AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ

ಹಿಂದಿ ಚಿತ್ರರಂಗದ ಯಾವ ನಟರ ಜೊತೆ ಕೆಲಸ ಮಾಡಲು ನೀವು ಇಷ್ಟಪಡುತ್ತೀರಿ ಎಂದು ಸುಕುಮಾರ್​ ಅವರಿಗೆ ಕೇಳಲಾಯಿತು. ಆಗ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಹೇಳಿದರು.

ಅಕ್ಷಯ್​ ಕುಮಾರ್​ ಮೇಲೆ ಕಣ್ಣಿಟ್ಟ ‘ಪುಷ್ಪ’ ನಿರ್ದೇಶಕ ಸುಕುಮಾರ್​; ಅಭಿಮಾನಿಗಳಲ್ಲಿ ಹೆಚ್ಚಿತು ನಿರೀಕ್ಷೆ
ಅಕ್ಷಯ್​ ಕುಮಾರ್, ಸುಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Jan 15, 2022 | 9:38 AM

Share

ಸುಕುಮಾರ್ (Sukumar)​ ಓರ್ವ ಯಶಸ್ವಿ ನಿರ್ದೇಶಕ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಅವರ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ (Pushpa Movie) ಸಿನಿಮಾ ಸೂಪರ್​ ಹಿಟ್​ ಆಗಿದೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿ ಈ ಚಿತ್ರ ಮುನ್ನುಗ್ಗುತ್ತಿದೆ. ಈ ಸಿನಿಮಾದ ಗೆಲುವಿನಿಂದಾಗಿ ಅಲ್ಲು ಅರ್ಜುನ್​ ಅವರ ವೃತ್ತಿಜೀವನಕ್ಕೆ ದೊಡ್ಡ ಬೂಸ್ಟ್​ ಸಿಕ್ಕಂತೆ ಆಗಿದೆ. ಹಾಗಾಗಿ ಸುಕುಮಾರ್​ ಜೊತೆ ಕೆಲಸ ಮಾಡಲು ಬೇರೆಲ್ಲ ಹೀರೋಗಳು ಕೂಡ ಕಾಯುತ್ತಿದ್ದಾರೆ. ಆದರೆ ಸುಕುಮಾರ್​ ಅವರ ಆಯ್ಕೆ ಪಟ್ಟಿಯಲ್ಲಿ ಯಾವೆಲ್ಲ ಹೀರೋಗಳು ಇದ್ದಾರೆ ಎಂಬುದು ಕುತೂಹಲದ ಪ್ರಶ್ನೆ. ಸದ್ಯದಲ್ಲೇ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ನಡುವೆ ಅಕ್ಷಯ್​ ಕುಮಾರ್​ (Akshay Kumar) ಜೊತೆ ಕೆಲಸ ಮಾಡಬೇಕು ಎಂಬ ಆಸೆಯನ್ನು ಸುಕುಮಾರ್​ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಕೇಳಿದ ಬಳಿಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ‘ಪುಷ್ಪ 2’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ನಟಿಸಬಹುದೇ ಎಂಬ ಕೌತುಕ ನಿರ್ಮಾಣ ಆಗಿದೆ.

‘ಕೆಜಿಎಫ್​’ ಚಿತ್ರತಂಡದ ಕೆಲವು ಫಾರ್ಮುಲಾಗಳನ್ನು ‘ಪುಷ್ಪ’ ಟೀಮ್​ ಫಾಲೋ ಮಾಡಿದೆ ಎಂಬ ಮಾತು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ. ‘ಕೆಜಿಎಫ್​: ಚಾಪ್ಟರ್​ 1’ ಸೂಪರ್​ ಹಿಟ್​ ಆದ ಬಳಿಕ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ಬಾಲಿವುಡ್​ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಯಿತು. ಹಾಗೆಯೇ, ‘ಪುಷ್ಪ 1’ ಗೆಲುವಿನ ಬಳಿಕ ‘ಪುಷ್ಪ 2’ ಸಿನಿಮಾದಲ್ಲಿ ಹಿಂದಿ ನಟ-ನಟಿಯರು ಅಭಿನಯಿಸುವ ಸಾಧ್ಯತೆಯ ಬಗ್ಗೆ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಸುಕುಮಾರ್​ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಪ್ರಸ್ತಾಪಿಸುವ ಮೂಲಕ ನಿರೀಕ್ಷೆ ಮೂಡಿಸಿದ್ದಾರೆ.

ಪಿಂಕ್​ವಿಲ್ಲಾ ನಡೆಸಿದ ಸಂದರ್ಶನದಲ್ಲಿ ಸುಕುಮಾರ್​ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ಹಿಂದಿ ಚಿತ್ರರಂಗದ ಯಾವ ನಟರ ಜೊತೆ ಕೆಲಸ ಮಾಡಲು ನೀವು ಇಷ್ಟಪಡುತ್ತೀರಿ ಎಂದು ಕೇಳಲಾಯಿತು. ಆಗ ಅವರು ಅಕ್ಷಯ್​ ಕುಮಾರ್​ ಹೆಸರನ್ನು ಹೇಳಿದರು. ‘ಯಾವ ನಟ ಬೇಕು ಎಂಬುದನ್ನು ಸ್ಕ್ರಿಪ್ಟ್​ ನಿರ್ಧಾರ ಮಾಡುತ್ತದೆ. ಹಾಗಾಗಿ ನಾನು ಬಾಲಿವುಡ್​ನ ಯಾವ ನಟನ ಜೊತೆ ಕೆಲಸ ಮಾಡಬೇಕು ಅಂತ ಹೇಳಲು ಆಗುವುದಿಲ್ಲ. ಆದರೆ ಅಕ್ಷಯ್​ ಕುಮಾರ್​ ಅವರ ಜೊತೆ ನಾನು ಒಮ್ಮೆ ಕೆಲಸ ಮಾಡಬೇಕು’ ಎಂದು ಸುಕುಮಾರ್​ ಹೇಳಿದ್ದಾರೆ. ಇದಕ್ಕೆ ಅಕ್ಷಯ್​ ಕುಮಾರ್​ ಕಡೆಯಿಂದ ಯಾವ ರೀತಿ ಪ್ರತಿಕ್ರಿಯೆ ಬರಬಹುದು ಎಂದು ಅಭಿಮಾನಿಗಳು ಕಾದಿದ್ದಾರೆ.

ಕಳೆದ ವರ್ಷ ಅಕ್ಷಯ್​ ಕುಮಾರ್​ ನಟಿಸಿದ್ದ ‘ಸೂಯರ್ವಂಶಿ’ ಚಿತ್ರ ಸೂಪರ್​ ಹಿಟ್​ ಆಯಿತು. ದಿನದಿಂದ ದಿನಕ್ಕೆ​ ಅವರ ಸಂಭಾವನೆ ಹೆಚ್ಚುತ್ತಿದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅವರು ಬರೋಬ್ಬರಿ 170 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರೆ ಎಂಬ ಸುದ್ದಿ ಹರಡಿದೆ. ಅಕ್ಕಿ ಕೈಯಲ್ಲಿ ಈಗ ಅನೇಕ ಸಿನಿಮಾಗಳಿವೆ.

ಇದನ್ನೂ ಓದಿ:

ದೇವಸ್ಥಾನದ ಪೂಜೆಯಲ್ಲೂ ‘ಪುಷ್ಪ’ ಚಿತ್ರದ ‘ಸಾಮಿ ಸಾಮಿ’ ಹಾಡು! ಇಲ್ಲಿದೆ ವೈರಲ್​ ವಿಡಿಯೋ

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ