AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu: ಬಾಲಿವುಡ್​ನಲ್ಲಿ ಮೊದಲ ಮುಖ್ಯ ಹಂತ ಮುಗಿಸಿದ ರಶ್ಮಿಕಾ; ಸಿದ್ಧಾರ್ಥ್​ ಜೊತೆಗಿನ ಫೋಟೋ ವೈರಲ್​​

Rashmika Mandann: ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ ತೆರೆಕಾಣಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

Mission Majnu: ಬಾಲಿವುಡ್​ನಲ್ಲಿ ಮೊದಲ ಮುಖ್ಯ ಹಂತ ಮುಗಿಸಿದ ರಶ್ಮಿಕಾ; ಸಿದ್ಧಾರ್ಥ್​ ಜೊತೆಗಿನ ಫೋಟೋ ವೈರಲ್​​
ರಶ್ಮಿಕಾ ಮಂದಣ್ಣ, ಸಿದ್ಧಾರ್ಥ್​ ಮಲ್ಹೋತ್ರಾ
TV9 Web
| Updated By: ಮದನ್​ ಕುಮಾರ್​|

Updated on: Aug 29, 2021 | 4:34 PM

Share

ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಸಿನಿಪಯಣ ಬಾಲಿವುಡ್​ನತ್ತ ಸಾಗಿದೆ. ತಮ್ಮ ವೃತ್ತಿಜೀವನದಲ್ಲಿ ಎದುರಾದ ಹಲವಾರು ಅಡೆತಡೆಗಳನ್ನು ನಿವಾರಿಸಿಕೊಳ್ಳುತ್ತ ಮುಂದೆ ಸಾಗುತ್ತಿರುವ ಅವರು ತಮ್ಮ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ (Mission Majnu) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ವಿಶೇಷ ಎಂದರೆ ಈಗ ಅವರು ಬಾಲಿವುಡ್​ನಲ್ಲಿ ಒಂದು ಮುಖ್ಯ ಹಂತವನ್ನು ಪೂರ್ಣಗೊಳಿಸಿದ್ದಾರೆ. ಅಂದರೆ ಅವರ ಮೊದಲ ಹಿಂದಿ ಸಿನಿಮಾದ ಶೂಟಿಂಗ್​ ಮುಗಿದಿದೆ. ಯಾವುದೇ ವಿಘ್ನಗಳಿಲ್ಲದೇ ಚಿತ್ರೀಕರಣ ಮುಗಿದಿರುವುದಕ್ಕೆ ಇಡೀ ತಂಡ ಖುಷಿಯಾಗಿದೆ. ಈ ಸಿನಿಮಾದಲ್ಲಿ ‘ಶೇರ್​ಷಾ’ ಖ್ಯಾತಿಯ ನಟ ಸಿದ್ಧಾರ್ಥ್​ ಮಲ್ಹೋತ್ರಾ (Mission Majnu) ಅವರಿಗೆ ರಶ್ಮಿಕಾ ಜೋಡಿಯಾಗಿದ್ದಾರೆ. 

ದಿನದಿಂದ ದಿನಕ್ಕೆ ರಶ್ಮಿಕಾ ಅವರು ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ ತೆರೆಕಾಣಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಅಂಥವರಿಗೆಲ್ಲ ಈ ಸುದ್ದಿ ಖುಷಿ ನೀಡಿದೆ. ಶೂಟಿಂಗ್​ ಪೂರ್ಣಗೊಂಡಿರುವ ಸಂತಸಕ್ಕೆ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರು ರಶ್ಮಿಕಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ.

ಸಿದ್ಧಾರ್ಥ್​ ಮಲ್ಹೋತ್ರಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿರುವ ಈ ಫೋಟೋಗೆ, ‘ನಿಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ತುಂಬ ಖುಷಿಯಾಗಿದೆ. ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಭೇಟಿ ಆಗೋಣ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅದನ್ನು ಕಂಡು ರಶ್ಮಿಕಾ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ‘ಸಿದ್​​ ನೀವು ತುಂಬ ಚೆನ್ನಾಗಿ ನಡೆದುಕೊಂಡಿದ್ದೀರಿ. ನಿಮ್ಮೊಂದಿಗೆ ಕೆಲಸ ಮಾಡಿದ್ದು ಚೆನ್ನಾಗಿತ್ತು. ನೀವು ಅತ್ಯುತ್ತಮ ವ್ಯಕ್ತಿ. ನಾನು ಹೆಚ್ಚು ಖುಷಿಯಾಗಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರ ನಾಗಾಲೋಟ ಮುಂದುವರಿಯುತ್ತಿದೆ. ‘ಗುಡ್​ಬೈ’ ಸಿನಿಮಾದಲ್ಲಿ ಅವರು ಭಾರತೀಯ ಚಿತ್ರರಂಗದ ದಿಗ್ಗಜ ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಜೊತೆ ನಟಿಸಿರುವ ‘ಪುಷ್ಪ’ ಸಿನಿಮಾ ಈ ವರ್ಷ ಕ್ರಿಸ್​ಮಸ್​ ಹಬ್ಬಕ್ಕೆ ತೆರೆಕಾಣಲಿದೆ. ಅವರ ಕಾಲ್​ಶೀಟ್​ ಪಡೆಯಲು ಅನೇಕ ನಿರ್ಮಾಪಕ/ನಿರ್ದೇಶಕರು ರಶ್ಮಿಕಾ ಮನೆಮುಂದೆ ಕಾಯುತ್ತಿದ್ದಾರೆ. ಈ ನಡುವೆ ಅವರು ಬಿಡುವು ಮಾಡಿಕೊಂಡು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆಗೂ ಸಂಪರ್ಕದಲ್ಲಿ ಇರಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: 

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ