುದಿಲ್ಲ ಎಂಬುದನ್ನು ಅಲ್ಲು ಅರ್ಜುನ್​ ಸ್ಪಷ್ಟಪಡಿಸಿದ್ದಾರೆ. ‘ನಮ್ಮ ಸಿನಿಮಾಗಳಲ್ಲಿ ನಾವು ಹೀರೋ ಆಗಿದ್ದಾಗ, ನಮ್ಮ ಬಳಿ ಬರುವ ಎಲ್ಲರೂ ಕೂಡ ಹೀರೋ ಪಾತ್ರವನ್ನೇ ಆಫರ್​ ಮಾಡುತ್ತಾರೆ. ಹೀರೋ ಪಾತ್ರ ಬಿಟ್ಟು ಬೇರೆ ಯಾವುದರಲ್ಲೂ ನನಗೆ ಆಸಕ್ತಿ ಇಲ್ಲ. ದೊಡ್ಡ ಸ್ಟಾರ್​ ನಟನ ಬಳಿ ಬಂದು ಸೆಕೆಂಡ್​ ಹೀರೋ ಪಾತ್ರ ಮಾಡಿ ಅಂತ ಯಾರೂ ಕೇಳುವುದಿಲ್ಲ. ಹಾಗೆ ಕೇಳಿದರೆ ಸಿನಿಮಾಗೆ ತೊಂದರೆ ಆಗುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಈ ಮೂಲಕ ತಮ್ಮ ನಿಲುವು ಏನು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ವಿಶ್ವಾದ್ಯಂತ ‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಸುಕುಮಾರ್​ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಮೂಲಕ ರಶ್ಮಿಕಾ ವೃತ್ತಿ ಜೀವನಕ್ಕೂ ಬಿಗ್​ ಬ್ರೇಕ್​ ಸಿಕ್ಕಿದೆ.

ಇದನ್ನೂ ಓದಿ:

ರಾಯಚೂರು: ಅಲ್ಲು ಅರ್ಜುನ್​ ಕಟೌಟ್​ಗೆ ನಿಂಬೆ ಹಣ್ಣಿನ ಹಾರದ ಜತೆ ಟಗರಿನ ತಲೆ ಪೋಣಿಸಿದ ಅಭಿಮಾನಿಗಳು

ಹೊಸ ವರ್ಷದಂದು ಗಲ್ಲಾ ಪೆಟ್ಟಿಗೆಯಲ್ಲಿ ಭರಪೂರ ಬೆಳೆ ತೆಗೆದ ‘ಪುಷ್ಪ’, ‘83’; ಚಿತ್ರಗಳ ಒಟ್ಟಾರೆ ಕಲೆಕ್ಷನ್ ಎಷ್ಟು?

ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ