AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu: ಬಾಲಿವುಡ್​ನಲ್ಲಿ ಮೊದಲ ಮುಖ್ಯ ಹಂತ ಮುಗಿಸಿದ ರಶ್ಮಿಕಾ; ಸಿದ್ಧಾರ್ಥ್​ ಜೊತೆಗಿನ ಫೋಟೋ ವೈರಲ್​​

Rashmika Mandann: ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ ತೆರೆಕಾಣಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

Mission Majnu: ಬಾಲಿವುಡ್​ನಲ್ಲಿ ಮೊದಲ ಮುಖ್ಯ ಹಂತ ಮುಗಿಸಿದ ರಶ್ಮಿಕಾ; ಸಿದ್ಧಾರ್ಥ್​ ಜೊತೆಗಿನ ಫೋಟೋ ವೈರಲ್​​
ರಶ್ಮಿಕಾ ಮಂದಣ್ಣ, ಸಿದ್ಧಾರ್ಥ್​ ಮಲ್ಹೋತ್ರಾ
TV9 Web
| Edited By: |

Updated on: Aug 29, 2021 | 4:34 PM

Share

ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಸಿನಿಪಯಣ ಬಾಲಿವುಡ್​ನತ್ತ ಸಾಗಿದೆ. ತಮ್ಮ ವೃತ್ತಿಜೀವನದಲ್ಲಿ ಎದುರಾದ ಹಲವಾರು ಅಡೆತಡೆಗಳನ್ನು ನಿವಾರಿಸಿಕೊಳ್ಳುತ್ತ ಮುಂದೆ ಸಾಗುತ್ತಿರುವ ಅವರು ತಮ್ಮ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ (Mission Majnu) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ವಿಶೇಷ ಎಂದರೆ ಈಗ ಅವರು ಬಾಲಿವುಡ್​ನಲ್ಲಿ ಒಂದು ಮುಖ್ಯ ಹಂತವನ್ನು ಪೂರ್ಣಗೊಳಿಸಿದ್ದಾರೆ. ಅಂದರೆ ಅವರ ಮೊದಲ ಹಿಂದಿ ಸಿನಿಮಾದ ಶೂಟಿಂಗ್​ ಮುಗಿದಿದೆ. ಯಾವುದೇ ವಿಘ್ನಗಳಿಲ್ಲದೇ ಚಿತ್ರೀಕರಣ ಮುಗಿದಿರುವುದಕ್ಕೆ ಇಡೀ ತಂಡ ಖುಷಿಯಾಗಿದೆ. ಈ ಸಿನಿಮಾದಲ್ಲಿ ‘ಶೇರ್​ಷಾ’ ಖ್ಯಾತಿಯ ನಟ ಸಿದ್ಧಾರ್ಥ್​ ಮಲ್ಹೋತ್ರಾ (Mission Majnu) ಅವರಿಗೆ ರಶ್ಮಿಕಾ ಜೋಡಿಯಾಗಿದ್ದಾರೆ. 

ದಿನದಿಂದ ದಿನಕ್ಕೆ ರಶ್ಮಿಕಾ ಅವರು ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಪಡುತ್ತಿದ್ದಾರೆ. ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾ ‘ಮಿಷನ್​ ಮಜ್ನು’ ತೆರೆಕಾಣಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಅಂಥವರಿಗೆಲ್ಲ ಈ ಸುದ್ದಿ ಖುಷಿ ನೀಡಿದೆ. ಶೂಟಿಂಗ್​ ಪೂರ್ಣಗೊಂಡಿರುವ ಸಂತಸಕ್ಕೆ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರು ರಶ್ಮಿಕಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ.

ಸಿದ್ಧಾರ್ಥ್​ ಮಲ್ಹೋತ್ರಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿರುವ ಈ ಫೋಟೋಗೆ, ‘ನಿಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ತುಂಬ ಖುಷಿಯಾಗಿದೆ. ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಭೇಟಿ ಆಗೋಣ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅದನ್ನು ಕಂಡು ರಶ್ಮಿಕಾ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ‘ಸಿದ್​​ ನೀವು ತುಂಬ ಚೆನ್ನಾಗಿ ನಡೆದುಕೊಂಡಿದ್ದೀರಿ. ನಿಮ್ಮೊಂದಿಗೆ ಕೆಲಸ ಮಾಡಿದ್ದು ಚೆನ್ನಾಗಿತ್ತು. ನೀವು ಅತ್ಯುತ್ತಮ ವ್ಯಕ್ತಿ. ನಾನು ಹೆಚ್ಚು ಖುಷಿಯಾಗಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರ ನಾಗಾಲೋಟ ಮುಂದುವರಿಯುತ್ತಿದೆ. ‘ಗುಡ್​ಬೈ’ ಸಿನಿಮಾದಲ್ಲಿ ಅವರು ಭಾರತೀಯ ಚಿತ್ರರಂಗದ ದಿಗ್ಗಜ ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಜೊತೆ ನಟಿಸಿರುವ ‘ಪುಷ್ಪ’ ಸಿನಿಮಾ ಈ ವರ್ಷ ಕ್ರಿಸ್​ಮಸ್​ ಹಬ್ಬಕ್ಕೆ ತೆರೆಕಾಣಲಿದೆ. ಅವರ ಕಾಲ್​ಶೀಟ್​ ಪಡೆಯಲು ಅನೇಕ ನಿರ್ಮಾಪಕ/ನಿರ್ದೇಶಕರು ರಶ್ಮಿಕಾ ಮನೆಮುಂದೆ ಕಾಯುತ್ತಿದ್ದಾರೆ. ಈ ನಡುವೆ ಅವರು ಬಿಡುವು ಮಾಡಿಕೊಂಡು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆಗೂ ಸಂಪರ್ಕದಲ್ಲಿ ಇರಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: 

ಜಿಮ್​ನಲ್ಲಿ ಒಟ್ಟಾಗಿ ವರ್ಕೌಟ್​ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ; ಫೋಟೋ ವೈರಲ್

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?